Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Bitcoin Scam:ಬಿಟ್ ಕಾಯಿನ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಡಿಕೆಶಿ

Secular TVbySecular TV
A A
Reading Time: 1 min read
Bitcoin Scam:ಬಿಟ್ ಕಾಯಿನ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಡಿಕೆಶಿ
0
SHARES
Share to WhatsappShare on FacebookShare on Twitter

ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿ ತಲೆದಂಡವಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ‘ಬಿಟ್ ಕಾಯಿನ್ ಹಗರಣದಲ್ಲಿ ಪಕ್ಷದ ನಿರ್ಧಾರವನ್ನು ನಾನು ಈಗಾಗಲೇ ಹೇಳಿದ್ದೇನೆ.

ಪ್ರಕರಣದ ತನಿಖೆಯಾಗಿದೆ. ಇದನ್ನು ಇ.ಡಿ.ಗೆ ಹಸ್ತಾತರಿಸಲಾಗಿದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅವರು ನಡೆಸಿರುವ ತನಿಖೆ ಏನು? ಸಿಕ್ಕಿರುವ ಮಾಹಿತಿ ಏನು? ಏನೆಲ್ಲಾ ಸೀಜ್ ಮಾಡಿದ್ದಾರೆ? ಸೀಜ್ ಮಾಡಿಕೊಂಡ ಬಿಟ್ ಕಾಯಿನ್ ಯಾರ ವಾಲೆಟ್ ನಲ್ಲಿದೆ? ಹಗರಣದಲ್ಲಿ ಯಾರ ಹೆಸರು ಕೇಳಿಬಂದಿದೆ? ಇ.ಡಿ. ತನಿಖೆ ಸಂಬಂಧ ಪ್ರಧಾನಿಗಳಿಗೆ ಪತ್ರ ಬರೆದಿದ್ದು ಯಾರು? ಪೊಲೀಸ್ ಅಧಿಕಾರಿಗಳ ಹೇಳಿಕೆಗಳೇನು? ಎಷ್ಟು ಎಫ್ಐಆರ್ ದಾಖಲಾಗಿದೆ? ಎಂದು ಸರ್ಕಾರ ಮೊದಲು ಮಾಹಿತಿ ನೀಡಲಿ.

ಯಾವುದೋ ಗಲಾಟೆಯಲ್ಲಿ ಕಾಂಗ್ರೆಸ್ ನಾಯಕರ ಜತೆ ಆತ ಗುರುತಿಸಿಕೊಂಡಿದ್ದ ಎಂದು ಹೇಳುತ್ತಾರೆ? ಆ ಪ್ರಕರಣದಲ್ಲಿ ಏನಾಗಿತ್ತು? ಈಗ ಏನಾಗಿದೆ? ಎಂದು ಸರಕಾರವೇ ಹೇಳಬೇಕು. ಮಾಧ್ಯಮಗಳಲ್ಲಿ ಯಾರ ಹೆಸರು ಹೇಳದೆಯೇ ಅನೇಕ ವಿಚಾರಗಳನ್ನು ವರದಿ ಮಾಡಲಾಗುತ್ತಿದೆ. ಹೀಗಾಗಿ ನಾನು ಬೇರೆ ನಾಯಕರ ವೈಯಕ್ತಿಕ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರವಾಗಿ ನಾನು, ನಮ್ಮ ನಾಯಕರು ಮಾಹಿತಿ ಕಲೆಹಾಕುತ್ತಿದ್ದೇವೆ. ಮೊದಲು ಸರ್ಕಾರ ತನ್ನ ಬಳಿ ಇರುವ ಮಾಹಿತಿಯನ್ನು ನೀಡಲಿ. ನಾವು ವಿರೋಧ ಪಕ್ಷವಾಗಿ ನಮ್ಮ ಮಾಹಿತಿಯನ್ನು ಜನರ ಮುಂದೆ ಇಡುತ್ತೇವೆ. ನ್ಯಾಯಾಲಯಕ್ಕೆ ಮಾಹಿತಿ, ದಾಖಲೆ ಒದಗಿಸಬೇಕಾದ ಜವಾಬ್ದಾರಿ ಸರ್ಕಾರದ್ದು’ ಎಂದರು.

ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅಧಿಕಾರದಲ್ಲಿಲ್ಲ. ಅಧಿಕಾರದಲ್ಲಿದ್ದಿದ್ದರೆ ಇಷ್ಟು ಹೊತ್ತಿಗೆ ಎಲ್ಲ ಮಾಹಿತಿ ಬಹಿರಂಗಪಡಿಸುತ್ತಿದ್ದೆ. ಕಾಂಗ್ರೆಸ್ ನಾಯಕರ ಮಗನ ವಿಚಾರ ಮಾತನಾಡುವುದಾದರೆ, ಆತ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಆತನನ್ನು ಬಂಧಿಸಲಿ. ಯಾವ ಆಧಾರದ ಮೇಲೆ ಕಾಂಗ್ರೆಸ್ ನಾಯಕರ ಮಕ್ಕಳ ಹೆಸರು ತರುತ್ತಿದ್ದಾರೆ. ತಪ್ಪು ಮಾಡಿದವರನ್ನು ಸುಮ್ಮನೆ ಬಿಡುವುದೇಕೆ? ಈ ಪ್ರಕರಣದಲ್ಲಿ ಯಾರ್ಯಾರ ಹೆಸರೆಲ್ಲಾ ಕೇಳಿ ಬಂದಿದೆ? ಪ್ರಧಾನಿಗೆ ಪತ್ರ ಬರೆದಿದ್ದು ಯಾರು ಎಂದು ಗೃಹ ಮಂತ್ರಿಗೆ ಗೊತ್ತಿದೆಯಲ್ಲ, ಅವರು ಆರೋಪಿಗಳನ್ನು ರಕ್ಷಣೆ ಮಾಡುತ್ತಿರುವುದೇಕೆ? ಈ ಎಲ್ಲ ಮಾಹಿತಿಗಳನ್ನು ಜನರ ಮುಂದೆ ಬಹಿರಂಗ ಪಡಿಸಲಿ.

ನಮಗೆ ಈಗ ಬಂದಿರುವುದು ಪೊಲೀಸ್ ಇಲಾಖೆ ಹಾಗೂ ಬಿಜೆಪಿ ನಾಯಕರು, ಅಧಿಕಾರಿಗಳು ಕೊಟ್ಟಿರುವ ಹಿಂಬಾಗಿಲಿನ ಮಾಹಿತಿ. ಹೀಗಾಗಿ ಅಧಿಕಾರದಲ್ಲಿರುವ ಬಿಜೆಪಿ ನ್ಯಾಯಾಲಯಕ್ಕೆ ದಾಖಲೆ ನೀಡಲಿ, ಜನರ ಮುಂದೆ ಬಹಿರಂಗಪಡಿಸಲಿ’ ಎಂದರು.

ಮುಖ್ಯಮಂತ್ರಿಗಳ ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು ಎಂದ ಮೇಲೆ ರಾಜಕೀಯ, ಸರ್ಕಾರದ ಅಧಿಕೃತ ವಿಚಾರಗಳಿರುತ್ತವೆ. ನಾನು ಮಾಧ್ಯಮಗಳಲ್ಲಿ ನೋಡಿದ ಪ್ರಕಾರ ಮುಖ್ಯಮಂತ್ರಿಗಳು ತಾವು ಪ್ರಧಾನಿ ಹಾಗೂ ಬಿಜೆಪಿ ಅಧ್ಯಕ್ಷ ನಡ್ಡಾ ಅವರ ಭೇಟಿಗೆ ಸಮಯಾವಕಾಶ ಕೇಳಿರುವುದಾಗಿ ಹೇಳಿಕೆ ನೀಡಿದ್ದಾರೆ. ಅವರು ಯಾಕೆ ಹೋಗಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರ ಅಧಿಕೃತ, ವೈಯಕ್ತಿಕ ಪ್ರವಾಸದ ಬಗ್ಗೆ ನಾನು ಮಾತನಾಡುವುದಿಲ್ಲ. ಆ ರೀತಿ ಏನಾದರೂ ಮಾಹಿತಿ ಬಂದರೆ ನಾನು ಮಾತನಾಡುತ್ತೇನೆ’ ಎಂದರು.

ಪ್ರಧಾನಿ ಕಾರ್ಯಾಲಯ ಬಿಟ್ ಕಾಯಿನ್ ಹಗರಣ ಸಂಬಂಧ ಮಾಹಿತಿ ಪಡೆದಿದಿಯಂತೆ ಎಂಬ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಟ್ ಕಾಯಿನ್ ಸಂಬಂಧ ದಾಖಲಾಗಿರುವ ಪ್ರಕರಣ ಸಾರ್ವಜನಿಕ ದಾಖಲೆಯಾಗಿದೆ. ಬಿಟ್ ಕಾಯಿನ್ ಹೆಸರಲ್ಲೇ ಎಫ್ಐಆರ್ ದಾಖಲಾಗಿದೆ. ಕೆಲವರು ನಮ್ಮ ತಂದೆಯವರನ್ನು ಕರೆದುಕೊಂಡು ಹೋಗಿ ಕೂರಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಾರೆ. ನ್ಯಾಯಾಲಯ ಮೆಡಿಕಲ್ ರಿಪೋರ್ಟ್ ನೀಡಿ ಎಂದು ಹೇಳಿದ್ದರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡುವುದಿಲ್ಲ ಎಂದು ಹೇಳುತ್ತಾರೆ. ಮೊನ್ನೆ ಒಬ್ಬ ಹುಡುಗನನ್ನು ಕರೆದುಕೊಂಡು ಹೋಗಿ ಒಂದು ತಾಸಿನಲ್ಲೇ ಬಂಧಿಸಿದ್ದಾರೆ’ ಎಂದರು.

ಇದನ್ನೂ ಓದಿ: ಯೋಧ ಪರಿವಾರದಲ್ಲಿ ಜನಿಸಿದ ಟಿಪ್ಪು ಆಧುನಿಕತೆಗೆ ಆದ್ಯತೆ ನೀಡಿದ ಪರಿಸರ ಪ್ರೇಮಿ ಚಾಣಾಕ್ಷ ಹೋರಾಟಗಾರ

ಹಗರಣದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಹೆಸರು ಕೇಳಿ ಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾರ ಮಕ್ಕಳ ಹೆಸರು ಕೇಳಿ ಬರುತ್ತದೆಯೋ ಬರಲಿ. ನಾನು ದಾಖಲೆ ಇಲ್ಲದೇ ಬೇರೆಯವರಂತೆ ಬೇಕಾಬಿಟ್ಟಿ ಮಾತನಾಡಲು ಸಾಧ್ಯವಿಲ್ಲ’ ಎಂದರು.

ಈ ಹಗರಣದ ಮಟ್ಟ ಎಷ್ಟು ಎಂಬ ಪ್ರಶ್ನೆಗೆ, ‘ಈ ಹಗರಣದ ಪ್ರಮಾಣ ಲೆಕ್ಕ ಹಾಕಲು ನನಗೆ ಸಾಧ್ಯವಾಗುತ್ತಿಲ್ಲ. ಅದರ ಅಂಕಿ-ಅಂಶಗಳನ್ನು ನೋಡಿದರೆ ನಾನೇ ಮೂರ್ಛೆ ಬೀಳಬಹುದು ಎಂದು ಸುಮ್ಮನಿದ್ದೇನೆ’ ಎಂದರು.

ಈ ಹಗರಣದಿಂದ ಬೊಮ್ಮಾಯಿ ಅವರ ಸರ್ಕಾರಕ್ಕೆ ಕಂಟಕ ಎದುರಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಯಾಕೆ ಬೇರೆಯವರ ಮೇಲೆ ಅನಗತ್ಯವಾಗಿ ಆರೋಪ ಮಾಡಲಿ. ತನಿಖೆಯಾಗಿ ಮಾಹಿತಿ ಹೊರಬರಲಿ. ಗೃಹ ಸಚಿವರು ನಮ್ಮ ನಾಯಕರಾ’ ಎಂದು ಮರುಪ್ರಶ್ನಿಸಿದರು.

ಕಾಂಗ್ರೆಸ್ ದಲಿತ ಸಿಎಂ ಹೆಸರು ಘೋಷಿಸಲಿ ಎಂಬ ಬಿಜೆಪಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಬಿಜೆಪಿ ಅವರು ಮೊದಲು ತಮ್ಮ ಪಕ್ಷದ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿ. ನಮ್ಮ ಪಕ್ಷದ ವಿಚಾರ ಅವರಿಗೇಕೆ?’ ಎಂದು ಪ್ರಶ್ನಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ‘ನ. 14 ರಂದು ಪಕ್ಷದ ಸದಸ್ಯತ್ವ ಅಭಿಯಾನದ ಉದ್ಘಾಟನೆ ಕಾರ್ಯಕ್ರಮವಿದೆ. ಆ ನಂತರ ಸಭೆ ಕರೆದಿದ್ದೇನೆ. ರಾಜ್ಯಮಟ್ಟದ ನಾಯಕರು, ಪರಾಜಿತ ಅಭ್ಯರ್ಥಿಗಳನ್ನು ಕರೆದಿದ್ದು, ಅರ್ಜಿ ಹಾಕಿರುವವರ ಪಟ್ಟಿಯನ್ನು ಇಟ್ಟುಕೊಂಡು ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹಿಸುತ್ತೇವೆ’ ಎಂದರು.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ಹಾಸನಾಂಬೆಗೆ ಭಕ್ತರು ಬರೆದ್ರು ವಿಧವಿಧದ ಪತ್ರ: ಒಂದು ಪರೀಕ್ಷೆ ಪಾಸು ಮಾಡಲು, ಇನ್ನೊಂದು ಮಗನ ಮದುವೆಯಾಗಲು!

ಹಾಸನಾಂಬೆಗೆ ಭಕ್ತರು ಬರೆದ್ರು ವಿಧವಿಧದ ಪತ್ರ: ಒಂದು ಪರೀಕ್ಷೆ ಪಾಸು ಮಾಡಲು, ಇನ್ನೊಂದು ಮಗನ ಮದುವೆಯಾಗಲು!

Red Rain Phenomenon : ಮಳೆ ಬಂದರೆ ಓಕೆ ಆದರೆ ಕೆಂಪು ಬಣ್ಣದ ಮಳೆ ಬಂದರೆ..! ಕೇರಳದ ಹಲವೆಡೆ ಸುರಿದಿತ್ತು ಬಣ್ಣಬಣ್ಣದ ಮಳೆ

Red Rain Phenomenon : ಮಳೆ ಬಂದರೆ ಓಕೆ ಆದರೆ ಕೆಂಪು ಬಣ್ಣದ ಮಳೆ ಬಂದರೆ..! ಕೇರಳದ ಹಲವೆಡೆ ಸುರಿದಿತ್ತು ಬಣ್ಣಬಣ್ಣದ ಮಳೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist