Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Mysore Dasara : ನಾಡಹಬ್ಬ ದಸರಾ ಬಗ್ಗೆ ಅನೇಕರಿಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು!

Secular TVbySecular TV
A A
Reading Time: 2 mins read
Mysore Dasara : ನಾಡಹಬ್ಬ ದಸರಾ ಬಗ್ಗೆ ಅನೇಕರಿಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು!
0
SHARES
Share to WhatsappShare on FacebookShare on Twitter

ಮೈಸೂರು : ಪ್ರತಿವರ್ಷ ನವರಾತ್ರಿ ಸಮಯದಲ್ಲಿ ರಾಜ್ಯದ ಹಂಪಿ, ಕೊಡಗು, ಮಂಗಳೂರು, ಶಿವಮೊಗ್ಗ, ದಾಂಡೇಲಿ ಸೇರಿದಂತೆ ಹಲವು ಕಡೆಗಳಲ್ಲಿ ನಾಡಹಬ್ಬ ದಸರಾ ಆಚರಿಸಲಾಗುತ್ತದೆ. ವಿಜಯ ದಶಮಿಯ ದಿನದಂದು ವಿಶೇಷ ರೀತಿಯಲ್ಲಿ ಮೆರವಣಿಗೆ ಸಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇರೆಲ್ಲ ಊರುಗಳಿಗಿಂತ ಹೆಚ್ಚು ವಿಜೃಂಭಣೆ, ಸಂಭ್ರಮದಿಂದ ದಸರಾ ಜರಗುತ್ತದೆ. ಇಲ್ಲಿನ ದಸರಾವನ್ನು ಕಣ್ತುಂಬಿಸಿಕೊಳ್ಳಲು ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯ ಹಾಗೂ ಹೊರದೇಶದ ಜನರು ಕೂಡ ಹವಣಿಸುತ್ತಾರೆ. ಇವೆಲ್ಲ ಎಲ್ಲರಿಗೂ ತಿಳಿದಿರುವ ವಿಷಯಗಳು. ಆದರೆ ಮೈಸೂರಿನ ದಸರಾ ಇತಿಹಾಸ, ಮಹತ್ವದ ಬಗ್ಗೆ ಅನೇಕ ಕುತೂಹಲಕಾರಿ ವಿಷಯಗಳಿವೆ. ಈ ಬಗ್ಗೆ ತಿಳಿಯೋಣ ಬನ್ನಿ.

ನಾಲ್ಕು ಶತಮಾನಗಳ ಇತಿಹಾಸ! ಮೈಸೂರಿನ ಮಹಾರಾಜರಾಗಿದ್ದ ಒಂದನೇ ರಾಜಾ ಒಡೆಯರ್‌ರವರು 1610ನೇ ಇಸವಿಯಲ್ಲಿ ದಸರಾ ಆರಂಭಿಸಿದರು. ಈ ಪ್ರಕಾರ ಈಗ ಮೈಸೂರಿನಲ್ಲಿ ನಡೆಯುತ್ತಿರುವುದು 412ನೇ ದಸರಾ ಉತ್ಸವ. ಆದರೆ, ಒಡೆಯರ್‌ ಆಳ್ವಿಕೆಗೂ ಮೊದಲು ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯರ ಕಾಲದಲ್ಲೇ ದಸರಾ ಆಚರಿಸಲಾಗುತ್ತಿತ್ತು, ಕಾಲಕ್ರಮೇಣ ನಿಂತು ಹೋಗಿದ್ದ ಪದ್ಧತಿಯನ್ನು ಒಂದನೇ ರಾಜಾ ಒಡೆಯರ್‌ ಪುನರಾರಂಭಿಸಿದರು ಎಂಬ ವಾದವೂ ಇದೆ.

ದೇವಿ ಭಾಗವತದಲ್ಲಿ ದಸರಾ ಹಿನ್ನೆಲೆ! ಪುರಾಣ ಗ್ರಂಥವಾದ ದೇವಿ ಭಾಗವತದಲ್ಲಿ ಮಹಿಷಾಸುರನ ವಧೆ ಬಗ್ಗೆ ಉಲ್ಲೇಖವಿದೆ. ಕೋಣನ ತಲೆಯುಳ್ಳ ಮಹಿಷಾಸುರನು ನಗರವನ್ನು ಆಳುತ್ತಿದ್ದನು. ಬ್ರಹ್ಮನ ವರ ಪಡೆದು, ತನಗೆ ಸಾವಿಲ್ಲವೆಂದು ಮೆರೆಯುತ್ತಿದ್ದ ಆತನನ್ನು ಪಾರ್ವತಿಯು ಚಾಮುಂಡೇಶ್ವರಿಯಾಗಿ ಬಂದು ಸಂಹರಿಸಿದಳು ಎಂಬ ಪೌರಾಣಿಕ ಪ್ರತೀತಿ ಇದೆ. ಮಹಿಷಾಸುರನು ಆಳುತ್ತಿದ್ದ ನಗರವಾಗಿದ್ದರಿಂದ ಮೈಸೂರು ಎಂಬ ಹೆಸರು ಬಂದಿದೆ.

ಶ್ರೀರಂಗಪಟ್ಟಣದಿಂದ ಟ್ರ್ಯಾನ್ಸ್‌ಫರ್‌! ಪ್ರಸ್ತುತ ಮೈಸೂರಿನಲ್ಲಿ ದಸರಾವನ್ನು ಆಚರಿಸಲಾಗುತ್ತಿದೆಯಾದರೂ, ಇದು ಆರಂಭವಾಗಿದ್ದು ಮಾತ್ರ ಸಮೀಪದ ಶ್ರೀರಂಗಪಟ್ಟಣದಲ್ಲಿ. 1800ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್‌ರವರು ಮೈಸೂರು ಸಂಸ್ಥಾನದ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿದ ನಂತರವಷ್ಟೇ ಮೈಸೂರಿನಲ್ಲಿ ದಸರಾ ಆಚರಿಸಲಾಗುತ್ತಿದೆ.

ಮಡಿಕೇರಿಯಲ್ಲೂ ನಡೆಯುತ್ತಿತ್ತು ವೈಭವದ ದಸರಾ! ಒಂದಾನೊಂದು ಕಾಲದಲ್ಲಿ ಮಡಿಕೇರಿಯಲ್ಲಿ ಕೂಡ ಮೈಸೂರಿನಷ್ಟೇ ವೈಭವದಿಂದ ದಸರಾ ಉತ್ಸವ ನಡೆಯುತ್ತಿತ್ತು. 1781ರಿಂದ 1809ರವರೆಗೆ ಕೊಡಗನ್ನು ಆಳಿದ ದೊಡ್ಡವೀರರಾಜೇಂದ್ರ ರಾಜರು ಆಯುಧಪೂಜೆ, ವಿಶೇಷ ದರ್ಬಾರ್, ಕುದುರೆ ಮತ್ತು ಆನೆಯ ಜಂಬೂಸವಾರಿ ಜೊತೆಗೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ಬ್ರಿಟಿಷರು ಕೊಡಗಿನ ರಾಜರನ್ನು ಬಂಧಿಸಿದ ನಂತರ ವೈಭವದ ದಸರಾ ಅಲ್ಲಿ ಸ್ಥಗಿತಗೊಂಡಿತು.

ಅಂಬಾರಿಗಿಂತಲೂ ತೂಕ ಅಂಬಾರಿಯ ಇತಿಹಾಸ! ಮೈಸೂರು ದಸರಾ ಪ್ರಮುಖ ಆಕರ್ಷಣೆ ಎಂದರೆ ಬರೊಬ್ಬರಿ 750 ಕೆ.ಜಿ. ತೂಕದ ರತ್ನಖಚಿತ ಚಿನ್ನದ ಅಂಬಾರಿ. ಇದು ಮೂಲತಃ ಮಹಾರಾಷ್ಟ್ರದ ದೇವಗಿರಿಯಲ್ಲಿತ್ತು. ತನ್ನ ಸಾಮ್ರಾಜ್ಯವು ನಾಶವಾಗುವ ಸಂದರ್ಭದಲ್ಲಿ ಸಂದರ್ಭದಲ್ಲಿ ದೇವಗಿರಿಯ ರಾಜ ಮುಮ್ಮಡಿ ಸಿಂಗ ನಾಯಕನು ಅದನ್ನು ಬಳ್ಳಾರಿ ಬಳಿಯ ರಾಮದುರ್ಗದಲ್ಲಿ ಕೋಟೆಯಲ್ಲಿ ಮುಚ್ಚಿಟ್ಟನು. 1327ರಲ್ಲಿ ದೆಹಲಿ ಸುಲ್ತಾನರ ದಾಳಿ ಸಂದರ್ಭದಲ್ಲಿ ಹಕ್ಕಬುಕ್ಕರು ಈ ಅಂಬಾರಿಯನ್ನು ಹುತ್ತವೊಂದರಲ್ಲಿ ಮುಚ್ಚಿಟ್ಟರು.

ದೆಹಲಿ ಸುಲ್ತಾನರ ಸಾಮ್ರಾಜ್ಯ ಅಂತ್ಯವಾದ ನಂತರ ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಆರಂಭಿಸಿ, ಹಂಪಿಯನ್ನು ಎರಡನೇ ರಾಜಧಾನಿ ಮಾಡಿಕೊಂಡು ಅಲ್ಲಿಗೆ ಅಂಬಾರಿಯನ್ನು ಸ್ಥಳಾಂತರಿಸಿದರು. ವಿಜಯನಗರ ಸಾಮ್ರಾಜ್ಯದ ಪತನದ ಸಂದರ್ಭದಲ್ಲಿ ಅಂಬಾರಿಯನ್ನು ಆಂಧ್ರದ ಪೆನಗೊಂಡಕ್ಕೆ ಕೊಂಡೊಯ್ದು, ಸುರಕ್ಷಿತವಾಗಿ ಇರಿಸಲಾಯಿತು. ಮೈಸೂರಿನಲ್ಲಿ ಒಡೆಯರ್‌ ಆಳ್ವಿಕೆ ಆರಂಭವಾದ ನಂತರ ಅದನ್ನು ಶ್ರೀರಂಗಪಟ್ಟಣಕ್ಕೆ ತರಲಾಯಿತು. ಹೀಗೆ ಸುಮಾರು 800 ವರ್ಷಗಳ ಇತಿಹಾಸವನ್ನು ಅಂಬಾರಿ ಹೊಂದಿದೆ.

Dasara #MysuruDasara #Mysore #Ambari #ದಸರಾ #ಮೈಸೂರುದಸರಾ #ಮೈಸೂರು #ಅಂಬಾರಿ

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
New Delhi Fire Incident : ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ – ಯಾವುದೇ ಪ್ರಾಣಹಾನಿಯಾಗಿಲ್ಲ

New Delhi Fire Incident : ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ - ಯಾವುದೇ ಪ್ರಾಣಹಾನಿಯಾಗಿಲ್ಲ

Sabari Male Yatre : ಶಬರಿಮಲೆ ಯಾತ್ರೆ ಆರಂಭವಾಗುವ ಹಿನ್ನೇಲೆ – ಕೇರಳ ಸರ್ಕಾರದ ಮಾರ್ಗಸೂಚಿಗಳು

Sabari Male Yatre : ಶಬರಿಮಲೆ ಯಾತ್ರೆ ಆರಂಭವಾಗುವ ಹಿನ್ನೇಲೆ - ಕೇರಳ ಸರ್ಕಾರದ ಮಾರ್ಗಸೂಚಿಗಳು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist