Secular TV
Saturday, August 13, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಹೋಟೆಲ್, ರೆಸಾರ್ಟ್ ಗಳ ನೆರವಿಗೆ ಸರ್ಕಾರ ಮುಂದಾಗಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Secular TVbySecular TV
A A
Reading Time: 1 min read
ಹೋಟೆಲ್, ರೆಸಾರ್ಟ್ ಗಳ ನೆರವಿಗೆ ಸರ್ಕಾರ ಮುಂದಾಗಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
Secular Tv

Secular Tv

3.4k videos , 6.0M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

  • ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿ

ಬೆಂಗಳೂರು : ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದ ಮುಖ್ಯಾಂಶಗಳು ಹೀಗಿದೆ. ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ.

ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಿಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ.

ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್ ಗಳು, ಡೆಕೊರೇಟರ್ ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ.

ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ. ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂಗಳ   ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ.

ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂಗಳು ಮಾತ್ರ.  ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ.

ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10000 ರೂಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು.

ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

RECOMMENDED

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!
Entertainment

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ
Just-In

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!
Crime

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ
India

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?
Entertainment

Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?

August 13, 2022
Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!
Just-In

Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!

August 13, 2022
Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ
Uncategorized

Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ

August 12, 2022
MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ
Just-In

MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ

August 12, 2022
Next Post
ರಾಜ್ಯಪಾಲರನ್ನು ಭೇಟಿಯಾಗಿ ಕೋವಿಡ್‌ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿಎಂ

ಜುಲೈ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿ ವಿತರಣೆಗೆ ಮುಖ್ಯಮಂತ್ರಿ ಚಾಲನೆ

1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿ ವಿತರಣೆಗೆ ಮುಖ್ಯಮಂತ್ರಿ ಚಾಲನೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist