Lucky Man: (ನ.26) : ಪುನೀತ್ ರಾಜ್ ಕುಮಾರ್ , ಪ್ರಭುದೇವ ಮತ್ತು ಡಾರ್ಲಿಂಗ್ ಕೃಷ್ಣ ಅವರ ಜೊತೆ ಅಭಿನಯಿಸಿರುವ ‘ಲಕ್ಕಿ ಮ್ಯಾನ್’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
ಡಿಸೆಂಬರ್ ಅಥವಾ ಜನವರಿಯಲ್ಲಿ ‘ಲಕ್ಕಿ ಮ್ಯಾನ್’ ಬಿಡುಗಡೆ ಮಾಡುವ ಗುರಿ ಇದೆ. ಚಿತ್ರ ಬಿಡುಗಡೆಗೆ ಪೂರಕವಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.
‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಪುನೀತ್ ರಾಜ್ಕುಮಾರ್ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪುನೀತ್ ರಾಜ್ಕುಮಾರ್ ಹಾಗೂ ಪ್ರಭುದೇವ ಅವರು ಹಾಡೊಂದರಲ್ಲಿ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್ಕುಮಾರ್ ಅವರ ಮೇಲೆ ರಚಿಸಲಾದ ಈ ಹಾಡಿನಲ್ಲಿ ಅವರಿಬ್ಬರು ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೇ ಮೊದಲ ಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ ಎನ್ನುವುದು ವಿಶೇಷ ಆಗಿದೆ.
ಇದನ್ನೂ ಒದಿ: Earthquake: ಬೆಂಗಳೂರು ಸೇರಿದಂತೆ ಹಲವೆಡೆ ಭೂ ಕಂಪನ: ಶಬ್ಧಕ್ಕೆ ಬೆಚ್ಚಿಬಿದ್ದ ಜನ

ಡಾನ್ಸ್ ಮಾಡುವಾಗ ಟೆನ್ಷನ್:
“ಪ್ರಭುದೇವ ಅವರ ಜತೆ ಡ್ಯಾನ್ಸ್ ಮಾಡಬೇಕೆಂದಾಗ ಟೆನ್ಷನ್ ಆಗಿತ್ತು ಎಂದು ಹೇಳಿಕೊಂಡಿದ್ದರು. ಪ್ರಭುದೇವ ಜತೆ ಡ್ಯಾನ್ಸ್ ಮಾಡುವುದು ಪ್ರತಿಯೊಬ್ಬರ ಕನಸು, ನಾನಂತೂ ಅವರ ಡ್ಯಾನ್ಸ್ ನೋಡಿ ಯಾವಾಗಲೂ ಎಕ್ಸೈಟ್ ಆಗುತ್ತಿದ್ದೆ. ಇದೇ ಮೊದಲ ಬಾರಿಗೆ ಅವರ ಜತೆ ನೃತ್ಯ ಮಾಡಿದ್ದು ನನಗೆ ಸಿಕ್ಕಾಪಟ್ಟೆ ಥ್ರಿಲ್ ಆಗಿದೆ. ಅವರ ಡ್ಯಾನ್ಸಿಂಗ್ ಮೂವ್ಮೆಂಟ್, ಕಾಲು ಕುಣಿಸುವ ರೀತಿ, ಪರ್ಫೆಕ್ಟ್ ಸ್ಟೆಪ್ ಎಲ್ಲವೂ ನೋಡುತ್ತಿದ್ದರೆ ರೋಮಾಂಚಕ ಎನಿಸುತ್ತದೆ”ಎಂದು ಪುನೀತ್ ಹೇಳಿದ್ದರು.
ಹಾಗೂ ಪ್ರಭುದೇವ ಡ್ಯಾನ್ಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ನಟ ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗದ ನಂಬರ್ 1 ಡ್ಯಾನ್ಸರ್ ಆಗಿದ್ದರು ಅನ್ನೋದರಲ್ಲಿ ಯಾವುದೇ ಸಂಶಯ ಇರಲಿಲ್ಲ. ಎಲ್ಲರೂ ಹಾಕುವಂತಹ ಸ್ಟೆಪ್ಸ್ ನಾನು ಹಾಕೋದು ಇಷ್ಟ ಇಲ್ಲ, ಹಾಗಾಗಿ ನಾನು ಒಂದಷ್ಟು ಟ್ರೈ ಮಾಡ್ತೀನಿ ಅಂತ ಹೇಳಿದ್ದರು.
ಲಕ್ಕಿ ಮ್ಯಾನ್’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಸಂಗೀತಾ ಶೃಂಗೇರಿ, ರೋಶಿನಿ ಪ್ರಕಾಶ್ ದ್ವಿತೀಯ ನಾಯಕಿ ಆಗಿ ನಟಿಸಿದ್ದಾರೆ. ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಪಿ.ಆರ್. ಮೀನಾಕ್ಷಿ ಸುಂದರಮ್ ,ಸುಂದರ ಕಾಮರಾಜ್ ನಿರ್ಮಾಣದ ಚಿತ್ರಕ್ಕೆ ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಜೀವ ಶಂಕರ್ ಅವರ ಛಾಯಾಗ್ರಹಣ, ವಿಜಯ್ ಮತ್ತು ವಿಕ್ಕಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಧನಂಜಯ ರಂಜನ್ ಹಾಡುಗಳನ್ನು ಬರೆದಿದ್ದಾರೆ. ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್, ಬಾಲಾಜಿ ಸಂಕಲನ, ಅಶ್ವಥ್ ಮಾರಿಮುತ್ತು ಕಥೆ, ಮಂಜು ಮಾಂಡವ್ಯ, ಸಂಪತ್ ಸಿರಿಮನೆ ಹಾಗೂ ರಘುನಂದನ್ ಕಾನಡ್ಕಸಂಭಾಷಣೆ, ಶೃಂಗೇರಿ ಸುರೇಶ್ ಸಹ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರಕ್ಕೆ ಮೋಹನ್ ಬಿ. ಕೆ. ಅವರು ಕಲಾ ನಿರ್ದೇಶನ ಮಾಡಿದ್ದಾರೆ.