Hijab Row: ಫೆ.20: ಸಿಂಧೂರ, ಹಿಜಾಬ್ ಎರಡೂ ನಮ್ಮ “ಸಂಸ್ಕೃತಿ ಮತ್ತು ನಂಬಿಕೆ”. ಕುಂಕುಮ ಇಡುವುದರಿಂದ – ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಇಲ್ಲ. ರಾಜ್ಯದಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಯಾರದೋ ಷಡ್ಯಂತ್ರಕ್ಕೆ ನಮ್ಮ ಸಂಸ್ಕೃತಿ ಮತ್ತು ನಂಬಿಕೆಗಳು ಬಲಿಯಾಗಬಾರದು.ಕೇಸರಿ ಶಾಲನ್ನು ಅಮಾನವೀಯ, ದ್ವೇಷ ಹರಡುವ ಕಾರಣಗಳಿಗೆ ಬಳಸಬಾರದು ಎಂದು ಹೇಳಿದ್ದಾರೆ.

ಕೇಸರಿ “ತ್ಯಾಗದ ಸಂಕೇತ”, ಅದನ್ನು ದ್ವೇಷ ಸಾಧನೆಗೆ ಬಳಸುವುದೇ “ಧರ್ಮ ದ್ರೋಹ”.ಎಳೆಯ ಮಕ್ಕಳಲ್ಲಿ ದ್ವೇಷ ತುಂಬುವವರು “ಜೀವ ವಿರೋಧಿಗಳು”.ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ – ಭಕ್ತಿ ಇರುತ್ತಿತ್ತು.ಅಂದೂ ಬಿಜೆಪಿ ದೇಶದ ಪರ ಇರಲಿಲ್ಲ, ಇಂದೂ ಇಲ್ಲ.
ದೇಶಪ್ರೇಮದ ನಾಟಕವಾಡುವ ಬಿಜೆಪಿಯವರಿಗೆ ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ಯಾವುದು ನಿಮ್ಮ ಆಯ್ಕೆ ಎಂಬ ಪ್ರಶ್ನೆಯನ್ನು ಇಟ್ಟಿದ್ದೆವು.”ಬಿಜೆಪಿಗೆ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯವಾದಂತಿದೆ”.

ಈ ಘಟನೆಯಿಂದ ಬಿಜೆಪಿಯ ದೇಶಪ್ರೇಮದ ಹಿಂದಿರುವ ಸ್ವಾರ್ಥದ ಮುಖವಾಡ ಬಯಲಾಗಿದೆ.ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ.
“ಹುತಾತ್ಮರ ತ್ಯಾಗ ವ್ಯರ್ಥವಾಗಲು ನಾವು ಬಿಡಲ್ಲ”.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನಸಲ್ಲಿ ದೇಶ ಪ್ರೇಮ, ದೇಶದ ಬಗ್ಗೆ ಗೌರವವಿದ್ದರೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ತಕ್ಷಣ ವಜಾಗೊಳಿಸಿ, ಅಧಿಕಾರಕ್ಕಿಂತ ದೇಶ ಮೊದಲು ಎಂದು ಸಾಬೀತು ಮಾಡಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.