Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Journalist’s Murdered: ಪತ್ರಕರ್ತರಿಗೆ ಭಾರತವೇ ಹೆಚ್ಚು ಮಾರಣಾಂತಿಕ: 2021ರಲ್ಲಿ ಅತಿಹೆಚ್ಚು ವರದಿಗಾರರ ಹತ್ಯೆ

Secular TVbySecular TV
A A
Reading Time: 1 min read
Journalist’s Murdered: ಪತ್ರಕರ್ತರಿಗೆ ಭಾರತವೇ ಹೆಚ್ಚು ಮಾರಣಾಂತಿಕ: 2021ರಲ್ಲಿ ಅತಿಹೆಚ್ಚು ವರದಿಗಾರರ ಹತ್ಯೆ
0
SHARES
Share to WhatsappShare on FacebookShare on Twitter

Journalist’s Murdered: (ಜ.10) ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವೆಂದು ಮಾಧ್ಯಮ ಕ್ಷೇತ್ರವನ್ನು ಕರೆಯಲಾಗುತ್ತದೆ. ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವಂತಹ ವಾತಾವರಣವಿದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ, ಆಡಳಿತದ ಕುರಿತು ಜನರಿಗೆ ಸತ್ಯ ತಿಳಿಯದೇ ಪ್ರಜಾಪ್ರಭುತ್ವದ ಮೂಲ ಆಶಯವೇ ವಿಫಲವಾಗುತ್ತದೆ. ಸುಳ್ಳುಗಳನ್ನೇ ಸತ್ಯವೆಂದು ನಂಬಿದ ಜನರು ಚುನಾವಣೆಗಳಲ್ಲಿ ಕೆಟ್ಟ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಾಗುತ್ತದೆ. ಮಾಧ್ಯಮಗಳ ಮಹತ್ವದ ಬಗ್ಗೆ ದೇಶದೆಲ್ಲೆಡೆ ಚರ್ಚೆಯಾಗುತ್ತಿರುವ ಈ ಸಂದರ್ಭದಲ್ಲೇ, ಮಾಧ್ಯಮ ವರದಿಗಾರರ ಜೀವಕ್ಕೆ ಅಪಾಯಕಾರಿಯಾಗಿರುವ ದೇಶಗಳ ಪೈಕಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬ ಆಘಾತಕಾರಿ ವಿಷಯ ಹೊರಬಿದ್ದಿದೆ.

ವರದಿಗಾರಿಕೆಯಿಂದ ಹತ್ಯೆ:

ಅಮೆರಿಕಾದ ನ್ಯೂಯಾರ್ಕ್‌ ಮೂಲದ `ಕಮಿಟಿ ಟು ಪ್ರೊಜೆಕ್ಟ್‌ ಜರ್ನಲಿಸ್ಟ್ಸ್‌’ ಸಂಸ್ಥೆಯು ಅಧ್ಯಯನ ವರದಿಯನ್ನು ಪ್ರಕಟಿಸಿದೆ. ಪತ್ರಕರ್ತರ ಬಂಧನ, ಹಲ್ಲೆ, ಕಿರುಕುಳ ಹಾಗೂ ಹತ್ಯೆಗೆ ಸಂಬಂಧಿಸಿದ ಅಂಕಿಅಂಶಗಳು ವರದಿಯಲ್ಲಿದೆ. ಅದರ ಪ್ರಕಾರ 2021ರಲ್ಲಿ ಜಗತ್ತಿನಾದ್ಯಂತ 19 ಪತ್ರಕರ್ತರು ತಮ್ಮ ವರದಿಗಾರಿಕೆ ಕಾರಣಕ್ಕೆ ಹತ್ಯೆಯಾಗಿದ್ದಾರೆ. ಈ ಪೈಕಿ ಅತಿಹೆಚ್ಚು ಪತ್ರಕರ್ತರು ಭಾರತದವರು. ಒಟ್ಟು 5 ಭಾರತೀಯ ಪತ್ರಕರ್ತರು 2011ರಲ್ಲಿ ವರದಿಗಾರಿಕೆ ಕಾರಣಕ್ಕೆ ಬಲಿಯಾಗಿದ್ದಾರೆ.

Journalist

ಲಿಕ್ಕರ್‌ ಮಾಫಿಯಾ ವಿರುದ್ಧ ವರದಿ ಮಾಡಿದ್ದಕ್ಕೆ ಉತ್ತರ ಪ್ರದೇಶದ ಸುಲಭ್‌ ಶ್ರೀವಾತ್ಸವ, ಭ್ರಷ್ಟಾಚಾರದ ವಿರುದ್ಧ ವರದಿ ಮಾಡಿದ್ದಕ್ಕೆ ಬಿಹಾರದ ಮನೀಷ್‌ ಸಿಂಗ್‌, ಮಟ್ಕಾ ಹಾಗೂ ತಂಬಾಕು ಮಾಫಿಯಾವನ್ನು ಬಯಲಿಗೆಳಿದ್ದಕ್ಕೆ ಆಂಧ್ರಪ್ರದೇಶದ ಚೆನ್ನಕೇಶವಲು, ನಕಲಿ ಆಸ್ಪತ್ರೆಗಳನ್ನು ಬಯಲು ಮಾಡಿದ್ದಕ್ಕೆ ಬಿಹಾರದ ಅವಿನಾಶ್‌ ಝಾರವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ರೈತರ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ರಮಣ್‌ ಕಶ್ಯಪ್‌ ಎಂಬ ಪತ್ರಕರ್ತರು ಕೇಂದ್ರ ಸಚಿವ ಅಜಯ್‌ ಮಿಶ್ರಾರ ಮಗ ಕಾರು ಹತ್ತಿಸಿದ್ದರಿಂದ ಕೊನೆಯುಸಿರೆಳೆದಿದ್ದಾರೆ.

ಸಾವಿರದ ಗಡಿ ತಲುಪಿತ್ತು ಹತ್ಯೆ

1992ರಿಂದ ಈವರೆಗೆ ಒಟ್ಟು 914 ಪತ್ರಕರ್ತರು ಜಗತ್ತಿನಾದ್ಯಂತ ವರದಿಗಾರಿಕೆ ಕಾರಣಕ್ಕೆ ಕೊಲೆಯಾಗಿರುವುದು ದೃಢಪಟ್ಟಿದೆ. ಈ ಪೈಕಿ 57 ಹತ್ಯೆಗಳು ಭಾರತದಲ್ಲಿ ನಡೆದಿವೆ. ಸೆಪ್ಟೆಂಬರ್‌ 5, 2017ರಂದು ಬೆಂಗಳೂರಿನಲ್ಲಿ ಗೌರಿ ಲಂಕೇಶ್‌ರವರನ್ನು ಹತ್ಯೆ ಮಾಡಿದ್ದು ಕೂಡ ಇದರಲ್ಲಿ ಒಂದು. ಗೌರಿ ಲಂಕೇಶ್‌ ಕೊಲೆ ಪ್ರಕರಣದ ವಿಚಾರಣೆ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಅಂತಿಮ ಹಂತದ ವಿಚಾರಣೆ ಹಾಗೂ ಶಿಕ್ಷೆ ಘೋಷಣೆಯಾಗುವುದು ಬಾಕಿಯಿದೆ. ಬಹುತೇಕ ವರದಿಗಾರರ ಹತ್ಯೆ ಪ್ರಕರಣಗಳು ವ್ಯವಸ್ಥಿತವಾಗಿ ನಡೆದಿರುವುದರಿಂದ ಸೂಕ್ತ ಸಾಕ್ಷಿ ಸಂಗ್ರಹಿಸಲು ಸಾಧ್ಯವಾಗದೇ ತನಿಖೆಯಲ್ಲಿ ವಿಳಂಬವಾಗುತ್ತಿದೆ. ಅನೇಕ ಪ್ರಕರಣಗಳಲ್ಲಿ ವರದಿಗಾರರ ಮೃತದೇಹವು ಹಲವು ದಿನಗಳ ನಂತರ ಪತ್ತೆಯಾಗಿದೆ.

Journalist Died

`ಕಮಿಟಿ ಟು ಪ್ರೊಜೆಕ್ಟ್‌ ಜರ್ನಲಿಸ್ಟ್ಸ್‌’ ಸಂಸ್ಥೆಯು ಅಧ್ಯಯನ ವರದಿಯ ಪ್ರಕಾರ ಜಗತ್ತಿನಾದ್ಯಂತ 293 ಪತ್ರಕರ್ತರನ್ನು 2021ರಲ್ಲಿ ಬಂಧಿಸಲಾಗಿದೆ. 2020ರಲ್ಲಿ 280 ಪತ್ರಕರ್ತರನ್ನು ಬಂಧಿಸಲಾಗಿತ್ತು. 2021ರಲ್ಲಿ ಬೇರೆಲ್ಲ ದೇಶಗಳಿಗಿಂತ ಚೀನಾದಲ್ಲಿ ಅತಿಹೆಚ್ಚು, ಅಂದರೆ 50 ಪತ್ರಕರ್ತರ ಬಂಧನವಾಗಿದೆ. ನಂತರದ ಸ್ಥಾನಗಳಲ್ಲಿರುವ ಮ್ಯಾನ್ಮಾರ್‌ನಲ್ಲಿ 26, ಈಜಿಪ್ಟ್‌ನಲ್ಲಿ 25, ವಿಯೇಟ್ನಾಂನಲ್ಲಿ 23 ಪತ್ರಕರ್ತರ ಬಂಧನವಾಗಿದೆ. ಖಾಸಗಿ ಸ್ಥಳಕ್ಕೆ ಅನುಮತಿಯಿಲ್ಲದೇ ಪ್ರವೇಶ, ವೈಯಕ್ತಿಯ ಮಾಹಿತಿ ಬಹಿರಂಗ, ತಪ್ಪು ಮಾಹಿತಿ ಪ್ರಕಟಿಸಿದ ಆರೋಪ ಹೊರಿಸಿ ಪತ್ರಕರ್ತರನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ಪೊಲೀಸರ ನಿರ್ಲಕ್ಷ್ಯ, ಆರೋಪಿಗಳಿಗೆ ರಾಜಕಾರಣಿಗಳಿಂದ ರಕ್ಷಣೆ, ಸಾಕ್ಷಿ ಹೇಳುವವರಿಗೆ ಸೂಕ್ತ ರಕ್ಷಣೆ ಇಲ್ಲದಿರುವುದು, ವಿಚಾರಣೆಯಲ್ಲಿ ವಿಳಂಬ -ಮುಂತಾದ ಅನೇಕ ಕಾರಣಗಳಿಂದಾಗಿ ಭಾರತದಲ್ಲಿ ವರದಿಗಾರರ ಹತ್ಯೆ ಪ್ರಕರಣಗಳ ಆರೋಪಿಗಳು ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ಪತ್ರಕರ್ತರ ರಕ್ಷಣೆಗಾಗಿ ಪ್ರತ್ಯೇಕ ಕಾಯಿದೆ ಇಲ್ಲದಿರುವುದು ಕೂಡ ಅಪರಾಧ ಎಸಗುವವರಿಗೆ ವರವಾಗಿದೆ ಎಂದು ವಿಶ್ಲೇಷಿಸಲಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post

Corona Positive:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್

Google Play Store: ಅ.31ರ ವರೆಗೂ ಬಿಲ್ಲಿಂಗ್ ನೀತಿ ಜಾರಿ ಮಾಡುವುದಿಲ್ಲ: ಗೂಗಲ್ ಸ್ಪಷ್ಟನೆ

Google Play Store: ಅ.31ರ ವರೆಗೂ ಬಿಲ್ಲಿಂಗ್ ನೀತಿ ಜಾರಿ ಮಾಡುವುದಿಲ್ಲ: ಗೂಗಲ್ ಸ್ಪಷ್ಟನೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist