Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Parasailing: ಪ್ಯಾರಾಸೈಕ್ಲಿಂಗ್‌ ಮಾಡುವ ವೇಳೆ ಹಗ್ಗ ತುಂಡಾಗಿ ಸಮುದ್ರಕ್ಕೆ ಬಿದ್ದ ದಂಪತಿಗಳು! ಎದೆ ಝಲ್‌ ಎನಿಸುವ ವೀಡಿಯೋ ವೈರಲ್‌

Secular TVbySecular TV
A A
Reading Time: 1 min read
Parasailing: ಪ್ಯಾರಾಸೈಕ್ಲಿಂಗ್‌ ಮಾಡುವ ವೇಳೆ ಹಗ್ಗ ತುಂಡಾಗಿ ಸಮುದ್ರಕ್ಕೆ ಬಿದ್ದ ದಂಪತಿಗಳು! ಎದೆ ಝಲ್‌ ಎನಿಸುವ ವೀಡಿಯೋ ವೈರಲ್‌
0
SHARES
Share to WhatsappShare on FacebookShare on Twitter

ದಿಯು:(ನ.17) Parasailing: ಪ್ಯಾರಾಸೈಲಿಂಗ್ ಮಾಡುವ ವೇಳೆ ಪ್ಯಾರಾಚೂಟ್​ನ ಹಗ್ಗ ತುಂಡಾಗಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆ ದಿಯುನ ನಾಗೋವಾ ಬೀಚ್‌ನಲ್ಲಿಇಂದು ನಡೆದಿದೆ. ಪ್ಯಾರಾಚೂಟ್ ಆಕಾಶದಲ್ಲಿ ಹಾರಾಡುತ್ತಿದ್ದಂತೆಯೇ ಹಗ್ಗ ತುಂಡಾಗಿ ಅಜಿತ್ ಕಥಾಡ್ ದಂಪತಿ ಸಮುದ್ರಕ್ಕೆ ಬೀಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಂತೋಷದಿಂದ ಆಕಾಶದಲ್ಲಿ ಹಾರಾಡುತ್ತಿದ್ದಂತೆಯೇ ಕೂಗುತ್ತಿದ್ದರು. ಇನ್ನೂ ಮೇಲಕ್ಕೆ ಹಾರುತ್ತಿದ್ದಂತೆಯೇ ಹಗ್ಗ ತುಂಡಾಗಿರುವುದು ವೀಡಿಯೋನಲ್ಲಿ ಕಾಣಿಸುತ್ತಿದೆ. ದಂಪತಿ ಹೆದರಿ ಕಿರುಚಾಡುತ್ತಿರುವುದು ಕೇಳಿಸುತ್ತದೆ. ಬೋಟ್​ನಲ್ಲಿದ್ದವರೂ
ಸಹ ಕೂಗಾಡುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಅಷ್ಟು ಎತ್ತರದಿಂದ ಬಿದ್ದ ದೃಶ್ಯ ನೋಡಿದರೆ ಎಂಥವರಿಗೂ ಎದೆ ಝಲ್‌ ಎನಿಸುತ್ತದೆ. ದಂಪತಿ ಬೀಳುತ್ತಿದ್ದಂತೆಯೇ, ಜೀವರಕ್ಷಕ ದಳದ ಸಿಬ್ಬಂದಿ ದಂಪತಿಯನ್ನು ರಕ್ಷಿಸಿದ್ದಾರೆ. ದಂಪತಿಗಳು ಜೀವರಕ್ಷಕ ಧರಿಸಿದ್ದರಿಂದ ಪ್ರಾಣಾಪಯಾದಿಂದ ಪಾರಾಗಿದ್ದಾರೆ.

ಸಾಹಸಮಯ ದೃಶ್ಯಗಳಲ್ಲಿ ಹೀಗೆ ಆಗುವುದು ಸಾಮಾನ್ಯವಾದರೂ,ನಿಜವಾಗಿಯಿಗೂ ಅನುಭವಕ್ಕೆ ಬಂದಾಗ ಒಂದು ಕ್ಷಣ ಎದೆ ಧಗ್ ಎನ್ನುವಂತೆ ಮಾಡುತ್ತದೆ.ಗುಜರಾತಿ ಮೂಲದ ದಂಪತಿ ಇಂದು ಇಂತಹ ಸನ್ನಿವೇಶ ಎದುರಿಸಿದ್ದಾರೆ.
ಅಜಿತ್ ಕಥಾಡ್ ಮತ್ತು ಅವರ ಪತ್ನಿ ಸರಳಾ ಮೋಟಾರ್‌ ಬೋಟ್‌ನಿಂದ ಪ್ಯಾರಾಚೂಟ್ ಮೂಲಕ ಮೇಲಕ್ಕೆ ಹಾರಿದ್ದರು. ಹೀಗೆ ಪ್ಯಾರಾಚೂಟ್ ಮೇಲಕ್ಕೆ ಸಾಗುತ್ತಿದ್ದಂತೆಯೇ ಹಗ್ಗ ತುಂಡಾಗಿದೆ. ಇವರು ಧರಿಸಿದ್ದ ಲೈಫ್‌ ಜಾಕೆಟ್ ಜೀವ ಉಳಿಸಿದೆ

ಹಗ್ಗ ತುಂಡಾಗಿರುವುದು ತಕ್ಷಣ ತಿಳಿದಿರಲಿಲ್ಲ. ಬೋಟಿನಲ್ಲಿ ಇದ್ದ ಅಜಿತ್ ಸಹೋದರ ಈ ಸನ್ನಿವೇಶವನ್ನು ಕಂಡು ಕಿರುಚಿದರು. ಸಮುದ್ರಕ್ಕೆ ಬಿದ್ದ ದಂಪತಿಗಳನ್ನು ಪಾಮ್ಸ್ ಅಡ್ವೆಂಚರ್ ಮತ್ತು ಮೋಟಾರ್‌ ಸ್ಪೋರ್ಟ್ಸ್‌ನ ಜೀವರಕ್ಷಕರು ತಕ್ಷಣ ರಕ್ಷಣೆ ಮಾಡಿ ದಡಕ್ಕೆ ಕರೆತಂದಿದ್ದರು. ಸದ್ಯ ಈ ವಿಡಿಯೋ ಟ್ವಿಟ್ಟರ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹರಿದಾಡುತ್ತಿದೆ.

Parasailing

ಸಂಸ್ಥೆಯ ನಿರ್ಲಕ್ಷ್ಯ ಕಾರಣ:
ಈ ಸಾಹಸಯಾನ ನಡೆಸುತ್ತಿರುವ ಖಾಸಗಿ ಸಂಸ್ಥೆಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.ಸಮುದ್ರದಲ್ಲಿ ಉಂಟಾದ ಗಾಳಿಯ ಒತ್ತಡಕ್ಕೆ ಹಗ್ಗ ತುಂಡಾಗಿದೆ ಎಂದು ಎಂದು ಪಾಮ್ಸ್ ಅಡ್ವೆಂಚರ್ ಮತ್ತು ಮೋಟಾರ್ಸ್ಪೋರ್ಟ್ಸ್ ಮಾಲೀಕರು ಹೇಳಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಈ ರೀತಿಯ ಘಟನೆ ಸಂಭವಿಸಿದ್ದು ಇದೇ ಮೊದಲು. ಏಕೆಂದರೆ ಆ ದಿನ ಗಾಳಿ ತುಂಬಾ ಬೀಸುತ್ತಿತ್ತು ಎಂದು ಮೋಹನ್ ಲಕ್ಷ್ಮಣ್ ತಿಳಿಸಿದ್ದಾರೆ. ಸಂಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‌

Must be taken action against such service provider. This is clear case of negligence! https://t.co/zSCBtzlCXZ

— Vishal Bagale (@VishalBagale1) November 16, 2021
Parasailing Video Viral


ಪ್ಯಾರಾಚೂಟ್‌ ಹಗ್ಗ ಸವೆದಿತ್ತು:
ಈ ವೇಳೆ ಮಾತನಾಡಿದ ದಂಪತಿ ಸಹೋದರ ರಾಕೇಶ್ , ನಾನು ವಿಡಿಯೊ ರೆಕಾರ್ಡ್ ಮಾಡುತ್ತಿದ್ದೆ. ಹಗ್ಗ ತುಂಡಾದ ತಕ್ಷಣ ಏನು ಮಾಡಬೇಕು ಎಂದು ತೋಚುತ್ತಿರಲಿಲ್ಲ. ನನ್ನ ಅತ್ತಿಗೆ ಮತ್ತು ಅಣ್ಣ ಬಹಳ ಎತ್ತರದಿಂದ ಕೆಳಕ್ಕೆ ಬೀಳುವುದನ್ನು ನೋಡಿ ತುಂಬಾ ಗಾಬರಿಯಾಯಿತು ಎಂದು ಹೇಳಿದ್ದಾರೆ. ಪ್ಯಾರಾಚೂಟ್ ಹಗ್ಗವು ಸವೆದಿದೆ ಎಂದು ನಿರ್ವಾಹಕರೊಂದಿಗೆ ಮಾತನಾಡಿದ್ದೆ, ಆದರೆ ಏನೂ ಆಗುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು.

ನಾವು ಎತ್ತರಕ್ಕೆ ಹಾರಾಡುತ್ತಿದ್ದಂತೆಯೇ ಹಗ್ಗ ತುಂಡಾಗಿ, ಪ್ಯಾರಾಚೂಟ್ ಹೇಗೆ ನಿಯಂತ್ರಿಸಬೇಕು ಎಂದು ತಿಳಿಯದೇ ಒಂದು ಕಡೆಯಿಂದ ಇನ್ನುಂದು ಕಡೆಗೆ ತೂಗಾಡಲು ಪ್ರಾರಂಭಿಸಿದೆವು. ತಕ್ಷಣವೇ ಹಗ್ಗ ತುಂಡಾಗಿ ನಾವು ಸಮುದ್ರಕ್ಕೆ ಬಿದ್ದೆವು.
ಲೈಫ್ ಜಾಕೆಟ್ ಧರಿಸಿದ್ದರಿಂದ ನೀರಿನಲ್ಲಿ ತೇಲುತ್ತಿದ್ದೆವು.

ನನ್ನ ಹೆಂಡತಿ ತುಂಬಾ ಹೆದರಿದ್ದಳು ಹಾಗಾಗಿ ಕೆಲಹೊತ್ತು ಮಾತನಾಡಲು ಸಾಧ್ಯವಾಗಲಿಲ್ಲ. ರಕ್ಷಕ ತಂಡದವರು ಬಂದು ನಮ್ಮನ್ನು ರಕ್ಷಿಸಿದರು ಎಂದು ಅಜಿತ್ ಕಥಾಡ್ ಘಟನೆಯನ್ನು ವಿವರಿಸಿದ್ದಾರೆ. ಒಟ್ಟಾರೇ, ಇಂತಹ ಸಾಹಸಮಯ ಆಟೋಟಗಳಲ್ಲಿ ಭಾಗವಹಿಸುವ ಮುನ್ನ ಯೋಚಿಸಬೇಕಾಗುತ್ತದೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ರಾಜಧಾನಿಯಲ್ಲಿ ಮುಂದುವರೆಯಲಿರೋ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜಧಾನಿಯಲ್ಲಿ ಮುಂದುವರೆಯಲಿರೋ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Lilith Goyal: ರಿಯಲ್ ಎಸ್ಟೇಟ್ ಉದ್ಯಮಿ ಲಲಿತ್ ಗೋಯಲ್ ಬಂಧನ:ಗೋಯಲ್‌ ಮೇಲಿರುವ ಪ್ರಕರಣಗಳೇನು?

Lilith Goyal: ರಿಯಲ್ ಎಸ್ಟೇಟ್ ಉದ್ಯಮಿ ಲಲಿತ್ ಗೋಯಲ್ ಬಂಧನ:ಗೋಯಲ್‌ ಮೇಲಿರುವ ಪ್ರಕರಣಗಳೇನು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist