ಬೆಂಗಳೂರು: (ಡಿ.9) Group Captain Varun Singh: ಸೇನಾ ಪಡೆಗಳ ಮುಖ್ಯಸ್ಥ ಜನರನ್ನ ಬಿಪಿನ್ ರಾವತ್ ಹಾಗೂ 12 ಮಂದಿ ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ವಿಧಿವಶರಾದರು.
ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಗ್ರೂಪ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

ಸೇನಾ ಹೆಲಿಕ್ಯಾಪ್ಟರ್ ಪತ್ರದಲ್ಲಿ ಸುಟ್ಟ ಗಾಯಗಳಿಂದ ಬಳುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಸೂಲೂರು ಆಸ್ಪತ್ರೆಗೆ ತರಲಾಯಿತು. ಆಧುನಿಕ ಚಿಕಿತ್ಸೆಗಾಗಿ Air Lift ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಹೆಲಿಕ್ಯಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಲೈಫ್ ಸಪೋರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಹೆಲಿಕ್ಯಾಪ್ಟರ್ ದುರಂತದಲ್ಲಿ ವಿಧಿವಶರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪಾರ್ಥಿವ ಶರೀರವನ್ನು ಏರ್ ಬೆಸ್ ಮೂಲಕ ದೆಹಲಿಗೆ ಕೊಂಡೊಯ್ಯಲಾಗುತ್ತಿದೆ. ರಾವತ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ವಾಯುನೆಲೆಯಲ್ಲಿ ಇರಿಸಿ ನಂತರ ಪ್ರಧಾನಿ ಹಾಗೂ ಸೇನಾಧಿಕಾರಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.
#WATCH| Tamil Nadu: Locals shower flower petals & chant 'Bharat Mata ki Jai' as ambulances carrying mortal remains of CDS Gen Rawat, his wife & other personnel who died in Coonoor military chopper crash, arrive at Sulur airbase from Madras Regimental Centre in Nilgiris district pic.twitter.com/fhVIDaf5FL
— ANI (@ANI) December 9, 2021
ಹೂವುಮಳೆ ಸುರಿಸಿ ನಮನ ಸಲ್ಲಿಸಿದ ಸ್ಥಳಿಯರು:
ನೀಲಗಿರಿ ಜಿಲ್ಲೆಯ ಮದ್ರಾಸ್ ರಜ ಮೆಂಟಲ್ ಸೆಂಟರ್ನಿಂದ ಸೂಲೂರು ವಾಯು ನೆಲೆಗೆ ತೆರಳುತ್ತಿದ್ದಾಗ ಮೃತರ ಪಾರ್ಥಿವ ಶರೀರ ಹೊತ್ತ ಆಂಬುಲೆನ್ಸ್ ಗಳ ಮೇಲೆ ಸ್ಥಳೀಯರು ಘೋಷಣೆ ಕೂಗುತ್ತಾ ಹೂವಿನ ದಳಗಳನ್ನು ಸುರಿದರು.
ಭಾರತೀಯ ಸೇನೆಯು ಅಪಘಾತದ ತೀವ್ರತೆಯ ದೇಹಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳಿದರು. ಮೃತ ದೇಹಗಳನ್ನು ಗುರುತಿಸಲು ವೈಜ್ಞಾನಿಕ ಕ್ರಮಗಳ ಜೊತೆ ನಿಕಟ ಕುಟುಂಬದ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೃತದೇಹ ಗುರುತಿಸಿದ ನಂತರ ಸಂಬಂಧಿಕರಿಗೆ ಒಪ್ಪಿಸಲಾಗುತ್ತದೆ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಕಟ ಸಂಬಂಧಿಗಳನ್ನು ಸಮಾಲೋಚನೆ ನಡೆಸಿ ಅವುಗಳನ್ನು ಖಚಿತಪಡಿಸಿಕೊಳ್ಳ ಲಾಗುವುದು ಎಂದು ಹೇಳಿದ್ದಾರೆ.