ಮಂಗಳೂರು: (ಜ.11) Nalin Kumar Kateel: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಕುರಿತು ಮಂಗಳೂರಿನ ಎರಡನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂ ಎಫ್ ಸಿ ನ್ಯಾಯಾಲಯದ ವಿಚಾರಣೆ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು 2017ರಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಅರ್ಜಿ ವಿಚಾರಣೆ ರದ್ದುಪಡಿಸುವಂತೆ ಸಲ್ಲಿಸಿದ್ದ ಮನವಿಯ ಕುರಿತು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವ ವಿಚಾರಣೆ ನಡೆಯಿತು.
ಸಂಸದರ ಪರ ವಾದ ಮಂಡಿಸಿದ ವಕೀಲರು, ಸಂವಿಧಾನದ 105ನೇ ವಿಧಿಯಡಿ ಸರ್ಕಾರದ ಆಡಳಿತ ಅಥವಾ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂಬುದು ಅರಿವಿಗೆ ಬಂದರೆ ಜನಪ್ರತಿನಿಧಿಗಳು ಮಧ್ಯಪ್ರವೇಶಿಸುವ ಅಧಿಕಾರ ಹೊಂದಿರುತ್ತಾರೆ. ಆ ಕರ್ತವ್ಯವನ್ನು ಸಂಸದರು ನಿಭಾಯಿಸಿದ್ದಾರೆ ಜನರನ್ನು ಪ್ರಚೋದಿಸುವ, ಪೊಲೀಸರ ಕರ್ತವ್ಯಕೆ ಅಡ್ಡಿ ಪಡಿಸುವ ಉದ್ದೇಶ ಆಗಿರಲಿಲ್ಲ ಎಂದು ಹೇಳಿದರು. ಪೀಠವು FIR ಹಾಗೂ ವಿಚಾರಣೆಯನ್ನು ರದ್ದುಪಡಿಸಿ, ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿದ್ದ ಬಿ ರಿಪೋರ್ಟನ್ನು ಹೈಕೋರ್ಟ್ ಅಂಗೀಕರಿಸಿದೆ.

ಪ್ರಕರಣವೇನು?
ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯ್ಯಲಾಗುತ್ತಿದೆ ಎಂದು 2017, ಸೆಪ್ಟಂಬರ್ 7ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಂಗಳೂರಿಂದ ಮಂಗಳೂರಿಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು, ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದರು. ಈ ಕುರಿತು ನಳೀನ್ ಕುಮಾರ್ ಅವರು ಮಾಹಿತಿ ಪಡೆದು ಪೊಲೀಸ್ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ನಮಗೆ ತೋರಿಸುವಂತೆ ಕೇಳಿದರು.
ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದ ಮಾರುತಿ ನಾಯಕ್ ಅವರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಗೆ ದೂರು ನೀಡಿದ್ದರು. ಠಾಣಾಧಿಕಾರಿ ಈ ಸಂಬಂಧ FIR ದಾಖಲಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.
Actor Dileep: ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿದ ನಟ ದಿಲೀಪ್! ಎಫ್ಐಆರ್ ದಾಖಲಿಸಿದ ಕೇರಳ ಕ್ರೈಂ ಬ್ರಾಂಚ್