Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಎಂಟು‌ ಸಾವಿರ ಶಿಕ್ಷಕರಿಗೆ ಹಿಂಬಡ್ತಿ- ಯಾವುದೇ ಶಿಕ್ಷಕರು‌ ಆತಂಕ ಪಡಬೇಕಿಲ್ಲ-ಎಸ್.ಸುರೇಶ್ ಕುಮಾರ್

Secular TVbySecular TV
A A
Reading Time: 1 min read
ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ-ಉಪನ್ಯಾಸಕರಿಗೆ ವರ್ಕ್  ಫ್ರಂ ಹೋಂ
0
SHARES
Share to WhatsappShare on FacebookShare on Twitter

ಇಂದಿನ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಎಂಟು ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಹಿಂಬಡ್ತಿಯೆಂಬ ಸುದ್ದಿಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶವನ್ನು ಇನ್ನಷ್ಟು ವಿಸ್ತೃತವಾಗಿ ಗಮನಿಸಬೇಕಿದೆ ಎಂದು ಶಿಕ್ಷಣ‌ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೇಳಿಕೆ‌ಯನ್ನು ಬಿಡುಗಡೆ‌ ಮಾಡಿರುವ ಸಚಿವರು, ನ್ಯಾಯಾಲಯದ ತೀರ್ಪನ್ನು ಇನ್ನಷ್ಟು ತಾಂತ್ರಿಕವಾಗಿ ಆಲೋಚಿಸಬೇಕಾದ ಅನಿವಾರ್ಯತೆ ಇದ್ದು ಈ ಹಂತದಲ್ಲಿ ಯಾವುದೇ ಶಿಕ್ಷಕರೂ ಅನಗತ್ಯ ಗೊಂದಲಕ್ಕೀಡಾಗುವುದು ಬೇಡ ಎಂದಿದ್ದಾರೆ.

ಪ್ರೌಢಶಾಲಾ ಶಿಕ್ಷಕರ ವೃಂದ ನಿಯಮಗಳಂತೆ ನೇರ ನೇಮಕಾತಿಯ ಜೊತೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಬಡ್ತಿಗೆ ನಿಗದಿ ಇರುವ ಅನುಪಾತದಂತೆ ಬಡ್ತಿ ಮುಖಾಂತರದಲ್ಲಿಯೂ ಪ್ರೌಢಶಾಲಾ ಶಿಕ್ಷಕ ಹುದ್ದೆಗಳನ್ನು ತುಂಬಲು ಅವಕಾಶವಿದೆ.

ಈವರೆವಿಗೂ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಎಂದರೆ ಏಕ ರೂಪದಲ್ಲಿ ಇದ್ದ 1 ರಿಂದ 7 ನೇ ತರಗತಿ ಶಿಕ್ಷಕ ವೃಂದವಾಗಿತ್ತು. ರಾಷ್ಟ್ರ ವ್ಯಾಪಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕ ಹುದ್ದೆಗೆ ಇರಬೇಕಾದ ವಿದ್ಯಾರ್ಹತೆಯನ್ನು ಶಾಸನಬದ್ಧ ಸಂಸ್ಥೆಯಾದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು ( ಎನ್.ಸಿ.ಟಿ.ಇ) ನಿಯಮಿಸುವ ಅಧಿಕಾರವನ್ನು ಹೊಂದಿದ್ದು ಸದರಿ ನಿಯಮಗಳಂತೆ ಮತ್ತು ಶೈಕ್ಷಣಿಕ ಗುಣಮಟ್ಟದ ಹಿತದೃಷ್ಟಿಯಿಂದ 6ರಿಂದ 8ನೇ ತರಗತಿಗಳಿಗೆ ಪ್ರತ್ಯೇಕವಾದ ಪದವಿ ವಿದ್ಯಾರ್ಹತೆಯುಳ್ಳ ಶಿಕ್ಷಕ ವೃಂದವನ್ನು ಹೊಂದಬೇಕಾಗಿರುತ್ತದೆ. ಅದರಂತೆ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ನಿಯಮಗಳನ್ನು ಪರಿಷ್ಕರಿಸಿ ಪ್ರಾಥಮಿಕ ಶಿಕ್ಷಕ 1 ರಿಂದ 7ನೇ ತರಗತಿಯ ಒಟ್ಟಾರೆ 188000 ವೃಂದ ಬಲದಲ್ಲಿಯೇ ಕಡಿತಗೊಳಿಸಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಅಗತ್ಯವಿರುವಂತೆ ಒಟ್ಟಾರೆ 52000 ಬಲದ 6 ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದವನ್ನು ಅಸ್ತಿತ್ವಕ್ಕೆ ತರಲಾಗಿದೆ. ಆದರೆ ಮೂಲ ವೃಂದದಲ್ಲಿಯೂ ಪದವೀಧರ ವಿದ್ಯಾರ್ಹತೆಯುಳ್ಳ ಶಿಕ್ಷಕರು ಇದ್ದು ಸದರಿಯವರಿಗೆ 6 ರಿಂದ 8ನೇ ತರಗತಿ ವೃಂದಕ್ಕೆ ಪರೀಕ್ಷೆ ಮುಖಾಂತರದಲ್ಲಿ ಸೇರ್ಪಡೆಗೊಳ್ಳಲು ಸದರಿ ನಿಯಮಗಳಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

ಅದೇ ರೀತಿಯಲ್ಲಿಯೇ ಪ್ರೌಢಶಾಲಾ ಶಿಕ್ಷಕ ವೃಂದಕ್ಕೆ ಇರುವ ಬಡ್ತಿ ನಿಯಮಗಳಿಗೂ 1 ರಿಂದ 5 ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ಮತ್ತು 6 ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದವರಿಗೆ ಆಯಾ ವೃಂದ ಬಲದ ಆಧಾರದಲ್ಲಿ ಬಡ್ತಿ ಪ್ರಮಾಣವನ್ನು ನಿರ್ಧರಿಸಿ ನಿಯಮಿಸಬೇಕಾಗಿದೆ. ಈ ಪ್ರಕ್ರಿಯೆ ಜಾರಿಯಲ್ಲಿರುವ ಸಂದರ್ಭದಲ್ಲಿ ಮೇಲಿನ ನ್ಯಾಯಾಲಯ ಆದೇಶ ಹೊರಬಿದ್ದಿದೆ.

ಸದರಿ ನ್ಯಾಯಾಲಯ ಆದೇಶದಲ್ಲಿಯೂ ವೃಂದ ನಿಯಮಗಳಿಗೆ ತಿದ್ದುಪಡಿ ತಂದು 1ರಿಂದ 5ನೇ ತರಗತಿ ವೃಂದದಲ್ಲಿ ಅರ್ಹರಿಗೆ ಬಡ್ತಿಗೆ ಅವಕಾಶ ನೀಡಬಹುದಾಗಿದೆ ಎಂಬುದಾಗಿ ಇದೆ. ಜಾರಿಯಲ್ಲಿರುವ ವೃಂದ ನಿಯಮಗಳಲ್ಲಿ 1ರಿಂದ 5 ಮತ್ತು 6 ರಿಂದ 8 ಎಂಬುದನ್ನು ಪ್ರಸ್ತಾಪಿಸಿರುವುದಿಲ್ಲವಾದ್ದರಿಂದ 6 ರಿಂದ 8 ವೃಂದದಿಂದ ಬಡ್ತಿ ಸೂಕ್ತ ಎಂಬುದಾಗಿ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಹಾಗಾಗಿ 1ರಿಂದ 5ನೇ ತರಗತಿ ವೃಂದ ಬಡ್ತಿಗಳ ಬಗ್ಗೆ ಪ್ರಶ್ನೆ ಎತ್ತಿದೆ.

ಇದು ತಾಂತ್ರಿಕವಾದ ವಿಷಯವಾಗಿದ್ದು 1967ರಿಂದಲೂ ವೃಂದ ನಿಯಮಗಳು ಜಾರಿ ಇದ್ದು 2017ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಎಂದರೆ ಪೂರ್ವದಲ್ಲಿ 1ರಿಂದ 7ನೇ ತರಗತಿ ಶಿಕ್ಷಕ ವೃಂದ ಮತ್ತು ಇದೀಗ 1ರಿಂದ 5ನೇ ತರಗತಿ ಶಿಕ್ಷಕ ವೃಂದ ಎಂದು ನಾಮಾಂತನಗೊಂಡ ವೃಂದವೇ ಆಗಿದೆ. ಪ್ರಯುಕ್ತ, 2017ರ ನಂತರದಲ್ಲಿ ಈ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಎಲ್ಲ ಕಾಲದ ಬಡ್ತಿಗಳಿಗೆ ಇದು ಅನ್ವಯವಾಗುವುದಿಲ್ಲ ಎಂಬುದನ್ನು ಗಮನಿಸಬೇಕಾಗಿದೆ.

ಪ್ರಯುಕ್ತ, ಈ ಬಗ್ಗೆ ತುರ್ತಾಗಿ ಪರಿಶೀಲಿಸಿ ಕಾನೂನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ನ್ಯಾಯಾಲಯದಲ್ಲಿಯೂ ಅಪೀಲು ಸಲ್ಲಿಸಿ  ಈ ವಿಷಯವನ್ನು   ಬಗೆಹರಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಶೀರ್ಷಿಕೆಗಳಿಂದ ಯಾವ ಶಿಕ್ಷಕರೂ ಆತಂಕ ಪಡಬೇಕಾಗಿಲ್ಲ ಎಂದು ಸಚಿವ ಸುರೇಶ್‌ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಹಳ್ಳಿಗಳಿಗೂ ಹಬ್ಬಿದ ಡೆಡ್ಲಿ ವೈರಸ್ – 9 ರಾಜ್ಯಗಳ 46 ಡಿಸಿಗಳ ಜೊತೆ ಇಂದು ಮೋದಿ ಸಭೆ

ಮೋದಿ ಸರ್ಕಾರ ರಚನೆಯಾಗಿ ಇಂದಿಗೆ ಏಳು ವರ್ಷ

Bengaluru Gang Rape: ಬೆಚ್ಚಿಬೀಳಿಸುತ್ತೆ ಕಿರಾತಕರ ನೀಚ ಕೃತ್ಯ

ಬೆಂಗಳೂರು ಗ್ಯಾಂಗ್‍ರೇಪ್ - ಸಂತ್ರಸ್ಥೆ ಹೇಳಿದ್ದೇನು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist