Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಬಸವರಾಜ್ ಬೊಮ್ಮಾಯಿಯನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ಯಾಕೆ ಹೈಕಮಾಂಡ್

Secular TVbySecular TV
A A
Reading Time: 2 mins read
ಬಸವರಾಜ್ ಬೊಮ್ಮಾಯಿಯನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ಯಾಕೆ ಹೈಕಮಾಂಡ್
0
SHARES
Share to WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಸೊನ್ನೆಯಿಂದ ನೂರರ ಗಡಿ ದಾಟಿಸಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ಸಲ್ಲಬೇಕು. ಬಿ.ಎಸ್‌ ಯಡಿಯೂರಪ್ಪ ರಾಜೀನಾಮೆ ಬಳಿಕ ಆ ಸ್ಥಾನ ತುಂಬುವ ವ್ಯಕ್ತಿ ಯಾರು? ಆ ವರ್ಚಸ್ಸು ಮತ್ತು ಸಾಮರ್ಥ್ಯಯಾರಿಗಿದೆ ಎಂಬುದರ ಬಗ್ಗೆ ರಾಜ್ಯದ ಜನರಲ್ಲಿ ಸಾಕಷ್ಟು ಚರ್ಚೆಯಾಗಿತ್ತು.

ಬಸವರಾಜ್ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ

ಮುಂದಿನ ಸಿಎಂ ಯಾರು ಎಂಬ ಚರ್ಚೆ ಮುನ್ನಲೆಗೆ ಬಂದಾಗ ಸಿಎಂ ರೇಸ್‌ನಲ್ಲಿ ಘಟಾನುಘಟಿ ನಾಯಕರುಗಳ ಹೆಸರು ಕೇಳಿಬಂದಿತ್ತು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಶಿವಕುಮಾರ್‌ ಉದಾಸಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ ಬೆಲ್ಲದ್ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೆಸರು ಅಗ್ರಪಂಥಿಯಲ್ಲಿದ್ದವು. ಆದರೆ ಇವರಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದು ಸಾಕಷ್ಟು ಕುತೂಹಲದ ಸಂಗತಿಯಾಗಿತ್ತು.

ಯಡಿಯೂರಪ್ಪ ಬಳಿಕ ಮುಖ್ಯಮಂತ್ರಿ ಪಟ್ಟಕಟ್ಟುವುದು ಹೈಕಮಾಂಡ್ ಸುಲಭದ ಕೆಲಸ ಏನೂ ಆಗಿರಲಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ನಿಭಾಯಿಸುವುದು, ಒಟ್ಟಾಗಿ ಕೊಂಡಯ್ಯೊವುದು ಜೊತೆಗೆ ಚುನಾವಣೆ ದೃಷ್ಟಿಯಿಂದ ಉತ್ತಮ ಆಡಳಿತ ನೀಡುವ ವ್ಯಕ್ತಿಯನ್ನು ವರಿಷ್ಠರು ಆಯ್ಕೆ ಮಾಡಬೇಕಿತ್ತು. ಇದರ ಜೊತಗೆ ಮುಂದಿನ ಸಿಎಂ ಲಿಂಗಾಯತರನ್ನು ಮಾಡಬೇಕೊ ಅಥಾವ ಲಿಂಗಾಯತೇರ ಸಮುದಾಯವನ್ನು ಮಾಡಬೇಕೊ ಅನ್ನೊ ಗೊಂದಲ ಇತ್ತು. ಇದಕ್ಕಾಗಿ ಹೈಕಮಾಂಡ್ ಸಾಕಷ್ಟು ಅಳೆದು ತೋಗಿ ನಿರ್ಧಾರ ತೆಗೆದುಕೊಂಡಿದೆ.

  • ಬಸವರಾಜ ಬೊಮ್ಮಾಯಿ

ಲಿಂಗಾಯತರ ಪೈಕಿ ನಾಲ್ಕು ಹೆಸರುಗಳು ಹೈಕಮಾಂಡ್ ಮುಂದೆಗೆ ಚರ್ಚೆಗೆ ಬಂದಿತ್ತು. ಶಿವಕುಮಾರ್ ಉದಾಸಿ, ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ ಮತ್ತು ಬಸವರಾಜ್ ಬೊಮ್ಮಾಯಿ ಹೆಸರು ಕೇಳಿ ಬಂದಿತ್ತು. ಬಳಿಕ ಸಂಸದರಿಗೆ ಪಟ್ಟ ಕಟ್ಟುವುದು ಬೇಡ ಅಂದುಕೊಂಡ ಹೈಕಮಾಂಡ್ ಮೂವರು ನಾಯಕರ ಹೆಸರು ಅಂತಿಮ ರೌಂಡ್ ಗೆ ತೆಗೆದುಕೊಂಡಿತ್ತು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಈ ಪೈಕಿ ಭ್ರಷ್ಟಾಚಾರ ಆರೋಪ ಸೇರಿ ಬೇರೆ ಬೇರೆ ವಿವಾದಗಳಲ್ಲಿ ಸಿಲುಕಿದ್ದ ಮುರುಗೇಶ್ ನಿರಾಣಿ ಆರ್‌ಎಸ್ಎಸ್ ಬೆಂಬಲ ನೀಡದ ಹಿನ್ನಲೆ ಅವರು ರೇಸ್‌ನಿಂದ ಹೊರ ಬಿದ್ದರು. ಅಂತಿಮವಾಗಿ ಅರವಿಂದ್ ಬೆಲ್ಲದ್ ಮತ್ತು ಬಸವರಾಜ್ ಬೊಮ್ಮಾಯಿ ನಡುವೆ ಪೈಪೋಟಿ ಹೆಚ್ಚಾಯಿತು. ಈ ಪೈಕಿ ಬೊಮ್ಮಾಯಿಗೆ ಹೈಕಮಾಂಡ್ ಮಣೆ ಹಾಕಿತು.

ಇದರ ಜೊತೆಗೆ ರಾಜ್ಯದಲ್ಲಿರುವಂತ ಆಡಳಿತಾತ್ಮಕ, ರಾಜಕೀಯ ಹಾಗೂ ಆರ್ಥೀಕ ಸಮಸ್ಯೆಗಳನ್ನು ನಿಭಾಯಿಸುವ ಸೂಕ್ತ ನಾಯಕ ಯಾರು ಎಂಬ ಗೊಂದಲವು ಹೈಕಮಾಂಡ್ ನಾಯಕರಲ್ಲಿತ್ತು. ಅಲ್ಲದೆ, ಲಿಂಗಾಯತ ನಾಯಕರನ್ನು ಆಯ್ಕೆ ಮಾಡಬೇಕಾ? ಅಥವಾ ಲಿಂಗಾಯತಯೇತರ ನಾಯಕರನ್ನು ಆಯ್ಕೆ ಮಾಡಬೇಕಾ ಎಂಬ ಚರ್ಚೆಯೂ ಹೈಕಮಾಂಡ್ ನಾಯಕರಲ್ಲಿತ್ತು. ಅಂತಿಮವಾಗಿ ಲಿಂಗಾಯತ ನಾಯಕರನ್ನೆ ಆಯ್ಕೆ ಮಾಡಬೇಕು ಎಂದು ನಿರ್ಧರಿಸಲಾಯಿತು.

ಬಸವರಾಜು ಬೊಮ್ಮಾಯಿ ಆಯ್ಕೆಗೆ ಅಭಿಮಾನಿಗಳ ಸಂತಸ

ಈ ಪೈಕಿ ಅರವಿಂದ್‌ ಬೆಲ್ಲದ್, ಶಿವಕೂಮರ್ ಉದಾಸಿ, ಮುರಗೇಶ್ ನಿರಾಣಿ ಹಾಗೂ ಬಸವರಾಜ್‌ ಬೊಮ್ಮಾಯಿ ಹೆಸರುಗಳು
ಬ ಬೆಲ್ಲದ್‌. ಉದಾಸಿ, ನಿರಾಣಿ ಹೆಸರುಗಳು ಫೈನಲ್‌ ಹಂತಕ್ಕೆ ಬಂದು ತಲುಪಿವೆ. ಆದರೆ, ಶಾಸಕರಲ್ಲದ ಕಾರಣಕ್ಕೆ ಶಿವಕುಮಾರ್‌ ಉದಾಸಿಯವರ ಹೆಸರನ್ನು ಕೈಬಿಡಲಾಗಿದೆ. ಇನ್ನು, ಮುರುಗೇಶ್ ನಿರಾಣಿಯವರ ಮೇಲೆ ಭ್ರಷ್ಟಚಾರ ಆರೋಪಗಳಿರುವುದರಿಂದ ಹಾಗೂ ಬೇರೆ-ಬೇರೆ ಕಾರಣಗಳಿಂದಾಗಿ ಆರ್‌ಎಸ್‌ಎಸ್‌ ನಿರಾಣಿ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಅರವಿಂದ್ ಬೆಲ್ಲದ್ ಹಾಗೂ ಬಸವರಾಜ್‌ ಬೊಮ್ಮಾಯಿ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

ಸಿಎಂ ಆಗಿ ಕಾರ್ಯನಿರ್ವಹಿಸಿಬೇಕಾದರೆ ರಾಜಕೀಯ ಅನಿಭವದ ಜೊತೆ ಆಡಳಿತಾತ್ಮಕ ಅನುಭವವೂ ಮುಖ್ಯ. ಈ ನಿಟ್ಟಿನಲ್ಲಿ ನೋಡುವುದಾದರೇ, ಬೆಲ್ಲದ್ ಅವರಿಗೆ ರಾಜಕೀಯ ಹಾಗೂ ಆಡಳಿತಾತ್ಮಕ ಅನುಭವ ಕಡಿಮೆ ಎಂಬ ಲೆಕ್ಕಾಚಾರ ಹೈಕಮಾಂಡ್ ಅವರದ್ದು. ಬೆಲ್ಲದ್ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಬೊಮ್ಮಾಯಿವರು ಮೂರು ಬಾರಿ ಶಾಸಕರಾಗಿ, ಪ್ರಮುಖ ಖಾತೆಗಳಾದ ಜಲ ಸಂಪನ್ಮೂಲ ಹಾಗೂ ಗೃಹ ಖಾತೆಯನ್ನು ನಿಭಾಯಿಸಿರುವ ಸುಧೀರ್ಘ ಅನುಭವವಿದೆ.

ಮುಂದಿನ ಸಿಎಂ ಬಸವರಾಜ ಬೊಮ್ಮಾಯಿ ಎಂದು ಬಿಎಸ್ ವೈ ಘೋಷಣೆ

ಬಸವರಾಜ್‌ ಬೊಮ್ಮಾಯಿ ಮೃದು ಸ್ವಾಭವದ ಕಳಂಕರಹಿತ ವ್ಯಕ್ತಿ. ಹೀಗಾಗಿ, ವಿರೋಧ ಪಕ್ಷದವರನ್ನು ಎದುರಿಸುವ ಸಾಮರ್ಥ್ಯ ಬೊಮ್ಮಾಯಿಯವರಿಗಿದೆ. ಪ್ರಮುಖವಾಗಿ ರಾಜ್ಯದಲ್ಲಿ ಲಿಂಗಾಯತ ಮೀಸಲಾತಿ ಹೋರಾಟ ಚಾಲ್ತಿಯಲ್ಲಿದ್ದು, ಪಂಚಮ ಲಿಂಗಾಯತರು ಹಾಗೂ ಗಾಣಿಗ ಲಿಂಗಾಯತ ನಡುವೆ ಪೈಪೋಟಿ ಇದೆ. ಈ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದರೆ ಒಂದು ಸಮುದಾಯದ ವಿರೋಧ ಎದುರಿಸಬೇಕಾಗಬಹುದು. ಹೀಗಾಗಿ, ಸಾದರ ಲಿಂಗಾಯತ ಸಮುದಾಯದವರಾದ ಬಸವರಾಜ್‌ ಬೋಮ್ಮಾಯಿವರಿಗೆ ಸಿಎಂ ಸ್ಥಾನ ನೀಡಲು ಸಿರ್ಧರಿಸಲಾಗಿದೆ.

ಅರವಿಂದ್‌ ಬೆಲ್ಲದ್ ಆಯ್ಕೆಯಾಗಿದ್ದರೆ ಬಿಜೆಪಿ ಹಿರಿಯ ನಾಯಕ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇತ್ತು. ಆದರೆ, ಬೊಮ್ಮಾಯಿ ಮದ್ಯ ವಯಸ್ಕರಾಗಿರುವುದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ಸಾಧ್ಯತೆ ಇದೆ. ಇವೆಲ್ಲದರ ಹೊರತಾಗಿ ರಾಜ್ಯದಲ್ಲಿ ಪ್ರವಾಹ ಹಾಗೂ ಕೊರೊನಾ ಆರ್ಥಿಕ ಸಾವಲುಗಳಿವೆ. ಮುಂದೆ ರಾಜ್ಯದಲ್ಲಿ ಎರೆಡೆರಡೂ ಚುನಾವಣೆಗಳಿದ್ದು, ಇವೆಲ್ಲಾವನ್ನು ಸಮರ್ಥವಾಗಿ ನಿಭಾಸುವ ಆಡಳಿತಾತ್ಮಕ ಅನುಭವವಿರುವ ಸೂಕ್ತ ವ್ಯಕ್ತಿ ಬಸವರಾಜ್‌ ಬೊಮ್ಮಾಯಿ ಎಂದು ನಿರ್ಧರಿಸಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿದೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ

ಚಲ್ತಾ ಹೈ ಎಂಬ ಧೋರಣೆ ಸಹಿಸುವುದಿಲ್ಲ; ನಿಷ್ಪಕ್ಷಪಾತವಾಗಿ ಕೆಲಸ ಮಾಡಿ- ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಚಲ್ತಾ ಹೈ ಎಂಬ ಧೋರಣೆ ಸಹಿಸುವುದಿಲ್ಲ; ನಿಷ್ಪಕ್ಷಪಾತವಾಗಿ ಕೆಲಸ ಮಾಡಿ- ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist