Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಶತಾಯುಷಿಯ ಹೋರಾಟದ ಬದುಕು – ಇಲ್ಲಿದೆ ಹೆಚ್.ಎಸ್ ದೊರೆಸ್ವಾಮಿ ಜೀವನದ ಪ್ರಮುಖ ಘಟ್ಟಗಳು

Secular TVbySecular TV
A A
Reading Time: 1 min read
ಶತಾಯುಷಿಯ ಹೋರಾಟದ ಬದುಕು – ಇಲ್ಲಿದೆ ಹೆಚ್.ಎಸ್ ದೊರೆಸ್ವಾಮಿ ಜೀವನದ ಪ್ರಮುಖ ಘಟ್ಟಗಳು
0
SHARES
Share to WhatsappShare on FacebookShare on Twitter

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ಸಾಮಾಜಿಕ ಕಾರ್ಯಕರ್ತ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇತ್ತಿಚೆಗೆ ಕೊರೊನಾದಿಂದ ಗುಣಮುಖವಾಗಿದ್ದ ಅವರು ಇಂದು ಹೃದಯಾಘಾತದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶತಾಯುಷಿ ಹೆಚ್.ಎಸ್ ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟದ ಬಳಿಕ ಸಾಮಾಜಿಕ ಕಾರ್ಯಕರ್ತರಾಗಿ ಬದಲಾಗಿದ್ದರು. ಪತ್ರಕರ್ತರಾಗಿ ಸಾಮಾಜಿಕ ಹೋರಾಟಗಾರರಾಗಿ ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ಪಕ್ಷ ಭೇಧವಿಲ್ಲದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ 104ರ ಹರೆಯದಲ್ಲೂ ಎಲ್ಲರಿಗೂ ಮಾದರಿಯಾಗಿದ್ದರು.

ಇಳಿ ವಯಸ್ಸಿ‌ಲ್ಲೂ ಪ್ರತಿಭಟನೆ ನಡೆಸುತ್ತಿದ್ದು ಹೆಚ್.ಎಸ್ ದೊರೆಸ್ವಾಮಿ ಅವರ ಹೋರಾಟದ ಬದುಕು ಸಾಕಷ್ಟು ರೋಚಕವಾಗಿದೆ. ಮಹಾತ್ಮಾ ಗಾಂಧಿಯಿಂದ ಪ್ರೇರಣೆ ಪಡೆದ ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ ಜೈಲು ಸೇರಿದ್ದರು‌.

ಎಚ್.ಎಸ್.ದೊರೆಸ್ವಾಮಿ ಅವರು ಏಪ್ರಿಲ್ 10, 1918ರಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಅವರು ಮಹಾತ್ಮ ಗಾಂಧಿಯ “ಮೈ ಅರ್ಲಿ ಲೈಫ್” ಪುಸ್ತಕವನ್ನು ಓದಿ ಪ್ರೇರಣೆಗೊಂಡರು. ಆ ಬಳಿಕ ಅವರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಸೇರಲು ತಿರ್ಮಾನಿಸಿದರು. ಬೆಂಗಳೂರಿನ ಕಬ್ಬನ್ ಪೇಟೆ ಬಳಿ ಬನಪ್ಪ ಬೃಂದಾವನದಲ್ಲಿ ನಡೆಯುತ್ತಿದ್ದ ಸ್ವಾತಂತ್ರ್ಯ ಜಾಗೃತಿ ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಭಾಗಿಯಾಗಿದ್ದರು. ಅಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆ ಮಾಡಿದ್ದರು. ಈ ವೇಳೆ ದೊರೆಸ್ವಾಮಿ ಮೊದಲ ಬಾರಿ ಬಂಧನವಾಗಿದ್ದರು. ಇದಾದ ಮರು ದಿನವೇ ವಿದ್ಯಾರ್ಥಿಗಳು ಮುಷ್ಕರ ಕರೆಯುವ ಮೂಲಕ ಅವರು ಅಧಿಕೃತವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು.

1942 ರ ಹೊತ್ತಿಗೆ, ದೊರೆಸ್ವಾಮಿ ಅವರು ತಮ್ಮ ಬಿ.ಎಸ್.ಸಿ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಉಪನ್ಯಾಸಕರಾಗಿ ಕಾಲೇಜಿನಲ್ಲಿ ಸೇರಿಕೊಂಡರು. ಅದೇ ವರ್ಷ ಆಗಸ್ಟ್ ನಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳುವಳಿಯಲ್ಲಿ ಅವರು ಭಾಗಿಯಾದರು.
ಅವರ ಈ ಹೋರಾಟದಲ್ಲಿ ಅವರ ಹಿರಿಯ ಸಹೋದರ ಎಚ್.ಎಸ್. ಸೀತಾರಾಮ್, ಸರ್‍ದಾರ್ ವೆಂಕಟರಾಮಯ್ಯ, ಏ.ಜಿ. ರಾಮಚಂದ್ರರಾವ್ ಮುಂತಾದವರು ಮಾರ್ಗದರ್ಶಕರಾಗಿದ್ದರು. ಪತ್ರಕರ್ತರಾಗಿಯೂ ದೊರೆಸ್ವಾಮಿ ಅವರು ಕಾರ್ಯನಿರ್ವಹಿಸಿ, ಬ್ರಿಟಿಷರ ವಿರುದ್ಧ ತಮ್ಮ ಪತ್ರಿಕೆಯನ್ನು ಒಂದು ಪ್ರಬಲ ಅಸ್ತ್ರವಾಗಿ ಉಪಯೋಗಿಸಿಕೊಂಡರು.

ಹೋರಾಟ ಸಂಧರ್ಭದಲ್ಲಿ ದೊರೆಸ್ವಾಮಿ ಅವರು ಟೈಮ್ ಬಾಂಬ್ ಸರಬರಾಜು ಮಾಡುತ್ತಿದ್ದರು. ಈ ಟೈಮ್ ಬಾಂಬಿನಿಂದ ಜೀವಹಾನಿ ಆಗುತ್ತಿರಲಿಲ್ಲ ಆದರೆ ಈ ಟೈಮ್ ಬಾಂಬ್ ಅನ್ನು ಇಲಿಗಳ ಬಾಲಕ್ಕೆ ಕಟ್ಟಿ ದಾಖಲೆಗಳನ್ನು ನಾಶಪಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಲ್ಲಿ ತೂರಿಬಿಡುತ್ತಿದ್ದರು. ಈ ಸಂಧರ್ಭದಲ್ಲಿ ಒಮ್ಮೆ ಪೋಲೀಸರ ಕೈಗೆ ಸಿಕ್ಕು ೧೪ ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದರು.

ಕರ್ನಾಟಕ ಏಕೀಕರಣ ಹೋರಾಟದಲ್ಲಿ ಭಾಗಿಯಾಗಿದ್ದ ದೊರೆಸ್ವಾಮಿ ಅವರು, ಮುಂದೆ ಇಂದಿರಾಗಾಂಧಿ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದರು.

ಕಳೆದ ದಶಕದಲ್ಲಿ ಲಕ್ಷಾಂತರ ಎಕರೆ ಭೂಮಿ, ಭೂಗಳ್ಳರ ಹಗರಣಕ್ಕೆ ಸಿಲುಕಿಹೊಗುವುದನ್ನು ಹೋರಾಡಿ ತಪ್ಪಿಸಿದ್ದಾರೆ. ಹಳ್ಳಿಗಳನ್ನು ಕಸದ ಕೊಂಪೆಗಳನ್ನು ಮಾಡಿ ಕಸದ ಪರ್ವತ ರಾಶಿಗಳಿಂದ ತುಂಬಿ, ಸುತ್ತಮುತ್ತಲಿನ ಜನ ಊಹಿಸಿಕೊಳ್ಳಲಾಗದ ನರಕದ ಬಾಳನ್ನು ಅನುಭವಿಸಬೇಕಾಗಿದ್ದ ಅನಿವಾರ್ಯ ಸಂದರ್ಭದಲ್ಲಿ, ತಾವೇ ಅಲ್ಲಿನ ಜನರ ನೇತೃತ್ವ ವಹಿಸಿ ಬೆಳೆಯುತ್ತಿದ್ದ ಕಸದರಾಶಿಗೆ ಇಂದು ತಡೆ ಉಂಟಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಶತಾಯಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇನ್ನಿಲ್ಲ

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ಆಟೋ, ಟ್ಯಾಕ್ಸಿ , ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ – ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಆಟೋ, ಟ್ಯಾಕ್ಸಿ , ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ - ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಶತಾಯುಷಿ ದೊರೆಸ್ವಾಮಿಗೆ ಸಿದ್ದರಾಮಯ್ಯ ಅಕ್ಷರ ನಮನ

ಶತಾಯುಷಿ ದೊರೆಸ್ವಾಮಿಗೆ ಸಿದ್ದರಾಮಯ್ಯ ಅಕ್ಷರ ನಮನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist