ಬೆಂಗಳೂರು: D K Shivakumar (ನ.26) ರಾಜ್ಯಪಾಲರನ್ನು ಭೇಟಿ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾತನಾಡಿ, ರಾಜ್ಯದ ಅತ್ಯಂತ ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕು. ಸಂವಿಧಾನದ 356 ನೇ ಪರಿಚ್ಛೇದದ ಪ್ರಕಾರ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಡಿ.ಕೆ ಶಿವಕುಮಾರ್ ಅವರು ಒತ್ತಾಯಿಸಿದರು.
ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಾನಾ ಇಲಾಖೆಗಳಲ್ಲಿ ಕಮಿಷನ್ ಹಿಂಸೆ ಬಗ್ಗೆ ದೂರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತಮಗಾಗುತ್ತಿರುವ ನೋವು, ಕಿರುಕುಳ ತಡೆಯಲಾರದೆ
ದೂರು ಕೊಟ್ಟಿದ್ದಾರೆ. ಅವರ ನೋವು ನೋಡಿಕೊಂಡು ಸುಮ್ಮನೆ ಕೂರಲು ನಮಗೆ ಸಾಧ್ಯವಿಲ್ಲ ಎಂದು ಹೇಳಿದರು.
ಎಸಿಬಿ ದಾಳಿ ಜಸ್ಟ್ ಸ್ಯಾಂಪಲ್:

ಎಸಿಬಿ ದಾಳಿ ಕುರಿತು ಮಾತನಾಡಿದ ಅವರು ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿ ಮೇಲೆ ನಡೆಯುತ್ತಿರುವ ಎಸಿಬಿ ದಾಳಿಯನ್ನು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವುದಕ್ಕೆ ಇದು ಚಿಕ್ಕ ಸ್ಯಾಂಪಲ್ ಎಂದರು.
ಸರಕಾರದ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ಹಂತ-ಹಂತವಾಗಿ ಹೋರಾಟ ರೂಪಿಸುತ್ತೇವೆ. ಪಕ್ಷದ ನಾಯಕರ ಜತೆ ಚರ್ಚಿಸಿ, ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ.
ಭಾರತದ ಇತಿಹಾಸದಲ್ಲೇ ಕರ್ನಾಟಕಕ್ಕೆ ದೊಡ್ಡ ಕಳಂಕ ಬಂದಿದೆ. ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ನಾನಾ ಇಲಾಖೆಗಳ ಒಂದು ಲಕ್ಷಕ್ಕೂ ಹೆಚ್ಚು ಗುತ್ತಿಗೆದಾರರು ಇದ್ದಾರೆ. ಏನೇ ಕೆಲಸ ಮಾಡಿದರೂ ಅಧಿಕಾರಿಗಳು, ರಾಜಕಾರಣಿಗಳಿಗೆ ಶೇಕಡಾ 40 ರಿಂದ 56 ರಷ್ಟು ಕಮಿಷನ್ ಕೊಡಬೇಕು ಎಂದು ಸಂಘದ ಅಧ್ಯಕ್ಷ ಕೆಂಪಣ್ಣನವರು ಪ್ರಧಾನಿಗೆ ದೂರಿದ್ದಾರೆ. ಮಾಧ್ಯಮಗಳಲ್ಲೂ ಇದು ವರದಿ ಆಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಒದಿ:Covid 19: ಧಾರವಾಡ ಎಸ್ಡಿಎಂ ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ
ನಾವು ದಾಖಲೆ ಬಿಡುಗಡೆ ಮಾಡ್ತಿವಿ:
ಪ್ರಧಾನಿಗಳಿಗೆ ಹೋಗಿರುವ ದೂರಿನ ಪ್ರತಿಯನ್ನು ಪತ್ರ ಸಮೇತ ರಾಜ್ಯಪಾಲರಿಗೆ ನೀಡಲಾಗಿದ್ದು, ಈಗಿರುವ ಸರಕಾರವನ್ನು ವಜಾ ಮಾಡಬೇಕು ಹಾಗೂ ಗುತ್ತಿಗೆದಾರರ ಸಂಘದ ದೂರಿನ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ನಾನಾ ಇಲಾಖೆಯ ಕಾಮಗಾರಿಗಳ ಅಂದಾಜು ವೆಚ್ಚ ಡಬಲ್ ಆಗುತ್ತಿದೆ. 100 ಕೋಟಿ ರುಪಾಯಿ ಕಾಮಗಾರಿಗೆ 200 ಕೋಟಿ ರುಪಾಯಿ ತೋರಿಸಲಾಗುತ್ತಿದೆ. ಅದರ ಬಗ್ಗೆಯೂ ನಮ್ಮ ಬಳಿ ದಾಖಲೆಗಳು ಇವೆ. ಒಂದೆರಡು ದಿನದಲ್ಲೇ ಅವುಗಳನ್ನು ಬಿಡುಗಡೆ ಮಾಡುತ್ತೇವೆ ಎಂದರು.
ಯಡಿಯೂರಪ್ಪನವರ ಸರಕಾರ ಇದ್ದಾಗ ಕೆಲವು ಮಂತ್ರಿಗಳು, ಅದರಲ್ಲೂ ವಿಶೇಷವಾಗಿ ನೀರಾವರಿ, ಕಾರ್ಪೊರೇಷನ್ ನಲ್ಲಿ ಡಬಲ, ಡಬಲ್ ಲೆಕ್ಕ ನೀಡಲಾಗಿದೆ. ಯಾವ, ಯಾವ ಇಲಾಖೆಯಲ್ಲಿ ಎಷ್ಟೆಷ್ಟು ವ್ಯವಹಾರ ನಡೆದಿದೆ ಎಂಬುದನ್ನು ದಾಖಲೆ ಸಮೇತ ಸದ್ಯದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.