Secular TV
Friday, August 19, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಶತಾಯುಷಿ ದೊರೆಸ್ವಾಮಿಗೆ ಸಿದ್ದರಾಮಯ್ಯ ಅಕ್ಷರ ನಮನ

Secular TVbySecular TV
A A
Reading Time: 1 min read
ಶತಾಯುಷಿ ದೊರೆಸ್ವಾಮಿಗೆ ಸಿದ್ದರಾಮಯ್ಯ ಅಕ್ಷರ ನಮನ
Secular Tv

Secular Tv

3.5k videos , 6.6M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನಪುಂಜವಾಗಿದ್ದರು. ಕೊನೆ ಉಸಿರಿನವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನುಕಳೆದುಕೊಂಡ ದು:ಖದಲ್ಲಿದ್ದೇನೆ.
ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿ ತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.


ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸ ಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು. ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

RECOMMENDED

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
Top Stories

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!
Entertainment

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
Top Stories
Just-In

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್
Crime

Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

August 18, 2022
Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ
Just-In

Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ

August 18, 2022
MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!
Just-In

MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!

August 18, 2022
Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್
India

Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್

August 18, 2022
Kamlihula Movie : ಕಂಬ್ಳಿಹುಳ ಸಿನಿಮಾದ  ಫಸ್ಟ್ ಸಾಂಗ್ಸ್  ರಿಲೀಸ್…!
Uncategorized

Kamlihula Movie : ಕಂಬ್ಳಿಹುಳ ಸಿನಿಮಾದ ಫಸ್ಟ್ ಸಾಂಗ್ಸ್ ರಿಲೀಸ್…!

August 18, 2022
Siddaramaiah : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲು ಯತ್ನ..!
Just-In

Siddaramaiah : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲು ಯತ್ನ..!

August 18, 2022
Next Post
ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ರು ‌ಕೊರೊನಾ ವಾರಿಯರ್ ‌ಗೆ ಸಹಾಯ ಮಾಡದ ಬಿಜೆಪಿ ಶಾಸಕ

ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ರು ‌ಕೊರೊನಾ ವಾರಿಯರ್ ‌ಗೆ ಸಹಾಯ ಮಾಡದ ಬಿಜೆಪಿ ಶಾಸಕ

ರಾಜ್ಯಪಾಲರನ್ನು ಭೇಟಿಯಾಗಿ ಕೋವಿಡ್‌ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿಎಂ

ರಾಜ್ಯಪಾಲರನ್ನು ಭೇಟಿಯಾಗಿ ಕೋವಿಡ್‌ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿಎಂ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist