ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದಾಗಿದ್ದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ಧನ್ಯವಾದ ಸಲ್ಲಿಸಿದೆ.
ನಿನ್ನೆ ಪ್ರಧಾನಿಗಳೇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಘೋಷಣೆ ಮಾಡಿದ್ದರು. ಮಕ್ಕಳ ಆರೋಗ್ಯ ದೃಷ್ಟಿಯಿಂದ ಪರೀಕ್ಷೆ ರದ್ದುಗೊಳಿಸುತ್ತಿರುವ ಬಗ್ಗೆ ಹೇಳಿದ್ದರು. ಈಗ ಪರೀಕ್ಷೆ ರದ್ದು ಮಾಡಿದ್ದಕ್ಕೆ ಬಿಜೆಪಿ ಪ್ರಧಾನಿಗಳಿಗೆ ಕ್ರೆಡಿಟ್ ನೀಡುತ್ತಿದ್ರೆ, ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರಿಗೆ ನೀಡುತ್ತಿದೆ.
I have written to the Minister of Education summarising numerous suggestions I received from students, parents and teachers regarding the 12th standard CBSE exams. Their voice must be heard. pic.twitter.com/NIj4Jly0Hv
— Priyanka Gandhi Vadra (@priyankagandhi) May 31, 2021
ಕೊರೊನಾ ಎರಡನೇ ಅಲೆ ಅಪಾಯಕಾರಿಯಾಗಿದ್ದು, ಸಿಬಿಎಸ್ಇ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಅವರಿಗೆ ಪ್ರಿಯಾಂಕಾ ಗಾಂಧಿ ಪತ್ರ ಬರೆದಿದ್ದರು. ಇನ್ನು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸೋಶಿಯಲ್ ಮೀಡಿಯಾದಲ್ಲಿ ಪರೀಕ್ಷೆ ರದ್ದು ಮಾಡಬೇಕೆಂದು ಆಗ್ರಹಿಸಿದ್ದರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಪರೀಕ್ಷೆ ರದ್ದುಗೊಳಿಸೋದರ ಕುರಿತು ಮಾತನಾಡಿದ್ದರು.
Thankyou Priyanka Gandhi ji for consistently raising the voice of students.
— UP Congress (@INCUttarPradesh) June 1, 2021
ಪರೀಕ್ಷೆ ರದ್ದಗೊಳ್ಳುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವರಿಗೆ ಪರೀಕ್ಷೆಯ ರದ್ದು ಮಾಡೋದರ ಕುರಿತು ಸುದೀರ್ಘವಾಗಿ ಪತ್ರ ಬರೆಯಲಾಗಿತ್ತು. ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಪೋಷಕರು ಧ್ವನಿಯನ್ನು ಪತ್ರದ ಮೂಲಕ ಕೇಂದ್ರಕ್ಕೆ ತಲುಪಿಸಲಾಗಿತ್ತು. ನಮ್ಮ ಧ್ವನಿ ಕೇಳಿದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.