Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

D.K Shivakumar:ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ,ಸೋಂಕು ಹೆಚ್ಚಾದಾಗ ಕರ್ಫ್ಯೂ ರದ್ದು: ಡಿ.ಕೆ ಶಿವಕುಮಾರ್

Secular TVbySecular TV
A A
Reading Time: 1 min read
D.K Shivakumar:ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ,ಸೋಂಕು ಹೆಚ್ಚಾದಾಗ ಕರ್ಫ್ಯೂ ರದ್ದು: ಡಿ.ಕೆ ಶಿವಕುಮಾರ್
0
SHARES
Share to WhatsappShare on FacebookShare on Twitter

ಬೆಂಗಳೂರು (ಜ.23): D.K Shivakumar: ವಿದ್ಯುತ್ ದರ ಏರಿಕೆ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್ ಅವರು, ಜನಸಾಮಾನ್ಯರ ಆದಾಯ ಖಾತರಿ ಮತ್ತು ಹೆಚ್ಚಳಕ್ಕೆ ಸರ್ಕಾರ ಮೊದಲು ಕ್ರಮ ಕೈಗೊಳ್ಳಲಿ. ಅವರಿಗೆ ಆದಾಯ ಬಂದ ಮೇಲೆ ವಿದ್ಯುತ್ ದರ ಏರಿಕೆ ಮಾಡಲಿ. ಈಗ ಲಾಕ್ ಡೌನ್, ಸೀಲ್ ಡೌನ್ ನಿರ್ಬಂಧ ಹೇರಿದ್ದಾರೆ. ಸೋಂಕು ಪ್ರಮಾಣ ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿದ್ದವರು, ಸೋಂಕು ಪ್ರಮಾಣ ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ ಎಂದು ಸರ್ಕಾರವನ್ನು ಆರೋಪಿಸಿದರು.

ಹಾಲಿನ ದರ, ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ರೈತನಿಗೆ ತೊಂದರೆ ಆದಾಗ ಅವನ ರಕ್ಷಣೆಗೆ ಸರ್ಕಾರ ಯಾಕೆ ನಿಲ್ಲಲಿಲ್ಲ? ಬೆಳೆ ದರ ಏಕೆ ಹೆಚ್ಚಿಸಲಿಲ್ಲ? ಬೆಂಬಲ ಬೆಲೆ ಯಾಕೆ ನೀಡಲಿಲ್ಲ. ಏರಿಕೆಯಾಗಿರುವ ಕಬ್ಬಿಣ, ಸೀಮೆಂಟ್ ದರ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಿಲ್ಲ. ಈಗ ವಿದ್ಯುತ್ ದರ ಬಾಕಿ ಕೊಡಬೇಕು ಎನ್ನುತ್ತಿದ್ದಾರೆ. ವಿದ್ಯುತ್ ಕಂಪನಿಗಳ ಪರಿಸ್ಥಿತಿ ಹೇಗಿದೆ ಎಂದು ನಮಗೆ ಗೊತ್ತಿದೆ. ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು ಎಂದರು.

ಇದು ಬಿಜೆಪಿ ಕರ್ಫ್ಯೂ ಎಂದು ಹೇಳಿದ್ದೆ

‘ವೀಕೆಂಡ್ ಕರ್ಫ್ಯೂ ಹಿಂಪಡೆದ ಕುರಿತು ಮಾತನಾಡಿ, ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು. ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ.

ಕೆಎಸ್ಆರ್ಟಿಸಿ, ಮೆಟ್ರೋದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು, ವಿಮಾನಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು. ಬಡವರು, ಹೊಟೇಲ್ ನವರು, ಚಿತ್ರಮಂದಿರಗಳವರು ಹಾಗೂ ಇತರರು ಶೇ.50 ರಷ್ಟು ಮಾತ್ರ ವ್ಯಾಪಾರ ಮಾಡಬೇಕಂತೆ. ಕುಟುಂಬ ಸದಸ್ಯರು ವಾಹನಗಳಲ್ಲಿ ಸಂಚಾರ ಮಾಡುವಾಗ ಶೇ.50 ರಷ್ಟು ನಿಯಮ ಪಾಲನೆ ಮಾಡಲು ಸಾಧ್ಯವೇ? ಸರ್ಕಾರ ಪ್ರಾಯೋಗಿಕವಾಗಿ ಯೋಚಿಸಬೇಕು. ಈ ಸರ್ಕಾರ ಆ ರೀತಿ ಯೋಚಿಸುತ್ತಿಲ್ಲ.

ಔಷಧಿ ನೀಡಿ, ಸಹಾಯ ಮಾಡಿ, ಆರೋಗ್ಯ ಕಾಪಾಡಿ ಸರ್ಕಾರ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಆದರೆ ಈ ಸರ್ಕಾರ ಅವೈಜ್ಞಾನಿಕವಾಗಿ ನಿಯಮಗಳನ್ನು ಜಾರಿ ಮಾಡುತ್ತಿದೆ. ಸರ್ಕಾರಗಳು ರಾಜ್ಯ ಹಾಗೂ ದೇಶದ ಆರ್ಥಿಕತೆ ನೋಡಬೇಕು. ಆಂಧ್ರ, ತೆಲಂಗಾಣ ಹಾಗೂ ಬೇರೆ ರಾಜ್ಯಗಳಲ್ಲಿ ಇಲ್ಲದ ನಿಯಮ ಇಲ್ಲಿ ಯಾಕೆ?’

ತಮಿಳುನಾಡಿನ ಹೊಗೆನಕಲ್ ಯೋಜನೆ ಬಗ್ಗೆಈಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಏನೆಲ್ಲಾ ಹೇಳಿಕೆ ನೀಡುತ್ತದೆಯೋ ನೀಡಲಿ. ನಂತರ ಮಾತನಾಡುತ್ತೇನೆ.

ಆನ್ಲೈನ್ ಸದಸ್ಯತ್ವ ಅವಕಾಶ

ನಾವು ಆನ್ಲೈನ್ ಹಾಗೂ ಆಫ್ಲೈನ್ ಸದಸ್ಯತ್ವ ನೋಂದಣಿ ಮಾಡುತ್ತಿದ್ದೇವೆ. ಪ್ರತಿಯೊಬ್ಬರಿಗೂ ಆನ್ಲೈನ್ ಸದಸ್ಯತ್ವ ಅವಕಾಶ ನೀಡಲಾಗಿದೆ. ಮಾರ್ಚ್ ವರೆಗೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದೆ. ನಂತರವೂ ಸದಸ್ಯತ್ವ ನೀಡುತ್ತೇವೆ. ಆದರೆ ಪಕ್ಷದ ಆಂತರಿಕ ಚುನಾವಣೆಗಳಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ ಈ ಅಭಿಯಾನದ ಕಾಲವಧಿಯಲ್ಲಿಯೇ ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರತಿ ಬೂತ್ ಗೆ ಇಬ್ಬರು ಕಾರ್ಯಕರ್ತರ ನೇಮಕಕ್ಕೆ ಸೂಚನೆ ನೀಡಲಾಗಿದೆ. ಆನ್ಲೈನ್ ಸದಸ್ಯತ್ವ ಹೇಗೆ ಮಾಡಬೇಕು ಎಂಬುದಕ್ಕೆ ಈಗ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

Explosives:ಸ್ಫೋಟಕ ವಸ್ತುಗಳ ಪತ್ತೆ: ಜನತೆ ಮುಂದೆ ವಾಸ್ತವಾಂಶ ಬಹಿರಂಗಪಡಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Justice K.L Manjunath:ಹೃದಯಾಘಾತದಿಂದ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

Justice K.L Manjunath:ಹೃದಯಾಘಾತದಿಂದ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

Parakram Diwas: ಭಾರತ ಸ್ವಾತಂತ್ರ್ಯಕ್ಕಾಗಿ  ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ

Parakram Diwas: ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist