Secular TV
Tuesday, August 9, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ – ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು

Secular TVbySecular TV
A A
Reading Time: 1 min read
Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ – ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು
0
SHARES
Share to WhatsappShare on FacebookShare on Twitter

ಬೆಂಗಳೂರು : ಇಂದಿನಿಂದ 10 ದಿನಗಳ‌ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 6 ತಿಂಗಳು ಬಳಿಕ ನಡೆಯುತ್ತಿರುವ ವಿಧಾನ‌‌ ಮಂಡಲ ಅಧಿವೇಶನ ಇದಾಗಿದ್ದು ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ಮೊದಲ‌ ಅಧಿವೇಶನವಾಗಿದೆ.

ಇನ್ನೂ ಅಧಿವೇಶನದಲ್ಲಿ ಬಿಸಿ ಬಿಸಿ ವಿಚಾರಗಳು ಚರ್ಚೆಯಾಗುವ ಸಾಧ್ಯತೆಗಳಿದೆ.‌ ಕೋವಿಡ್‌ ನಿರ್ವಹಣೆಯಲ್ಲಿ‌ ವೈಫಲ್ಯ, ಭ್ರಷ್ಟಾಚಾರ, ಸಾಲದ ಹೊರೆ, ಬೆಲೆ ಏರಿಕೆ, ಜಾತಿ ಗಣತಿ ವರದಿ ಮಂಡನೆಗೆ ವಿಳಂಬ ಸೇರಿದಂತೆ ಹಲವು ಅಸ್ತ್ರಗಳೊಂದಿಗೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಹೀಗಾಗಿ ಕಲಾಪ ಮಾತಿನ ಸಮರದಿಂದ ಕೂಡಿರಲಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯಲಿರುವ ಮೊಟ್ಟಮೊದಲ ವಿಧಾನಮಂಡಲ ಅಧಿವೇಶನ ಇದಾಗಿದ್ದು, ಸಾರ್ವಜನಿಕರಿಗೆ ಬಿಸಿ ತುಪ್ಪವಾಗಿರೋ ಬೆಲೆ ಏರಿಕೆ, ನೆರೆ, ಪಡಿತರ ಆಹಾರಧಾನ್ಯ ಕಡಿತ, ಮೈಸೂರು ಅತ್ಯಾಚಾರ ಪ್ರಕರಣ, ಜಾತಿ ಗಣತಿ ವರದಿ ಜಾರಿಗೆ ಆಗ್ರಹ, ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ ಸಣ್ಣ ಸಮುದಾಯಗಳಿಗೆ ಇನ್ನೂ ದೊರೆಯದ ನೆರವು ಹಾಗೂ ಕುಸಿಯುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ ಹೀಗೆ, ಸಾಲು-ಸಾಲು ವಿಷಯಗಳನ್ನು ನಿರ್ವಹಣೆ ಅವರಿಗೆ ಸವಾಲಿನ ಕೆಲಸವಾಗಿದೆ.

ಅಧಿವೇಶನದ ಮೊದಲ ದಿನವಾದ ಇಂದು ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಲಿದ್ದರು. ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ದರ ಇಳಿಕೆಗೆ ಪಟ್ಟು ಹಿಡಿಯಲಿದ್ದಾರೆ.

18 ವಿಧೇಯಕ ಮಂಡನೆ

10 ದಿನಗಳ ವಿಧಾನಮಂಡಲ ಅಧಿವೇಶನದಲ್ಲಿ 18 ವಿಧೇಯಕಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. 10 ವಿಧೇಯಕಗಳು, ನಾಲ್ಕು ಸುಗ್ರೀವಾಜ್ಞೆಗಳು ಮತ್ತು ನಾಲ್ಕು ಅಂಗೀಕಾರಕ್ಕೆ ಬಾಕಿ ಇರುವ ವಿಧೇಯಕ ಸೇರಿ ಒಟ್ಟು 18 ವಿಧೇಯಕಗಳು ಮಂಡನೆಯಾಗಲಿವೆ.

ಬೆಂಗಳೂರು ನೀರು ಸರಬರಾಜು ಮತ್ತು ಚರಂಡಿ ವ್ಯವಸ್ಥೆ (ತಿದ್ದುಪಡಿ) ವಿಧೇಯಕ, ಕಳ್ಳಭಟ್ಟಿವ್ಯಾಪಾರಿಗಳ, ಮಾದಕವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ ಮತ್ತು ದೃಶ್ಯ ಅಥವಾ ಧ್ವನಿ, ಕಳ್ಳಮುದ್ರಕರ ಚಟುವಟಿಕೆಗಳ ಪ್ರತಿಬಂಧಕ (ತಿದ್ದುಪಡಿ) ವಿಧೇಯಕ, ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಬಂಧೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳು (ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪ್‌ (ತಿದ್ದುಪಡಿ) ವಿಧೇಯಕ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳು ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕಗಳು ಮಂಡನೆಯಾಗಲಿವೆ.

ಜೊತೆಗೆ ಕಳೆದ ಅಧಿವೇಶನದ ನಂತರ ಸರ್ಕಾರದಿಂದ ಹೊರಡಿಸಲಾದ ನಾಲ್ಕು ಸುಗ್ರೀವಾಜ್ಞೆಗಳು ಮಂಡನೆಯಾಗಲಿವೆ… ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ), ಕರ್ನಾಟಕ ಸಾದಿಲ್ವಾರು ನಿಧಿ (ತಿದ್ದುಪಡಿ), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ಮಂಡಿಸಲಾಗುತ್ತಿದೆ.

ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರಕ್ಕೆ ಬಾಕಿ ಇರುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ, ಮೀಸಲಾತಿ) (ತಿದ್ದುಪಡಿ) ವಿಧೇಯಕ, ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕಗಳು ಮಂಡನೆಯಾಗಲಿವೆ. ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಾಲಿವುಡ್ ಖ್ಯಾತ ನಟನಿಗೆ ಪತ್ರ ಬರೆದ ಪ್ರಧಾನಿ ಮೋದಿ
ತಲೈವಿ ಪಾತ್ರಕ್ಕೆ ಜೀವ ತುಂಬಿದ ಕ್ವೀನ್ – ಮಣಿಕರ್ಣಿಕಾ ಸಹಜ ನಟನೆಗೆ ಫ್ಯಾನ್ಸ್ ಫಿದಾ
Mysore Temples; ಹಿಂದೂ ದೇವಸ್ಥಾನ ಬಚಾವೋ- ಜನಪ್ರತಿನಿಧಿಗಳಿಗೆ ಮೈಸೂರು ಜನರ ಸಾಮೂಹಿಕ ನಮಸ್ಕಾರ

RECOMMENDED

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

August 9, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್
Uncategorized

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
Just-In

Acid Attack: ಯುವತಿ ಮೇಲೆ ಆ್ಯಸಿಡ್ ಪ್ರಕರಣ – ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

August 9, 2022
Nitish Kumar Resigned: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
Politics

Nitish Kumar Resigned: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

August 9, 2022
Bangalore Crime: ಸಿಮ್ ಮೂಲಕ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಆರೋಪಿ ಬಂಧನ
Crime

Bangalore Crime: ಸಿಮ್ ಮೂಲಕ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಆರೋಪಿ ಬಂಧನ

August 9, 2022
Big Boss Kannada OTT: ಮಲತಂದೆ ನನ್ನ ವೀಡಿಯೋ ತೆಗೆದ್ರು: ಸಾನ್ಯ ಕಣ್ಣೀರು!
Entertainment

Big Boss Kannada OTT: ಮಲತಂದೆ ನನ್ನ ವೀಡಿಯೋ ತೆಗೆದ್ರು: ಸಾನ್ಯ ಕಣ್ಣೀರು!

August 9, 2022
Bihar Political Crisis: ಬಿಜೆಪಿ ಜೊತೆ ಮೈತ್ರಿ ಮುರಿದುಕೊಳ್ಳಲು ನಿತೀಶ್ ನಿರ್ಧರಿಸಿದ್ದೇಕೆ..?
Politics

Bihar Political Crisis: ಬಿಜೆಪಿ ಜೊತೆ ಮೈತ್ರಿ ಮುರಿದುಕೊಳ್ಳಲು ನಿತೀಶ್ ನಿರ್ಧರಿಸಿದ್ದೇಕೆ..?

August 9, 2022
Fake Bomb Threat: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ: ಬರವಣಿಗೆ ಪರೀಕ್ಷೆಯಲ್ಲಿ ಇಬ್ಬರು ಶಂಕಿತರು ಪತ್ತೆ
Bangalore

Fake Bomb Threat: ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ: ಬರವಣಿಗೆ ಪರೀಕ್ಷೆಯಲ್ಲಿ ಇಬ್ಬರು ಶಂಕಿತರು ಪತ್ತೆ

August 9, 2022
Big Boss Kannada OTT: ಬಿಕ್ಕಿ ಬಿಕ್ಕಿ ಅತ್ತ ಸೋನುಗೌಡ ಹೇಳಿದ್ದೇನು..?
Entertainment

Big Boss Kannada OTT: ಬಿಕ್ಕಿ ಬಿಕ್ಕಿ ಅತ್ತ ಸೋನುಗೌಡ ಹೇಳಿದ್ದೇನು..?

August 9, 2022
Next Post
Mysuru Dasara: ನಾಡಹಬ್ಬ ದಸರಾ – ಗಜಪಡೆ ಪ್ರಯಾಣ ಇಂದಿನಿಂದ ಶುರು

Mysuru Dasara: ನಾಡಹಬ್ಬ ದಸರಾ - ಗಜಪಡೆ ಪ್ರಯಾಣ ಇಂದಿನಿಂದ ಶುರು

Wipro : ವಿಪ್ರೋ ನೌಕರರಿಗೆ ವರ್ಕ್ ಫ್ರಂ ಹೋಂ ಅಂತ್ಯ – 18 ತಿಂಗಳ ಬಳಿಕ ಆಫಿಸ್ ಓಪನ್

Wipro : ವಿಪ್ರೋ ನೌಕರರಿಗೆ ವರ್ಕ್ ಫ್ರಂ ಹೋಂ ಅಂತ್ಯ - 18 ತಿಂಗಳ ಬಳಿಕ ಆಫಿಸ್ ಓಪನ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist