Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಹಾನಗಲ್ ಉಪಚುನಾವಣೆ ಒಗ್ಗಟ್ಟಿನಿಂದ ಎದುರಿಸುತ್ತೇವೆ: ಡಿ.ಕೆ. ಶಿವಕುಮಾರ್

Secular TVbySecular TV
A A
Reading Time: 1 min read
ಹಾನಗಲ್ ಉಪಚುನಾವಣೆ ಒಗ್ಗಟ್ಟಿನಿಂದ ಎದುರಿಸುತ್ತೇವೆ: ಡಿ.ಕೆ. ಶಿವಕುಮಾರ್
0
SHARES
Share to WhatsappShare on FacebookShare on Twitter

ಬೆಂಗಳೂರು : ‘ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಗುರುವಾರ ರಾತ್ರಿ ನಡೆದ ಸಂಧಾನ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್, ಮಾಜಿ ಸಚಿವ ಮನೋಹರ್ ತಹಶೀಲ್ದಾರ್, ಮೇಲ್ಮನೆ ಸದಸ್ಯ ಶ್ರೀನಿವಾಸ್ ಮಾನೆ ಅವರು ಹೇಳಿದ್ದಿಷ್ಟು;

‘ಮನೋಹರ್ ತಹಶೀಲ್ದಾರ್, ಶ್ರೀನಿವಾಸ ಮಾನೆ, ಪ್ರಕಾಶ್ ಪಾಟೀಲ್ ಅವರಲ್ಲಿ ಯಾರೇ ಆಗಿರಲಿ ಪಕ್ಷ ಬಹಳ ಮುಖ್ಯ ಎಂದು ಅರಿತಿದ್ದಾರೆ. ಇದು ಉಪ ಚುನಾವಣೆಯಾಗಿದ್ದು, ನಾವು ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಾರೆ. ಇಡೀ ಜಿಲ್ಲೆಯ ನಾಯಕರು ಶಾಸಕಾಂಗ ಪಕ್ಷದ ನಾಯಕರ ಸಮ್ಮುಖದಲ್ಲಿ ಕೂತು ಚರ್ಚೆ ಮಾಡಿದ್ದೇವೆ. ರಾಜಕೀಯವಾಗಿ ಎಲ್ಲರಿಗೂ ಸ್ಥಾನಮಾನ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಅದನ್ನು ನಾವು ಮಾಡುತ್ತೇವೆ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಕೆಲಸ ಮಾಡುತ್ತಾರೆ.’

ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ: ಮನೋಹರ್ ತಹಶೀಲ್ದಾರ್

‘ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಹಾಗೂ ಜಿಲ್ಲೆಯ ಎಲ್ಲಾ ನಾಯಕರು ಇಂದು ಸಭೆಯಲ್ಲಿ ಭಾಗವಹಿಸಿದ್ದೆವು. ಇಲ್ಲಿ ನಾಯಕರು ನಮ್ಮ ಹಾಗೂ ಉಳಿದವರ ಅಹವಾಲು ಕೇಳಿದ್ದು, ಎಲ್ಲರೂ ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ. ನಾವು ಒಟ್ಟಾಗಿ ಚುನಾವಣೆ ಮಾಡಿ ಪಕ್ಷ ಗೆಲ್ಲುವಂತೆ ಮಾಡಬೇಕು, ಯಾರೂ ಅನಗತ್ಯ ಹೇಳಿಕೆ ನೀಡಬಾರದು, ಅಭ್ಯರ್ಥಿ ಯಾರು ಎಂದು ಈಗಲೇ ಹೇಳುವುದಿಲ್ಲ. ಹೈಕಮಾಂಡ್ ಜತೆ ಚರ್ಚಿಸುತ್ತೇವೆ. ನಂತರ ಹೈಕಮಾಂಡ್ ಟಿಕೆಟ್ ಘೋಷಿಸಲಿದೆ. ಹೀಗಾಗಿ ನಾವು ಶಿಸ್ತು ಹಾಗೂ ಒಗ್ಗಟ್ಟಿನಿಂದ ಚುನಾವಣೆ ನಡೆಸಿ ಪಕ್ಷ ಗೆಲ್ಲಿಸುವ ತೀರ್ಮಾನಕ್ಕೆ ಬಂದಿದ್ದೇವೆ.

ಇದನ್ನೂ ಓದಿ : ಉಪಚುನಾವಣೆ ಟಿಕೆಟ್ ಸಂಬಂಧ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಡಿ.ಕೆ. ಶಿವಕುಮಾರ್

ನಾನು 45 ವರ್ಷಗಳಿಂದ ಪಕ್ಷ ಕಟ್ಟಿದ್ದು, ನಾಲ್ಕು ಬಾರಿ ಶಾಸಕನಾಗಿದ್ದೇನೆ. ನಮಗೆ ಪಕ್ಷದ ಟಿಕೆಟ್ ಬೇಕು ಎಂದು ಕೇಳುವುದು ನಮ್ಮ ಹಕ್ಕು. ನಾವು ನಮ್ಮ ಮನವಿ ಸಲ್ಲಿಸಿದ್ದೆವು. ಅವರು ಅವರ ಮನವಿ ಸಲ್ಲಿಸಿದ್ದರು. ಪಕ್ಷದ ನಾಯಕರು ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ ಎಂದಿದ್ದಾರೆ. ಜತೆಗೆ ಟಿಕೆಟ್ ಸಿಗದವರಿಗೆ ರಾಜಕೀಯ ಸ್ಥಾನಮಾನ ನೀಡಿ, ಗೌರವ ನೀಡುವುದಾಗಿ ಭರವಸೆ ನೀಡಿದ್ದಾರೆ. ಅದಕ್ಕೆ ನಾವೆಲ್ಲರೂ ಒಪ್ಪಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾವು ಒಂದಾಗಿ ಕೆಲಸ ಮಾಡುತ್ತೇವೆ.’

ರಾಜ್ಯದ ಹಿತದೃಷ್ಟಿಯಿಂದ ಪಕ್ಷದ ತೀರ್ಮಾನಕ್ಕೆ ಬದ್ಧ : ಶ್ರೀನಿವಾಸ ಮಾನೆ

‘ವರಿಷ್ಠರ ಮುಂದೆ ಸುದೀರ್ಘವಾಗಿ ನಮ್ಮ ಅಭಿಪ್ರಾಯ ಮಂಡಿಸಿದ್ದು, ನಮ್ಮ ನಾಯಕರು ಅದನ್ನು ಗಮನಿಸಿದ್ದಾರೆ. ಪಕ್ಷ ಹಾಗೂ ಅದರ ಮೇಲೆ ನಂಬಿಕೆ ಇಟ್ಟಿರುವ ಜನರಿಗಾಗಿ, ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ, ರಾಜ್ಯದ ಹಿತದೃಷ್ಟಿಯಿಂದ ನಮ್ಮ ಭಿನ್ನಾಭಿಪ್ರಾಯ ಬದಿಗಿಟ್ಟು, ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿ ಒಮ್ಮತದಿಂದ ಚುನಾವಣೆ ಎದುರಿಸಲು ನಾವು ನಿರ್ಧರಿಸಿದ್ದೇವೆ.’

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
ಟಿ 20 ವಿಶ್ವಕಪ್: ಎಂಎಸ್ ಧೋನಿಯನ್ನು ಮಾರ್ಗದರ್ಶಕರಾಗಿ ಏಕೆ ಕರೆತರಲಾಯಿತು ?

ಟಿ 20 ವಿಶ್ವಕಪ್: ಎಂಎಸ್ ಧೋನಿಯನ್ನು ಮಾರ್ಗದರ್ಶಕರಾಗಿ ಏಕೆ ಕರೆತರಲಾಯಿತು ?

B. Z. Zameer Ahmed Khan :  ಇಡಿ ಅಧಿಕಾರಿಗಳ ಪೋನ್‌ ಕರೆ – ಇಡಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಜಮೀರ್ ಅಹ್ಮದ್

B. Z. Zameer Ahmed Khan : ಇಡಿ ಅಧಿಕಾರಿಗಳ ಪೋನ್‌ ಕರೆ - ಇಡಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಜಮೀರ್ ಅಹ್ಮದ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist