Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಮತ್ತೊಂದು ಸಾಧನೆಯತ್ತ KMC ಆಸ್ಪತ್ರೆ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

Secular TVbySecular TV
A A
Reading Time: 1 min read
ಮತ್ತೊಂದು ಸಾಧನೆಯತ್ತ KMC ಆಸ್ಪತ್ರೆ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
0
SHARES
Share to WhatsappShare on FacebookShare on Twitter

ಮಂಗಳೂರು (Mangaluru): ತೀವ್ರ ಉಸಿರಾಟದ ತೊಂದರೆಯ ಹಿನ್ನಲೆ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಕೆಎಂಸಿ ಆಸ್ಪತ್ರೆ ಸಾಧನೆಯ ಮೆಟ್ಟಿಲೇರಿದೆ.


ನಗರದ KMC ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಮರು ಜೀವ ನೀಡುವಲ್ಲಿ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ಯಶಸ್ವಿಯಾಗಿದೆ. ಉತ್ತರ ಕನ್ನಡದ ಹೊನ್ನಾವರದ ಆಸ್ಪತ್ರೆಯಲ್ಲಿ ಪರೀಕ್ಷೆ ನೆಡೆಸಿದಾಗ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ವೈದ್ಯರು ಎಷ್ಟೇ ಪ್ರಯತ್ನಪಟ್ಟರೂ ರೋಗಿಯ ಆರೋಗ್ಯ ಸುಧಾರಿಸಲಿಲ್ಲ. ಹೆಚ್ಚಿನ ಚಿಕಿತ್ಸೆಗೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಎಂಸಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ವಿಭಾಗದ ಕನ್ಸಲ್ಟಂಟ್ ಡಾ. ಹರೂನ್ ಎಚ್., ಇಂಟೆನ್ಸಿವಿಸ್ಟ್ ಡಾ.ದತ್ತಾತ್ರೇಯ ಪ್ರಭು ಮತ್ತು ತುರ್ತು ಚಿಕಿತ್ಸಾ ತಂಡ ಸೇರಿ ರೋಗಿಯ ಆರೋಗ್ಯ ಸುಧಾರಣೆಗೆ ಚಿಕಿತ್ಸೆ ನೀಡುವಲ್ಲಿ ಮುಂದಾದರು.

ಈ ಬಗ್ಗೆ ಆಧಿಕೃತ ಮಾಹಿತಿ ನೀಡಿದ ಡಾ. ಹರೂನ್ ಎಚ್. ಅವರು, “ಕೆಎಂಸಿ ಆಸ್ಪತ್ರೆಗೆ ದಾಖಲಾದಾಗ ರೋಗಿಯ ಉಸಿರಾಟ ವೇಗವಾಗಿತ್ತು. ಹೀಗಾಗಿ ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿತ್ತು. ರೋಗಿಯು ತೀವ್ರ ಸ್ವರೂಪದ ಕೋವಿಡ್ ನ್ಯುಮೋನಿಯಾದಿಂದ ಬಳಲುತ್ತಿದ್ದುದರಿಂದ ಇದಕ್ಕೆ ಸಂಬಂಧಿಸಿದಂತೆಯೂ ಚಿಕಿತ್ಸೆ ನೀಡಲಾಯಿತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೈಟೋಕಿನ್ ಸ್ಟಾರ್ಮ್ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದ್ದು, ವೆಂಟಿಲೇಟರ್ ನೆರವಿನಿಂದ ನಿರಂತರವಾದ ಚಿಕಿತ್ಸೆ ಮತ್ತು ವಿಶೇಷ ಕಾಳಜಿಯಯಿಂದಾಗಿ ರೋಗಿಯನ್ನು ವೆಂಟಿಲೇಟರ್ ಸಪೋರ್ಟ್ನಿಂದ ಹೊರಗೆ ಕರೆತರಲಾಯಿತು. ಆದರೆ, ಈ ಮೊದಲೇ ಕೋವಿಡ್ನಿಂದಾಗಿ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಅಲ್ಲದೆ, ಆಹಾರ, ನೀರು ನುಂಗಲು ಆಗದೆ ಬಹಳ ಕಷ್ಟ ಅನುಭವಿಸುತ್ತಿದ್ದರು,” ಎಂದು ವೈದರು ವಿವರಿಸಿದರು.

ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ಕನ್ಸಲ್ಟಂಟ್- ನರಶಾಸ್ತ್ರಜ್ಞ ಡಾ. ರೋಹಿತ್ ಪೈ ಅವರು ಮಾತನಾಡಿ, “ನೀರನ್ನು ಕುಡಿಯಲು ಅಥವಾ ನುಂಗಲು ತೊಂದರೆಯಾಗುತ್ತಿದೆ ಎಂದು ರೋಗಿಯು ನಮ್ಮ ಬಳಿ ಹೇಳಿದಾಗ ನರಸ್ನಾಯುವಿನ (ನ್ಯೂರೋಮಸ್ಕ್ಯುಲರ್) ಸಮಸ್ಯೆ ಇರಬಹುದು ಎಂದು ನಾವು ಭಾವಿಸಿದ್ದೆವು ಹಾಗೂ ಕೋವಿಡ್ ಸಂಬಂಧಿ ಮೈಸ್ತೇನಿಯಾ ಗ್ರಾವಿಸ್ ನಿಂದ ಕೂಡ ಬಳಲುತ್ತಿದ್ದರು. ಹೀಗಾಗಿ ಮೈಸ್ತೇನಿಯಾ ಗ್ರಾವಿಸ್ ಸಮಸ್ಯೆಗೆ ಚಿಕಿತ್ಸೆ ನೀಡಲು ಆರಂಭಿಸಿದಾಗ ರೋಗಿಯಲ್ಲಿ ಸಾಕಷ್ಟು ಚೇತರಿಕೆ ಲಕ್ಷಣಗಳು ಕಂಡುಬಂದವು. ಅವರಿಗೆ ನೀಡುತ್ತಿದ್ದ ಆಮ್ಲಜನಕದ ಪ್ರಮಾಣವನ್ನು ಕ್ರಮೇಣ ಕಡಿಮೆ ಮಾಡಲಾಯಿತು. ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂತು ಮತ್ತು ಆಕ್ಸಿಜನ್ ಸ್ಯಾಚುರೇಷನ್ ಅನ್ನು ಕನಿಷ್ಠ ಆಮ್ಲಜನಕದೊಂದಿಗೆ ನಿರ್ವಹಿಸಲು ಆರಂಭಿಸಿದರು ಎಂದು ಮಾಹಿತಿ ನೀಡಿದರು.

“ಕೋವಿಡ್ ಗುಣವಾದ ನಂತರ ಕಾಣಿಸಿಕೊಳ್ಳುವ ಇನ್ಫೆಕ್ಷನ್ (ಸೋಂಕು) ನಿಂದ ಉಂಟಾಗುವ ನರಮಂಡಲ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಈ ರೀತಿಯ ಇನ್ನೂ 2 ಕೇಸ್ ಗಳು ಐಸಿಯುನಲ್ಲಿ ಇದ್ದವು. ವೆಂಟಿಲೇಟರ್ ನಲ್ಲಿ ಇರುವ ರೋಗಿಗಳಲ್ಲಿ ಇಂತಹ ಸಮಸ್ಯೆಗಳ ಇರುವಿಕೆಯನ್ನು ಕಂಡುಹಿಡಿಯುವುದು ಕಷ್ಟದ ಕೆಲಸ. ಆದರೆ, ಇಲ್ಲಿ ಗಮನಿಸಬೇಕಾಗಿರುವ ಪ್ರಮುಖ ಅಂಶವೇನೆಂದರೆ ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆ ಇರುವುದು ದೃಢಪಟ್ಟ ಬಳಿಕ ರೋಗಿಗೆ ಅಗತ್ಯವಿದ್ದ ಎಲ್ಲ ರೀತಿಯ ಚಿಕಿತ್ಸೆ ನೀಡಲಾಯಿತು,” ಎಂದು ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ತುರ್ತು ಚಿಕಿತ್ಸೆ ವಿಭಾಗದ ಮುಖ್ಯಸ್ಥರಾಗಿರುವ ಡಾ.ದತ್ತಾತ್ರೇಯ ಪ್ರಭು ಅವರು ಮಾಹಿತಿ ನೀಡಿದರು.

ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡುವುದು ಮುಖ್ಯವಾಗುತ್ತದೆ: ಡಾ.ಆನಂದ್ ವೇಣುಗೋಪಾಲ್, ಈ ಕುರಿತು ಮಾತನಾಡಿದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಪ್ರಾದೇಶಿಕ ಮುಖ್ಯಸ್ಥರು ಹಾಗೂ ವೈದ್ಯಕೀಯ ಅಧೀಕ್ಷಕರಾಗಿರುವ ಡಾ.ಆನಂದ್ ವೇಣುಗೋಪಾಲ್ ಅವರು, “ರೋಗಿಯು ಕೋವಿಡ್ಗೆ ಸಂಬಂಧಿಸಿದ ಅತ್ಯಂತ ಅಪರೂಪದ ಮತ್ತು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದುದರಿಂದ ಇದೊಂದು ಕಠಿಣ ಮತ್ತು ಸವಾಲಿನ ಕೇಸ್ ಆಗಿತ್ತು. ರೋಗಿಗೆ ಐಸಿಯು ಮತ್ತು ವೆಂಟಿಲೇಟರ್ ನೆರವಿನ ಅಗತ್ಯವಿತ್ತು. ರೋಗಿಯು ಎದುರಿಸುತ್ತಿದ್ದ ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಗುರುತಿಸಿ, ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗಿಯನ್ನು ಅಪಾಯದಿಂದ ಪಾರು ಮಾಡಿದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಂಪೂರ್ಣ ತಂಡವನ್ನು ನಾನು ಅಭಿನಂದಿಸುತ್ತೇನೆ. ರೋಗಿಯು ಯಶಸ್ವಿಯಾಗಿ ಡಿಸ್ಚಾರ್ಜ್ ಆಗಿದ್ದು, ಮುಂದಿನ ಕೆಲವು ದಿನಗಳ ಕಾಲ ನಮ್ಮ ನಿರಂತರ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ರೋಗಿಯನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಅವರ ಪ್ರಾಣ ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಮತ್ತು ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಎದುರಾದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಮುಖ್ಯವಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Naga Chaitanya, Love Story- ನಾಳೆ ತೆರೆಗೆ ಬರುತ್ತಿದೆ ನಾಗಾಚೈತನ್ಯ ನಟನೆಯ ಲವ್ ಸ್ಟೋರಿ

Naga Chaitanya, Love Story- ನಾಳೆ ತೆರೆಗೆ ಬರುತ್ತಿದೆ ನಾಗಾಚೈತನ್ಯ ನಟನೆಯ ಲವ್ ಸ್ಟೋರಿ

ತಪ್ಪಾದ ಹೇರ್ ಕಟ್ ಗೆ ದುಬಾರಿ ದಂಡ - ಹೊಟೇಲ್​ಗೆ ಬಿತ್ತು 2 ಕೋಟಿ ರೂ ಫೈನ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist