ನರೇಗಲ್ : ಹಾನಗಲ್ ನ ನರೇಗಲ್ ನಲ್ಲಿ ಉಪಚುನಾವಣೆ ಇರುವ ಹಿನ್ನೇಲೆ ತಮ್ಮ ಪ್ರಚಾರ ಬಾಷಣದಲ್ಲಿ ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ನೈತಿಕ ಪೊಲೀಸ್ ಗಿರಿಯನ್ನು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡಿದ್ದನ್ನು ಪ್ರಸ್ತಾಪಿಸುತ್ತ ಹೊಸದಾಗಿ ಗೃಹ ಸಚಿವರಾಗಿರುವ ಅರಗ ಜಾನೇಂದ್ರ ಅಲ್ಲ ಬದಲಿಗೆ ಅಜ್ಞಾನೇಂದ್ರ ಎಂದು ಹೇಳಿದ್ದಾರೆ.

ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ಅವರು “ಈ ಚುನಾವಣೆಯನ್ನು ನಾವು ನಮ್ಮ ಪಕ್ಷದ ನೀತಿ ಹಾಗೂ ಕಾರ್ಯಕ್ರಮಗಳ ಆಧಾರದ ಮೇಲೆ ಎದುರಿಸುತ್ತಿದ್ದೇವೆ. ಜನರಿಗೆ ಯಾರು ಸಹಾಯ ಮಾಡಿದ್ದಾರೆ ಎಂಬುದು ಇಲ್ಲಿ ಚರ್ಚೆ ಆಗಬೇಕಾದ ಮುಖ್ಯ ಅಂಶ
ನಿನ್ನೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಿದ್ದರಾಮಯ್ಯ ಸರ್ಕಾರ ಏನು ಮಾಡಿದೆ ಕೇಳಿ ಎಂದು ಹೇಳಿದ್ದಾರೆ. ನಮ್ಮ ಮನೋಹರ್ ತಹಶೀಲ್ದಾರ್ ಅವರು ಶಾಸಕರಾಗಿದ್ದಾಗ ಈ ಪಂಚಾಯ್ತಿ ವ್ಯಾಪ್ತಿಯ ಅಭಿವೃದ್ಧಿ ಯೋಜನೆಗಳಿಗೆ 2.30 ಕೋಟಿ ರು. ಖರ್ಚು ಮಾಡಿರುವ ಪಟ್ಟಿ ಇದೆ.
ಇದನ್ನೂ ಓದಿ : Mumbai Fire Incident : ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ – ಒಂದು ಸಾವು
ಸಿದ್ದರಾಮಯ್ಯ ಅವರು ಏನು ಮಾಡಿದರು ಎಂದು ಕೇಳುವುದಕ್ಕಿಂತ, ಎಲ್ಲ ಅಧಿಕಾರ ಹಾಗೂ ದಾಖಲೆಗಳನ್ನು ಹೊಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಐದು ವರ್ಷಗಳ ಕಾಂಗ್ರೆಸ್ ಸರ್ಕಾರ ಈ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಏನು? ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆ ಏನು ಎಂಬುದನ್ನು ಜನರ ಮುಂದಿಡಿ. ಆಗ ಚರ್ಚೆ ಮಾಡೋಣ. ಈ ಸವಾಲು ಸ್ವೀಕರಿಸಲು ನಾವು ಸಿದ್ಧ.
ಈ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಡಬಲ್ ಇಂಜಿನ್ ಸರ್ಕಾರ ಮಾಡಿ ಎಂದು ಕೇಳಿಕೊಂಡಿದ್ದರು. ಜನರೂ ಅವರಿಗೆ ಮತ ಕೊಟ್ಟಿದ್ದಾರೆ. ಇಲ್ಲಿರುವ ನೀವೇಲ್ಲರೂ ರೈತರಿದ್ದೀರಿ. ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪನವರು ತಾವು ಅಧಿಕಾರಕ್ಕೆ ಬಂದರೆ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು. ನಿಮ್ಮ ಆದಾಯ ಡಬಲ್ ಆಗಿದೆಯಾ? ನಿಮ್ಮ ಜಿಲ್ಲೆಯವರೇ ಕೃಷಿ ಸಚಿವರು. ನಿಮ್ಮ ಬೆಳೆಗೆ ನೀಡುವ ಬೆಲೆ ಡಬಲ್ ಆಗಿದೆಯಾ? ಗೊಬ್ಬರ ಬೆಲೆ ಕಡಿಮೆ ಆಗಿದೆಯಾ? ನರೇಗಾ ಕೂಲಿ ಹೆಚ್ಚಾಗಿದೆಯಾ? ಯಾವುದೂ ಇಲ್ಲ.
ಬೊಮ್ಮಾಯಿ ಅವರು ಕಾಲ್ ಸೆಂಟರ್ ತೆರೆಸಿದ್ದು, ಬಿಜೆಪಿ ನಿಮಗೆ ಅಡುಗೆ ಸಿಲಿಂಡರ್ ಕೊಟ್ಟಿದೆ, ಹೀಗಾಗಿ ನೀವು ಬಿಜೆಪಿಗೆ ವೋಟ್ ಹಾಕಿ ಎಂದು ಫೋನ್ ಮಾಡಿಸಿ ಹೇಳಿಸುತ್ತಿದ್ದಾರೆ. ಅದಕ್ಕೆ ಇಲ್ಲಿನ ಜನ, ಸಿದ್ದರಾಮಯ್ಯನವರು ಉಚಿತವಾಗಿ ಅಕ್ಕಿ ಕೊಟ್ಟಿದ್ದಾರೆ, ಅವರಿಗೆ ನಾವು ಏನು ಮಾಡಬೇಕು ಎಂದು ಮರುಪ್ರಶ್ನಿಸುತ್ತಿದ್ದಾರೆ. ನಾವು ಕಾಂಗ್ರೆಸ್ ಕೊಟ್ಟ ಅಕ್ಕಿಯನ್ನು ನಿತ್ಯ ಊಟ ಮಾಡುತ್ತಿದ್ದು, ನಾವು ಕಾಂಗ್ರೆಸ್ ಗೇ ಮತ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ.
ಜನರಿಗೆ ಅಚ್ಛೇ ದಿನ ಕೊಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ನಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಡೀಸೆಲ್ ಬೆಲೆಯನ್ನು 50 ರೂ. ಒಳಗೆ ಇಡುತ್ತೇವೆ ಎಂದಿದ್ದರು. 2013 ರಲ್ಲಿ 50 ರು. ಇದ್ದ ಪೆಟ್ರೋಲ್ ಈಗ 110 ರು. ಆಗಿದೆ. ಇದು ಅಚ್ಛೇ ದಿನನಾ? 2014ರಲ್ಲಿ ಅಡುಗೆ ಅನಿಲದ ಸಿಲಿಂಡರ್ 410 ರು. ಇತ್ತು. ಈಗ ಅದು 980 ರು. ಆಗಿದೆ. ಇದು ಅಚ್ಛೇ ದಿನಾನ? ಅಡುಗೆ ಎಣ್ಣೆ 99 ರು. ಇತ್ತು. ಈಗ 200 ರು. ಆಗಿದೆ. ಮೋದಿ ಅವರು ಹೇಳಿದಂತೆ ಪಕೋಡಾ ಮಾರುವುದಾದರೂ ಹೇಗೆ? ಇದು ಈ ಚುನಾವಣೆಯ ಪ್ರಶ್ನೆ.
ಜನರ ಖಾತೆಗೆ ನೇರವಾಗಿ ಹಣ ಹಾಕುತ್ತೇನೆ ಎಂದಿದ್ದರು ಯಾರ ಖಾತೆಗಾದರೂ 15 ಲಕ್ಷ ರು. ಹಣ ಹಾಕಿದರಾ? ಕೋವಿಡ್ ಸಂದರ್ಭದಲ್ಲಿ 15 ಸಾವಿರ ಆದರೂ ಹಾಕಿದರಾ?
ಇದನ್ನೂ ಓದಿ : ಸಂಜನಾ ಗಲ್ರಾನಿಗೆ ವಂಚನೆ, ಸ್ನೇಹಿತರ ವಿರುದ್ಧ ದೂರು ದಾಖಲಿಸಿದ ನಟಿ!
ಬೊಮ್ಮಾಯಿ ಅವರ ಸರ್ಕಾರದಲ್ಲಿ ಎಂತಹ ಕಾನೂನು ಇದೆ ಎಂದರೆ, ಅವರು ಇಂತಹ ಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಬಿಜೆಪಿಯವರಿಗೆ ಪೊಲೀಸ್ ಇಲಾಖೆಯೇ ಬೇಡವಾಗಿದೆ. ಅವರದೇ ಆದ ನೈತಿಕ ಪೊಲೀಸ್ ಗಿರಿಯನ್ನು ಮುಖ್ಯಮಂತ್ರಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ಹೊಸದಾಗಿ ಗೃಹ ಸಚಿವರಾಗಿರುವ ಆರಗ ಜಾನೇಂದ್ರ ಅಲ್ಲ, ಅಜ್ಞಾನೇಂದ್ರ. ನಮ್ಮ ಪಕ್ಷದ ಬಟ್ಟೆ ಹಾಕಿಕೊಂಡರೆ ಏನು ತಪ್ಪು ಎಂದು ಕೇಳುತ್ತಿದ್ದಾರೆ. ಈ ಚುನಾವಣೆ ಮುಗಿಯಲಿ 2 ಜಿಲ್ಲೆಗಳಿಗೆ ಹೋಗಿ, ಸಂವಿಧಾನದ ಪ್ರತಿ, ರಾಷ್ಟ್ರಧ್ವಜ, ಪೊಲೀಸ್ ಖಾಕಿ ಸಮವಸ್ತ್ರ, ಪೊಲೀಸ್ ಮ್ಯಾನುಯೆಲ್ ಪ್ರತಿಯನ್ನು ಉಡುಗೊರೆಯಾಗಿ ನೀಡುತ್ತೇನೆ. ಅದಕ್ಕೂ ಮುನ್ನ ನೀವು ಹಸ್ತದ ಗುರುತಿಗೆ ಮತಹಾಕಿ ಮಾನೆ ಅವರನ್ನು ವಿಧಾನಸೌಧದಲ್ಲಿ ಕೂರಿಸಬೇಕು. ಎಂದು ಹೇಳಿದ್ದಾರೆ.