ಬೆಂಗಳೂರು: ಇಂದು ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಶಾಫಿ ಸಅದಿ ರವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ನ ಕಛೇರಿಯಲ್ಲಿ ಚುನಾವಣೆಯನ್ನು ನಡೆಸಲಾಗಿದ್ದು ಈ ಚುನಾವಣೆಯಲ್ಲಿ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸಅದಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಈ ಹಿಂದೆ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದಂತಹ ಯೂಸುಫ್ ಅವರ ನಿಧನದ ಬಳಿಕ ಅಧ್ಯಕ್ಷ ಸ್ಥಾನ ತೆರವಾಗಿತ್ತು. ನಂತರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿತ್ತು. ಇದೀಗ ಈ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೌಲಾನಾ ಶಾಫಿ ಸಅದಿರವರು ಆಯ್ಕೆಯಾಗಿದ್ದಾರೆ.
ಆಯ್ಕೆ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್, ರಾಜ್ಯ ಸಭಾ ಸದಸ್ಯರಾದ ನಾಸಿರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಮತ್ತು ಮಂಡಳಿಯ ಸದಸ್ಯರಾಗಿರುವಂತಹ ಅಬ್ದುಲ್ ರಿಯಾಝ್ ಖಾನ್, ಯಾಕೂಬ್ ಮತ್ತಿತರು ಉಪಸ್ಥಿತರಿದ್ದರು.