Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಈ ಸರ್ಕಾರಕ್ಕೆ ಕಣ್ಣು, ಕಿವಿ ಮತ್ತು ಹೃದಯವೇ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Secular TVbySecular TV
A A
Reading Time: 1 min read
ಈ ಸರ್ಕಾರಕ್ಕೆ ಕಣ್ಣು, ಕಿವಿ ಮತ್ತು ಹೃದಯವೇ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
0
SHARES
Share to WhatsappShare on FacebookShare on Twitter

ಬೆಂಗಳೂರು : ಬಿಜೆಪಿ ಸರ್ಕಾರ ದಿನಬೆಳಗಾದರೆ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್ ಪಾಕೆಟ್ ಸರ್ಕಾರ. ಇದನ್ನು ನೋಡಿಕೊಂಡು ಸುಮ್ಮನೆ ಕೂರಲು ನಮ್ಮಿಂದ ಸಾಧ್ಯವಿಲ್ಲ. ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇಳಿಕೆ ಮಾಡುವವರೆಗೂ ನಾವು ನಿರಂತರವಾಗಿ ವಿವಿಧ ರೀತಿಯಲ್ಲಿ ನಮ್ಮ ಹೋರಾಟ ಮುಂದುವರಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಕೇಂದ್ರ ಬಿಜೆಪಿ ಸರಕಾರದ ನಿರಂತರ ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ ಶಿವಕುಮಾರ್ ಅವರು ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ದೇಶದ ಇತಿಹಾಸದಲ್ಲಿ ಈ ಸರ್ಕಾರ ಬೆಲೆ ಏರಿಕೆ ಮಾಡಿದಂತೆ ಬೇರೆ ಯಾವುದೇ ಸರ್ಕಾರ ಮಾಡಿರಲಿಲ್ಲ. ಭಾರತಕ್ಕಿಂತ ಹಿಂದುಳಿದಿರುವ ನೆರೆ ದೇಶಗಳಾದ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಭೂತಾನ್ ಹಾಗೂ ಪಾಕಿಸ್ತಾನಕ್ಕಿಂತ ನಮ್ಮ ದೇಶದಲ್ಲಿ ಇಂಧನ ಬೆಲೆ ಹೆಚ್ಚಾಗಿದೆ. ವಿಶ್ವದಲ್ಲೇ ಈ ಇಂಧನಗಳ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶ ಭಾರತವಾಗಿದೆ. ಇದು ಜನ ಸಾಮಾನ್ಯರ ಬದುಕನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿದ್ದು, ಇದರ ವಿರುದ್ಧ ವಿಧಾನಸೌಧದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮುಂದುವರೆಸುತ್ತೇವೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿದ್ದಾಗ ಅದನ್ನು ಮಾಜಿ ಪ್ರಧಾನಿ ವಾಜಪೇಯಿ ಅವರು ಕ್ರಿಮಿನಲ್ ಆಕ್ಟ್ ಎಂದು ಹೇಳಿದ್ದರು. ಪೆಟ್ರೋಲ್ ಬೆಲೆ 105 ರೂ. ಆಗಿದೆ, ಗ್ಯಾಸ್ ಬೆಲೆ 880 ರೂ. ಆಗಿದೆ. ಇದರ ಪರಿಣಾಮವಾಗಿ ಎಲ್ಲ ದಿನಬಳಕೆ ಪದಾರ್ಥಗಳು, ವಸ್ತುಗಳು ಹಾಗೂ ಯಂತ್ರೋಪಕರಣಗಳ ಬೆಲೆಯೂ ಹೆಚ್ಚಾಗಿದೆ. ಸರ್ಕಾರ ಯಾರಿಗಾದರೂ ಸಂಬಳ ಹೆಚ್ಚಿಸಿದೆಯಾ? ಆದಾಯ ಹೆಚ್ಚಿಸಿದೆಯಾ? ಜನ ಉದ್ಯೋಗ ಕಳೆದುಕೊಳ್ಳುತ್ತಿರುವಾಗ ಈ ಬೆಲೆ ಏರಿಕೆ ಮಾಡಲಾಗುತ್ತಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವೇ ಇಲ್ಲ. ಯಾರಿಗೂ ಸಹಾಯ ಮಾಡಿಲ್ಲ.

ನಾವು ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ತರಲೇಬೇಕಾಗಿದೆ. ನಮ್ಮ ಬಳಿ ಬೇರೆ ದಾರಿ ಇಲ್ಲವಾಗಿದೆ. ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಈಗಲಾದರೂ ಬೆಲೆ ಏರಿಕೆಯನ್ನು ತಡೆಗಟ್ಟುತ್ತಾರೆಂಬ ನಿರೀಕ್ಷೆಯಿದೆ. ಪೆಟ್ರೋಲ್ ಬೆಲೆಯನ್ನು 75 ರೂ.ಗೆ ಇಳಿಸಲೇಬೇಕಾಗಿದೆ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಈ ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದ ಬಿಸಿಯನ್ನು ಬಿಜೆಪಿ ಹಾಗೂ ಸರ್ಕಾರಕ್ಕೆ ಎರಡಕ್ಕೂ ಮುಟ್ಟಿಸುತ್ತೇವೆ.

ಶ್ರೀಮಂತ ಪಾಟೀಲ್ ಹೇಳಿಕೆ; ಎಸಿಬಿ, ಇಡಿಯಿಂದ ಸುಮೋಟೋ ಪ್ರಕರಣ ದಾಖಲಾಗಲಿ:

ಶ್ರೀಮಂತ ಪಾಟೀಲ್ ಅವರು ಮಾಜಿ ಸಚಿವರಾಗಿದ್ದವರು, ಈಗ ಬಿಜೆಪಿ ಶಾಸಕರಾಗಿದ್ದಾರೆ. ಅವರು ತಮ್ಮ ಕಾರ್ಯಕರ್ತರು ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವಾಗ ಬಿಜೆಪಿಯಿಂದ ಅವರಿಗೆ ಹಣದ ಆಮಿಷ ಬಂದಿತ್ತು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಂದ ಕೂಡಲೇ ಎಸಿಬಿ ಹಾಗೂ ಇಡಿ ಇಲಾಖೆಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕಾಗಿತ್ತು. ಯಾರು ಈ ಆಮೀಷ ಒಡ್ಡಿದ್ದರು? ಎಷ್ಟು ಹಣದ ಆಮಿಷ ಕೊಟ್ಟಿದ್ದರು? ಎಂಬ ಬಗ್ಗೆ ತನಿಖೆ ನಡೆಸಬೇಕು. ಇದರಲ್ಲಿ ಯಾವುದನ್ನೂ ಮುಚ್ಚಿಡಲು ಸಾಧ್ಯವಿಲ್ಲ. ಇದು ಬಹಿರಂಗ ಸತ್ಯ. ನಾನು ಈ ಹಿಂದೆಯೂ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದೆ. ಈ ಹಿಂದೆ ರಮೇಶ್ ಜಾರಕಿಹೊಳಿ ಅವರು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿ ಸರ್ಕಾರ ರಚಿಸಲು ಮನೆ ಮಾರಿ ಹಣ ವೆಚ್ಚ ಮಾಡಿದ್ದರು ಎಂದು ಹೇಳಿದ್ದರು. ಆ ಹಣದಲ್ಲಿ ಯಾರನ್ನು ಖರೀದಿ ಮಾಡಲಾಗಿತ್ತು? ಇನ್ನು ಶ್ರೀನಿವಾಸ ಗೌಡ ಅವರಿಗೆ ಡಾ. ಅಶ್ವಥ್ ನಾರಾಯಣ ಅವರು ಹಣದ ಆಮಿಷ ನೀಡಿದ್ದರು ಎಂದು ಹೇಳಿದ್ದರು. ಅದೇ ರೀತಿ ಈಗಲೂ ಈ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ.’

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯರಾದ ಆಸ್ಕರ್‌ ಫರ್ನಾಂಡೀಸ್ ವಿಧಿವಶ

ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯರಾದ ಆಸ್ಕರ್‌ ಫರ್ನಾಂಡೀಸ್ ವಿಧಿವಶ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist