ಬೆಂಗಳೂರು: ಚಂದನವನದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಅವರ ನಟನೆಯ ಪೃಥ್ವಿ ಮತ್ತು ರಾಜಕುಮಾರ ಚಿತ್ರಗಳನ್ನು ಅವರೊಟ್ಟಿಗೆ ನೋಡಿದ್ದೆ ಯುವರತ್ನ ನನ್ನು ಕಳೆದುಕೊಂಡ ಕರುನಾಡು ಬರೆದಾಗಿದೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಅದೇರೀತಿ ಮಾಜಿ ಸಿಎಂ ಸಿದ್ದರಾಮಯ್ಯನವರು ಕನ್ನಡಿಗರ ಮನೆ ಮಗನಂತಿದ್ದ ಪ್ರತಿಭಾವಂತ ನಟ ಪುನೀತ್ ರಾಜಕುಮಾರ್. ಇಂದು ಅವರ ಅಗಲಿಕೆ ದುಃಖ ತಂದಿದೆ ಅವರ ಅಭಿಮಾನಿಗಳು ಮತ್ತು ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಯುವರತ್ನ ಪುನೀತ್ ರಾಜಕುಮಾರ್ ರವರ ಅಗಲಿಕೆಗೆ ಕಂಬನಿ ಮಿಡಿದ ಡಿಕೆಶಿ ಸ್ವಂತ ಸಹೋದರ ನಂತಿದ್ದ ಪುನೀತ್ ಇಂದು ನಮ್ಮೊಂದಿಗಿಲ್ಲ ಎಂದರೆ ನಂಬಲಾಗುತ್ತಿಲ್ಲ ವಿಧಿ ನೀನೆಷ್ಟು ಕ್ರೂರಿ ಎನ್ನುತ್ತಾ ಪುನೀತ್ ನನಗೆ ಬಹಳ ಆತ್ಮೀಯರು ಕುಟುಂಬದ ಸ್ನೇಹಿತನಂತೆ ಇದ್ದರು ಎನ್ನುತ್ತಾ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಪುನೀತ್ ಅವರ ಆಗಲಿಕ್ಕೆ ಬರೀ ಚಿತ್ರರಂಗ ಮಾತ್ರವಲ್ಲ ಇಡೀ ನಾಡಿಗೆ ತುಂಬಲಾರದ ನಷ್ಟ ಎಂದಿದ್ದಾರೆ.

ಯುವರತ್ನನ ಅಗಲಿಕೆಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ತಮಿಳುನಾಡಿನ ಸಿಎಂ ಸ್ಟಾಲಿನ್ ಅವರು ಕೂಡ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಯುವರತ್ನ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಇದು ಸಾಯುವ ವಯಸ್ಸಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದಿನ ಪೀಳಿಗೆ ನಿಮ್ಮನ್ನು ನೆನಪಿನಲ್ಲಿ ಇಟ್ಟು ಕೊಳ್ಳುತ್ತೇ ಎಂದು ಟ್ವಿಟ್ ಮಾಡ್ದಿದ್ದಾರೆ.
A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti. pic.twitter.com/ofcNpnMmW3
— Narendra Modi (@narendramodi) October 29, 2021
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ರವರು ಸಹ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.
ಕೇರಳದ ಸಿಎಂ ಪಿಣರಾಯಿ ವಿಜಯನ್ ಪುನೀತ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ತಮಿಳು, ತೆಲುಗು, ಮಲಯಾಳಂ ಚಿತ್ರರಂಗ ಕೂಡ ಕಂಬನಿ ಮಿಡಿದಿದೆ.
ಪುನೀತ್ ಅವರ ಅಗಲಿಕೆಗೆ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಬಹಳ ದುಃಖವಾಗಿದೆ ಮೃದುಸ್ವಭಾವದ ನಟನನ್ನು ಕಳೆದುಕೊಂಡಿದ್ದು ಬೇಸರವಾಗಿದೆ ಎಂದಿದ್ದಾರೆ. ಪುನೀತ್ ಅಗಲಿಕೆಗೆ ರಾಹುಲ್ ಗಾಂಧಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ ಬೇಗ ಹೋಗಿ ಬಿಟ್ಟಿರಿ ಪುನೀತ್ ಎಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ.