Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ, ಅದು ನಮ್ಮ ತಪ್ಪು: ಡಿಕೆಶಿ

Secular TVbySecular TV
A A
Reading Time: 1 min read
ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ, ಅದು ನಮ್ಮ ತಪ್ಪು: ಡಿಕೆಶಿ
0
SHARES
Share to WhatsappShare on FacebookShare on Twitter

ಬೆಂಗಳೂರು: ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾನು, ದೇಶಪಾಂಡೆ ಅವರು, ಧೃವನಾರಾಯಣ ಅವರು, ಶಿವಾನಂದ ಪಾಟೀಲ್ ಅವರು, ಹುಬ್ಬಳ್ಳಿ-ಧಾರವಾಡದ ಎಲ್ಲ ಪ್ರಬುದ್ಧ ಮತದಾರರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಸಾಷ್ಟಾಂಗ ನಮಸ್ಕಾರ ಸಲ್ಲಿಸಲು ಬಂದಿದ್ದೇವೆ. ನಿಮ್ಮ ವಿಶ್ವಾಸ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ನಾವಿಂದು ಮಾತು ನೀಡುತ್ತೇವೆ.

ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು, ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಬೆಂಬಲ ಸಿಕ್ಕಿದೆ. ಇವರಾರೂ ಅಧಿಕಾರದಲ್ಲಿಲ್ಲ, ಪಕ್ಷ ಅಧಿಕಾರದಲ್ಲಿಲ್ಲ. ಬಿಜೆಪಿಯವರು 15 ವರ್ಷಗಳಿಂದ ಆಡಳಿತ ಮಾಡುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಇಲ್ಲಿನವರೇ ಆಗಿದ್ದರು.

ಇಲ್ಲಿ ತಮಗೆ ಬೇಕಾದ ರೀತಿಯಲ್ಲಿ ಮೀಸಲಾತಿ ನಿಗದಿ ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನಮಗೆ ಸಂಖ್ಯಾಬಲ ಇಲ್ಲದಿದ್ದರೂ ಮತದಾರರು ನಮಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ನಾವು ಜನರ ಸೇವೆ ಮುಂದುವರಿಸಿಕೊಂಡು ಹೋಗುತ್ತೇವೆ. ನಮ್ಮ ಸದಸ್ಯರು ಜನರ ಸೇವೆ ಮಾಡುತ್ತಾರೆ. ನಮ್ಮ ಬಂಡಾಯ ಅಭ್ಯರ್ಥಿಗಳು ಕರೆ ಮಾಡಿ ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲೇ ಉಳಿಯುತ್ತೇವೆ ಎಂದಿದ್ದಾರೆ.

ಕಲಬುರ್ಗಿ, ಹುಬ್ಬಳ್ಳಿ-ಧಾರವಾಡದ ಫಲಿತಾಂಶ ಸಮಾಧಾನ ತಂದಿದೆ. ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದೆವು. ಹೀಗಾಗಿ ನಾವು ಧೃತಿಗೆಡುವ ಅಗತ್ಯವಿಲ್ಲ. ಈ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿತದ ಪರ ಬಂದಿದೆಯಾ? ಅಥವಾ ವಿರೋಧವಾಗಿ ಬಂದಿದೆಯಾ? ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಬೇಕು. ಅವರೇ ಸರ್ಟಿಫಿಕೇಟ್ ನೀಡಲಿ.

ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ:
ಮುಂದೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಬಳ್ಳಾರಿ, ತೀರ್ಥಹಳ್ಳಿ, ರಾಮನಗರದಲ್ಲಿ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ಜನರ ಕೈಗೆ ಅಧಿಕಾರ ನೀಡಬೇಕು. ಹೀಗಾಗಿ ಶೀಘ್ರ ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ನಾವು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದೇವೆ. ಅದು ನಮ್ಮ ತಪ್ಪು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಲಿನ ವಿಚಾರ, ಅಭ್ಯರ್ಥಿ ಶಕ್ತಿ ಮುಖ್ಯವಾಗುತ್ತದೆ. ವಿಧಾನಸಭೆ ಹಾಗೂ ಸಂಸತ್ ಚುನಾವಣೆಯಲ್ಲಿ ಬೇರೆ ವಿಚಾರ ಮುಖ್ಯವಾಗುತ್ತದೆ. ಪಕ್ಷಗಳು ಏನೇ ಮಾಡಿದರೂ ಮತದಾರರು ಅವರದೇ ಲೆಕ್ಕಾಚಾರ ಮಾಡಿರುತ್ತಾರೆ.

ಅಧಿಕಾರ ದುರುಪಯೋಗ:
ನಮ್ಮ ಪಕ್ಷದಲ್ಲಿದ್ದವರು ಕೆಲವರು ಬೇರೆ ಪಕ್ಷಗಳಿಂದ ನಿಂತು ಗೆದ್ದಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಂದು. ಬೇಧ-ಭಾವ ಏನಿದ್ದರೂ ಬಿಜೆಪಿಯಲ್ಲಿದೆ. ನಮ್ಮ ನಾಯಕರು ಚುನಾವಣೆ ಪ್ರಚಾರಕ್ಕೆ ವಾರ್ಡ್, ವಾರ್ಡ್ ಗೂ ತೆರಳಿದ್ದಾರೆ. ಬಿಜೆಪಿಯವರಂತೆ ನಮಗೆ ಧನಶಕ್ತಿ ಇಲ್ಲದಿರಬಹುದು. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಡುವಾಗ ಎಷ್ಟು ಹಣ ಬೇಕು ಅಂತ ಬಿಜೆಪಿ ಕೇಳಿತ್ತು: ಶ್ರೀಮಂತ್ ಪಾಟೀಲ್

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆ ಮಾಡುತ್ತಿರುವುದು, ರಾಜ್ಯಗಳಲ್ಲಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯವಾಗಿದೆ, ಭ್ರಷ್ಟಾಚಾರ ಹೆಚ್ಚಾಗಿದೆ, ಉತ್ತಮ ಆಡಳಿತ ನೀಡಲು ಸಾಧ್ಯವಾಗಿಲ್ಲ ಎಂಬುದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವರನ್ನು ಬದಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಅಂದ್ರು ಸಿಎಂ ಬೊಮ್ಮಾಯಿ

Held a meeting with the winning candidates of the Hubli-Dharwad Municipal Corporation Election, in the presence of KPCC working presidents Sri @RV_Deshpande and Sri R Dhruvanarayana, Former Minister Sri @Shivanand_S_P, Sri A.M Hindasgeri, Sri Santhosh Lad and Sri Srinivasa Mane. pic.twitter.com/0f1x4tYYk2

— DK Shivakumar (@DKShivakumar) September 12, 2021

ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ:
ರಾಜ್ಯದಲ್ಲಿ ಕೋವಿಡ್ ನಿಂದ 4 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸಾವಿನ ಸಂಖ್ಯೆಯ ಆಡಿಟ್ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲ ಮೃತರ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ನೂತನ ಮುಖ್ಯಮಂತ್ರಿಗಳು ಕೋವಿಡ್ ಸಮಯದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವೆಚ್ಚ ಮಾಡಿದವರಿಗೆ ಸಹಾಯ ಮಾಡಲಿ, ಸತ್ತವರಿಗೆ ಪರಿಹಾರ ನೀಡಲಿ, ಅಸಂಘಟಿತ ಕಾರ್ಮಿಕರು, ರೈತರಿಗೆ ಆಗಿರುವ ನಷ್ಟ ತುಂಬಿಕೊಡಲಿ. ಇದನ್ನೂ ಓದಿ: ಹಿಂದೂ ದೇವಾಲಯಗಳೇ ಟಾರ್ಗೆಟ್ ಏಕೆ? ಚರ್ಚ್, ಮಸೀದಿ ಕಾಣಲ್ವಾ?: ಪ್ರತಾಪ್ ಸಿಂಹ

ಮಹದಾಯಿ, ಕೃಷ್ಣ, ಮೇಕೆದಾಟು ವಿಚಾರದಲ್ಲಿ ಇಷ್ಟು ದಿನ ಬೊಮ್ಮಾಯಿ ಅವರು, ಶೆಟ್ಟರ್ ಅವರು ಏನು ಹೇಳುತ್ತಿದ್ದರು.?! ಈಗ ಅಧಿಕಾರ ಅವರ ಕೈಯಲ್ಲೇ ಇದೆ. ಈಗ ಏನು ಮಾಡುತ್ತೀರಾ ಎಂದು ಅವರನ್ನೇ ಕೇಳಿ ಎಂದರು. ಇದನ್ನೂ ಓದಿ: ಮೋದಿ ಸಪ್ರೈಸ್ – ನವದಂಪತಿ ಫುಲ್ ಖುಷ್

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಗೌರಿ ಗಣೇಶ ಹಬ್ಬ- ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ಆರ್ಪಣೆ

ಗೌರಿ ಗಣೇಶ ಹಬ್ಬ- ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ಆರ್ಪಣೆ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist