Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Explained : ಕ್ಯಾಪ್ಟನ್ ಅಮರೇಂದ್ರಸಿಂಗ್ (Amarinder Singh) ರಾಜೀನಾಮೆಗೆ ಕಾರಣಗಳೇನು?

Secular TVbySecular TV
A A
Reading Time: 1 min read
Explained : ಕ್ಯಾಪ್ಟನ್ ಅಮರೇಂದ್ರಸಿಂಗ್ (Amarinder Singh)  ರಾಜೀನಾಮೆಗೆ ಕಾರಣಗಳೇನು?
0
SHARES
Share to WhatsappShare on FacebookShare on Twitter

ನವದೆಹಲಿ : ಗುಜರಾತ್ ಬಳಿಕ ಈಗ ಪಂಜಾಬ್ ಸರದಿ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದ್ರಸಿಂಗ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಪಡೆದುಕೊಂಡಿದೆ. ಪಕ್ಷದೊಳಗಿನ ಸುಧೀರ್ಘ ಆತಂರಿಕ ಕಚ್ಚಾಟದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಅಮರೇಂದ್ರ ಸಿಂಗ್ ಅವರನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಂಡಿದೆ.

ಹೈಕಮಾಂಡ್ ಸೂಚನೆ ಮೇರೆ ನಿನ್ನೆ ಕ್ಯಾಪ್ಟನ್ ಅಮರೇಂದ್ರಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಿದ್ದು ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕ್ಯಾಪ್ಟನ್ ಅಮರೇಂದ್ರ ಸಿಂಗ್ ಅವರಿಂದ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ಪಡೆದಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮತ್ತು ರಾಜೀನಾಮೆಯ ಹಿಂದಿನ ಉದ್ದೇಶಗಳು ಏನಿರಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈ ಕಾರಣದಿಂದ ಈ ಕೆಳಗೆ ಅಮರೇಂದ್ರ ಸಿಂಗ್ ರಾಜೀನಾಮೆಯ ಹಿಂದಿನ ಐದು ಕಾರಣಗಳನ್ನು ವಿವರಿಸಲಾಗುತ್ತಿದೆ.

ಕ್ಯಾಪ್ಟನ್ ಅಮರೇಂದ್ರ ಸಿಂಗ್

ಡ್ರಗ್ಸ್ ವಿರುದ್ಧ ಇಲ್ಲ ಕಠಿಣ ಕ್ರಮ

ಪಂಜಾಬ್ ಅಂದರೆ ಅದು ಡ್ರಗ್ಸ್ ರಾಜ್ಯ ಎನ್ನುವ ಮಟ್ಟಿಗೆ ಕುಖ್ಯಾತಿ ಪಡೆದಿದೆ. ಪಂಜಾಬ್ ನಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ತರುವ ಭರವಸೆ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೆ ಅಧಿಕಾರಕ್ಕೆ ನಾಲ್ಕು ವರ್ಷಗಳು ಕಳೆದರೂ ಯಾವುದೇ ದಿಟ್ಟ ಕ್ರಮಗಳು ಸರ್ಕಾರದಿಂದ ತೆಗೆದುಕೊಂಡಿರಲಿಲ್ಲ. ಜೊತೆಗೆ ಪವಿತ್ರ ಸಿಖ್ ಪುಸ್ತಕ ಗುರು ಗ್ರಂಥದ ಪುಟಗಳನ್ನು ಹರಿದು ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳನ್ನು ಬಂಧಿಸಿರಲಿಲ್ಲ ಈ ಎರಡು ಪ್ರಕಣಗಳು ಚುನಾವಣೆಯಲ್ಲಿ ಮುಳುವಾಗಬಹುದು ಎಂದು ಕಾಂಗ್ರೆಸ್ ನಿರೀಕ್ಷೆ ಮಾಡಿದೆ.

ಕ್ಯಾಪ್ಟನ್ ಅಮರೇಂದ್ರ ಸಿಂಗ್

ಶಾಸಕರ ಭೇಟಿಯಾಗದ ಸಿಎಂ

ಶಾಸಕರ ಭೇಟಿಗೆ ಅವಕಾಶ ನೀಡುತ್ತಿರಲಿಲ್ಲ ಎನ್ನುವ ಆರೋಪ ಕೂಡಾ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಮೇಲಿದೆ ಇದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಕೆಲವು ಸೀಮಿತ ವ್ಯಕ್ತಿಗಳು ಮಾತ್ರ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಅವರನ್ನು ಸುತ್ತುವರಿದುಕೊಂಡಿದ್ದರು ಅವರು ಶಾಸಕರ ಭೇಟಿಗೆ ಅವಕಾಶ ನೀಡುತ್ತಿರಲಿಲ್ಲ ಎನ್ನುವ ಆರೋಪ ಇತ್ತು. ಇದಾದ ಬಳಿಕ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಚಂಡೀಗಢದಲ್ಲಿರುವ ಸಿಎಂ ಕಚೇರಿ ಬಿಟ್ಟು ತಮ್ಮ ಫಾರ್ಮ್ ಹೌಸ್ ಸೇರಿಕೊಂಡರು ಇದರಿಂದ ಶಾಸಕರು ಮತ್ತು ಸಿಎಂ ನಡುವಿನ ಅಂತರ ಹೆಚ್ಚಾಗಿ ಶಾಸಕು ಬಂಡೇಳುವಂತಾಯಿತು.

ಅಧಿಕಾರಗಳ ಕೈಯಲ್ಲಿ ಸರ್ಕಾರ

ಕ್ಯಾಪ್ಟನ್ ಅಮರೇಂದ್ರ ಸಿಂಗ್ ನೇತೃತ್ವದ ಸರ್ಕಾರ ಬಹುತೇಕ ಅಧಿಕಾರಿಗಳಿಂದ ನಿಯಂತ್ರಣಗೊಳ್ಳುತ್ತಿತ್ತು ಎನ್ನಲಾಗಿದೆ‌. 2017 ಮಾರ್ಚ್‌ನಲ್ಲಿ ಅಮರೇಂದ್ರ ಅಧಿಕಾರ ವಹಿಸಿಕೊಂಡ ಕೂಡಲೇ 1983 ರ ಬ್ಯಾಚ್ ನ ಐಎಎಸ್ ಅಧಿಕಾರಿಯನ್ನು ಸುರೇಶ್ ಕುಮಾರ್ ಅವರನ್ನು ತಮ್ಮ ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿಕೊಂಡರು, ಇದು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಕಾರ್ಯದರ್ಶಿಯ ಹುದ್ದೆಗೆ ಸಮನಾಗಿತ್ತು. ಈ ನೇಮಕಾತಿಯನ್ನು ಹೈಕೋರ್ಟ್ ರದ್ದುಗೊಳಿಸಿತು. ಹೈಕೋರ್ಟ್ ಆದೇಶದ ಬಳಿಕ ಸುರೇಶ್ ಕುಮಾರ್ ರಾಜೀನಾಮೆ ನೀಡಿದರು, ಆದರೆ ಸಿಎಂ ಅಮರೇಂದ್ರ ಸಿಂಗ್ ಮಾತ್ರ ಅವರ ರಾಜೀನಾಮೆಯನ್ನು ಸ್ವೀಕರಿಸಲು ಸಿದ್ದರಿರಲಿಲ್ಲ. ಹೈಕೋರ್ಟ್ ತೀರ್ಪಿನ ವಿರುದ್ಧ ಅಮರೇಂದ್ರ ಸಿಂಗ್ ಸರ್ಕಾರ ಮೇಲ್ಮನವಿ ಸಲ್ಲಿಸಿತು. ಸುರೇಶ್ ಕುಮಾರ್ ಪಂಜಾಬ್ ಶಕ್ತಿ ಕೇಂದ್ರವಾಗಿ ಬದಲಾದರು. ಸುರೇಶ್ ಕುಮಾರ್ ಶಾಸಕರ ಮಾತಿಗೆ ಕಿಮ್ಮತ್ತೂ ಕೊಡುತ್ತಿರಲಿಲ್ಲ ಇದು ಅಸಮಧಾನಕ್ಕೆ ಮತ್ತೊಂದು ಕಾರಣ ಎನ್ನಲಾಗಿದೆ.

ಸಮೀಕ್ಷೆಗಳು

2022 ರಲ್ಲಿ ಚುನಾವಣೆ ಹಿನ್ನಲೆ ಕಾಂಗ್ರೆಸ್ ಖಾಸಗಿ ಕಂಪನಿಗಳ ಮೂಲಕ ಸಮೀಕ್ಷೆಗಳನ್ನು ನಡೆಸಿತ್ತು. ಸರ್ವೆಯಲ್ಲಿ ಸರ್ಕಾರದ ಮೇಲೆ ಜನರ ಅಭಿಪ್ರಾಯ ಮತ್ತು ಸಿಎಂ ಮೇಲಿನ ಜನಪ್ರಿಯತೆಯನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಾಯ್ತು. ಸಮೀಕ್ಷೆಯಲ್ಲಿ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಜನಪ್ರಿಯತೆ ಕಳೆದುಕೊಂಡಿದ್ದು ಅವರ ರಾಜೀನಾಮೆಗೆ ಕಾರಣವಾಯ್ತು ಎಂದು ವಿಶ್ಲೇಷಿಸಲಾಗಿದೆ.

ಅಂಕಿ ಆಟ

ಪಂಜಾಬ್ ಕಾಂಗ್ರೆಸ್ ಪ್ರದೇಶ ಕಮಿಟಿ ಅಧ್ಯಕ್ಷ ನವಜೋತ್ ಸಿಧು ನೇತೃತ್ವದಲ್ಲಿ ಭಿನ್ನಮತೀಯ ಶಾಸಕರನ್ನು ಒಗ್ಗೂಡಿಸುವ ಪ್ರಯತ್ನ ನಡೆಯಿತು. ಇದಕ್ಕೆ ಸಚಿವರಾದ ಟ್ರಿಪ್ಟ್ ರಾಜೇಂದ್ರ ಸಿಂಗ್ ಬಾಜ್ವಾ, ಸುಖಬಿಂದರ್ ಸರ್ಕಾರಿಯಾ ಮತ್ತು ಸುಖಜಿಂದರ್ ರಾಂಧವಾ ಸಾಥ್ ನೀಡಿದ್ದರು‌. ಇವರು ಶಾಸಕರನ್ನು ಕ್ಯಾಪ್ಟನ್ ಅಮರೇಂದ್ರ ಸಿಂಗ್ ವಿರುದ್ಧ ನಿಲ್ಲಿಸಿದರು. ಈ ಶಾಸಕರು ಪಕ್ಷದ ಹೈಕಮಾಂಡ್ ನಾಯಕರಿಗೆ ಬಹಿರಂಗವಾಗಿ ಪತ್ರ ಬರೆಯಲು ಆರಂಭಿಸಿದರು. ಮತ್ತು ಎರಡು ಬಣಗಳು ಒಟ್ಟಿಗೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎನ್ನುವ ಸಂದೇಶ ರವಾನಿಸಿದರು. ಚುನಾವಣೆ ಹೊಸ್ತಿಲಿನಲ್ಲಿ ಹೆಚ್ಚು ವಿವಾದ ಮಾಡಿಕೊಳ್ಳದ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿಯುವ ದೃಷ್ಟಿಯಿಂದ ಸಿಎಂ ಸ್ಥಾನದಿಂದ ಅಮರೇಂದ್ರ ಸಿಂಗ್ ಅವರನ್ನು ಕೆಳಗಿಳಿಸಲಾಯಿತು‌.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
DV Sadananda Gowda; ಡಿವಿಎಸ್‌ ವಿಡಿಯೋ ರಿಲೀಸ್‌ ಮಾಡಿದ್ದವರು ಯಾರು?

DV Sadananda Gowda; ಡಿವಿಎಸ್‌ ವಿಡಿಯೋ ರಿಲೀಸ್‌ ಮಾಡಿದ್ದವರು ಯಾರು?

ಅಭಿಮಾನಿಗಳಿಗೆ ಡಬಲ್ ಶಾಕ್ – T20 ಬಳಿಕ RCB ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ಗುಡ್ ಬೈ

ಅಭಿಮಾನಿಗಳಿಗೆ ಡಬಲ್ ಶಾಕ್ - T20 ಬಳಿಕ RCB ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ಗುಡ್ ಬೈ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist