ಬೆಂಗಳೂರು: (ಫೆ.16): Cannabis: ಬುಲೆರೋ ವಾಹನಕ್ಕೆ ರಾಷ್ಟ್ರೀಯ ಬಾಲ ಸುರಕ್ಷಾ ಇಲಾಖೆಯ ಚಿಹ್ನೆ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಪೋಟೋ ಅಂಟಿಸಿ ಆಂಧ್ರದಿಂದ ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ. ಚಿತ್ತೂರು ಮೂಲದ ಕುಮಾರ್ (34), ಶಿವಪ್ರಕಾಶ್ (35), ಪ್ರಕಾಶ್ ರಾವ್ (32) ಎಂಬವರನ್ನು ಉತ್ತರ ವಿಭಾಗದ ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ.

103 ಕೆ.ಜಿ ಗಾಂಜಾ ಜಪ್ತಿ:
ಫೆಬ್ರವರಿ 2 ರಂದು ಸಂಜಯ್ ನಗರದ ಪಾರ್ಕ್ವೊಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುಮಾರ್ನ್ನು ಬಂಧಿಸಲಾಗಿತ್ತು. ಇನ್ನೂ ಕುಮಾರ್ ವಿಚಾರಣೆ ವೇಳೆ ಇತರೆ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದನು. ಈ ಮಾಹಿತಿಯ ಮೇರೆಗೆ ಬಳ್ಳಾರಿ ಮುಖ್ಯ ರಸ್ತೆಯ ಸಿಬಿಐ ಬಸ್ ನಿಲ್ದಾಣದ ಸಮೀಪದಲ್ಲಿ ನಿಂತಿದ್ದ ಶಿವ ಪ್ರಕಾಶ್ ಮತ್ತು ಪ್ರಕಾಶ್ ರಾವ್ನನ್ನು ಪೊಲೀಸರು ಬಂಧಿಸಿದ್ದಾರೆ. ಬುಲೆರೋ ಜೀಪ್ನಲ್ಲಿ ಸಂಗ್ರಹಿಸಿಟ್ಟಿದ್ದ 103 ಕೆ.ಜಿ. ಗಾಂಜಾ ಸೊಪ್ಪನ್ನು ಜಪ್ತಿ ಮಾಡಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಪ್ರಭಾವಿ ವ್ಯಕ್ತಿಯೊಬ್ಬ ಆರೋಪಿಗಳನ್ನು ಬಳಸಿಕೊಂಡು ಕರ್ನಾಟಕ, ತಮಿಳುನಾಡಿಗೆ ನಿರಂತರವಾಗಿ ಗಾಂಜಾ ಪೂರೈಕೆ ಮಾಡುವುದು ತನಿಖೆಯಲ್ಲಿ ತಿಳಿದು ಬಂದಿದೆ. ಆತನಿಗಾಗಿ ಶೋಧ ಮುಂದುವರೆದಿದೆ ಎಂದು ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: Crime: ಐಷರಾಮಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ನಾಲ್ವರು ಅರೆಸ್ಟ್