Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

D K Shivakumar:ಪಾಲಿಕೆ ಕಚೇರಿಗೆ ಬಿಜೆಪಿ ಕಚೇರಿ ಎಂದು ಬೋರ್ಡ್‌ ಹಾಕಿಕೊಳ್ಳಿ: ಡಿ.ಕೆ ಶಿವಕುಮಾರ್‌ ತಿರುಗೇಟು

Secular TVbySecular TV
A A
Reading Time: 1 min read
D.K Shivakumar: ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ:ಡಿ ಕೆ ಶಿವಕುಮಾರ್
0
SHARES
Share to WhatsappShare on FacebookShare on Twitter

D K Shivakumar: (ಮಾ.1): ರಾಜ್ಯದ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು. ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಜನರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಹೇಳಿದರು.

ನಮ್ಮ ಪಾದಯಾತ್ರೆ ಈಗ ಬೆಂಗಳೂರು ನಗರ ಪ್ರವೇಶಿಸಿದೆ. ಪೊಲೀಸ್ ಅಧಿಕಾರಿಗಳು, ಪಾಲಿಕೆ ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳು ನಮ್ಮ ಬ್ಯಾನರ್ ಕಿತ್ತು ಹಾಕಿದ್ದಾರೆ. ನಮ್ಮ ಕೆಲ ನಾಯಕರು ಅದನ್ನು ತಡೆದಿದ್ದಾರೆ.ನಮ್ಮ ಬ್ಯಾನರ್ ತೆಗೆಸಲು ಪ್ರಯತ್ನ ಮಾಡಿದರೆ, ನಮ್ಮ ಕಾರ್ಯಕರ್ತರಿಗೆ ಹೇಳಿ ಯಡಿಯೂರಪ್ಪನವರಿಂದ ಹಿಡಿದು ಬೇರೆ ಬಿಜೆಪಿ ನಾಯಕರವರೆಗೂ ಅವರ ಬ್ಯಾನರ್ ಗಳನ್ನು ಕಿತ್ತು ಹಾಕಿಸುತ್ತೇವೆ.

ಕಾನೂನು ಎಲ್ಲರಿಗೂ ಒಂದೇ. ಒಬ್ಬರಿಗೆ ಒಂದು, ಮತ್ತೊಬ್ಬರಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ. ಆದರೂ ನಮ್ಮ ವಿರುದ್ಧ ರಾಜಕೀಯ ದ್ವೇಷದಿಂದ ಈ ಹೋರಾಟ ಮಾಡಬಾರದು ಎಂದು ನಿರ್ಬಂಧ ಹಾಕಿ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಅವರಿಗೆ ಕಾನೂನು ಅನ್ವಯವಾಗುವುದಿಲ್ಲವೇ

ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪನವರ ಹುಟ್ಟುಹಬ್ಬ, ಅಶ್ವತ್ಥ್ ನಾರಾಯಣ, ಸೋಮಣ್ಣನವರ ಹುಟ್ಟುಹಬ್ಬ, ಬೊಮ್ಮನಹಳ್ಳಿಯಲ್ಲಿ ಸಿಎಂ ಕಾರ್ಯಕ್ರಮ ಆಯೋಜಿಸಿ ಬ್ಯಾನರ್ ಹಾಕಿದ್ದಾರೆ. ಇವರಿಗೆಲ್ಲ ಅನುಮತಿ ಕೊಟ್ಟವರು ಯಾರು? ಅವರಿಗೆ ಕಾನೂನು ಅನ್ವಯ ಆಗುವುದಿಲ್ಲವೇ?

ಗೌರವ್ ಗುಪ್ತಾ ಅವರೇ ಪಾಲಿಕೆ ಕಚೇರಿಗೆ ಬಿಜೆಪಿ ಕಚೇರಿ ಎಂದು ಬೋರ್ಡ್ ಹಾಕಿಕೊಳ್ಳಿ. ಆಗ ನಾವು ಬಿಜೆಪಿ ಕಚೇರಿ ಎಂದು ಸಂತೋಷ ಪಡುತ್ತೇವೆ.

ನಮ್ಮ ಕಾರ್ಯಕರ್ತರು ಬ್ಯಾನರ್ ಗಳನ್ನು ಒಂದು ದಿನ ಹಾಕಿ ನಂತರ ಅದನ್ನು ಬಿಚ್ಚಿ ಹಾಕುತ್ತಾರೆ. ನಾವು ಬಲೂನ್ ಮೂಲಕ ಆಕಾಶದಲ್ಲಿ ಬ್ಯಾನರ್ ಹಾರಿಸುತ್ತಿದ್ದು, ಅದನ್ನು ತಡೆಯಲು ನಿಮ್ಮಿಂದ ಸಾಧ್ಯವಿಲ್ಲ.ನಮ್ಮ ಆಚಾರ, ವಿಚಾರ, ಪ್ರಚಾರ ಮಾಡಲು ನಾವು ಇವುಗಳನ್ನು ಹಾಕಿದ್ದೇವೆ.ಹೋರ್ಡಿಂಗ್ ವಿಚಾರವಾಗಿ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ನೀತಿ ರೂಪಿಸಲು ನಿಮ್ಮಿಂದ ಆಗಿಲ್ಲ ಎಂದು ಹೇಳಿದರು.

ನಾನು ಬೆಂಗಳೂರು ಜನರ ಕ್ಷಮೆ ಕೇಳಲು ಬಯಸುತ್ತೇನೆ. ಮುಂದಿನ 3 ದಿನ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ. ಈ ಹೋರಾಟದಿಂದ ಮುಂದಿನ 50 ವರ್ಷ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ನೀವು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ.

ನಾವು ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಎಲ್ಲರೂ ಈ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇನೆ.ಪಾದಯಾತ್ರೆಗೆ ಅಪಾರ್ಟ್ಮೆಂಟ್ ಸಂಘ, ಕೈಗಾರಿಕೆ, ಕಾರ್ಖಾನೆ ಸಂಘಗಳು ಎಲ್ಲರೂ ಪಕ್ಷಭೇಧ ಮರೆತು ಆಗಮಿಸಿದ್ದಾರೆ. ಎಲ್ಲ ಸಹಕಾರ ಕೊಟ್ಟಿದ್ದಾರೆ.

ಮಾರ್ಚ್‌ 3ರಂದು ಬಸವನಗುಡಿ ನ್ಯಾಷಿನಲ್‌ ಕಾಲೇಜು ಮೈದಾನದಲ್ಲಿ ಸಭೆ

ಟೀಕೆ ಮಾಡುವವರ ಟೀಕೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಿದ್ದೇವೆ.ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಲು ಸಹಕಾರ ನೀಡಬೇಕು ಎಂದು ಐದು ದಿನಗಳ ಪಾದಯಾತ್ರೆಯನ್ನು, 3 ದಿನಗಳಿಗೆ ಇಳಿಸಿದ್ದೇವೆ.

ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು ಮನವಿ ಮಾಡುತ್ತೇನೆ.

ನಿನ್ನೆ ಪಾದಯಾತ್ರೆಗೆ ಮುರುಘಾಮಠದ ಶ್ರೀಗಳು ಹಾಗೂ ಇತರ ಶ್ರೀಗಳು ಆಗಮಿಸಿ ಬೆಂಬಲ ನೀಡಿ ಆಶೀರ್ವಾದ ಮಾಡಿದರು.ವಿಶೇಷವಾಗಿ ಮುರುಘಾಮಠದ ಶ್ರೀಗಳು ಹಾಗೂ ಅವರ ಶ್ರೀಗಳಿಗೆ ಅಭಿನಂದನೆಗಳು.

ಮಾರ್ಚ್ 3ರಂದು ಅಂತಿಮ ದಿನ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಎಲ್ಲರಿಗೂ ಅವಕಾಶ ಇದ್ದು, ರಾಜ್ಯದ ಮೂಲೆ ಮೂಲೆಯಿಂದ ಎಲ್ಲರೂ ಪಾದಯಾತ್ರೆಗೆ ಬಂದು ಹೆಜ್ಜೆ ಹಾಕಬಹುದು. ಅಂದು ಅರಮನೆ ಮೈದಾನದಿಂದ ಪಾದಯಾತ್ರೆ ನಡೆಯಲಿದೆ.

ನಮ್ಮ ಹೋರಾಟ ನಿಲ್ಲಿಸುವುದೇ ಮುಖ್ಯ ಗುರಿ

ಕಾಂಗ್ರೆಸ್ ಹೋರಾಟದಿಂದ ಸುಪ್ರೀಂಕೋರ್ಟ್ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆ ಯಾಗಲಿದೆ ಎಂಬ ಗೋವಿಂದ ಕಾರಜೋಳ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾವು ಜಲಸಂಪನ್ಮೂಲ ಸಚಿವರಾಗಿದ್ದು, ನಮಗೂ ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ ಅವರು ತಮ್ಮ ಅಧಿಕಾರಿಗಳನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಿ.

ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ. ಆದರೆ ನಮಗೆ ಮಹಾತ್ಮಾ ಗಾಂಧೀಜಿ ಅವರು ಅಹಿಂಸಾ ಮಾರ್ಗದ ಹೋರಾಟ ಹೇಳಿಕೊಟ್ಟಿದ್ದು ಅದು ನಮ್ಮ ರಕ್ತದ ಕಣಗಳಲ್ಲೇ ಬಂದಿದೆ’ ಎಂದು ತಿರುಗೇಟು ನೀಡಿದರು.

ಕೋವಿಡ್ ನಿರ್ಬಂಧ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಆದೇಶ ಮಾಡಿದ್ದರೂ ರಾಜ್ಯ ಸರ್ಕಾರ ಅದನ್ನು ಪಾಲಿಸದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಬಿಜೆಪಿಯವರಿಗೆ ರಾಜಕಾರಣ ಮುಖ್ಯ. ನಮ್ಮ ಹೋರಾಟ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ ಅಧಿಸೂಚನೆ ನಾವು ರಾಜಕೀಯ ಸಮಾವೇಶ ಮಾಡುವಂತಿಲ್ಲ ಎಂದು ಕೊಟ್ಟಿದ್ದಾರೆ. ಅವರು ಶಿವಮೊಗ್ಗದಲ್ಲಿ ಮೆರವಣಿಗೆ ಮಾಡಲಿಲ್ಲವೇ? ಬಜರಂಗದಲದವರು ಹಾಗೂ ಬಿಜೆಪಿಯವರು ಟೌನ್ ಹಾಲ್ ಬಳಿ ಯಾಕೆ ಸಮಾವೇಶ ಮಾಡಿದರು?

ಇಂದು ಬೊಮ್ಮನಹಳ್ಳಿಯಲ್ಲಿ ಕ್ರೀಡಾಂಗಣ ಉದ್ಘಾಟನೆ ಮಾಡುತ್ತಿರುವುದೇಕೆ? ನಮಗೆ ಮಾತ್ರ ಈ ನಿರ್ಬಂಧ ಯಾಕೆ? ಈ ಕೇಸ್, ಜೈಲಿಗೆಲ್ಲ ನಾವು ಹೆದರುವುದಿಲ್ಲ. ರಾಜ್ಯದಲ್ಲಿ ಅವರು ಏನೆಲ್ಲಾ ಮಾಡಿದ್ದಾರೆ ಎಂದು ಕಾರ್ಯಕರ್ತರಿಂದ ಪಟ್ಟಿ ತರಿಸಿ ಅವರ ಮುಂದೆ ಇಡುತ್ತೇನೆ. ಈ ವಿಚಾರವಾಗಿಯೇ ಹೋರಾಟ ಮಾಡುತ್ತೇವೆ. ಪೊಲೀಸ್ ಅಧಿಕಾರಿಗಳು ಸಮವಸ್ತ್ರ ತೆಗೆದು ಬಿಜೆಪಿಯವರ ಬಟ್ಟೆ ತೊಟ್ಟುಕೊಳ್ಳಲಿ.

ಪೊಲೀಸ್ ಅಧಿಕಾರಿಗಳು ಒಂದು ವಿಚಾರ ಗಮನದಲ್ಲಿಟ್ಟುಕೊಳ್ಳಲಿ, ಸೂರ್ಯ ಹುಟ್ಟುತ್ತಾನೆ ಮುಳುಗುತ್ತಾನೆ, ಇವರುಗಳು ಯಾರೂ ಶಾಶ್ವತವಾಗಿ ಇರುವುದಿಲ್ಲ. ನಮಗೆ ತೊಂದರೆ ನೀಡುತ್ತಿರುವ ಪೋಲೀಸರ ಪಟ್ಟಿ ನಮ್ಮ ಬಳಿ ಇದೆ. ಸಮಯ ಬಂದಾಗ ಉತ್ತರ ನೀಡುತ್ತೇನೆ. ನಮಗೆ ತೊಂದರೆ ನೀಡಬೇಕು ಅಂತಲೇ ಕೇಸ್ ದಾಖಲಿಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ಕೇವಲ 40 ಜನ ಮಾತ್ರ ಭಾಗವಹಿಸಿದ್ದೇವೆಯೇ? ಭಾಗವಹಿಸಿರುವ ಎಲ್ಲ 10 ಸಾವಿರ ಜನರ ಪಟ್ಟಿ ನೀಡುತ್ತೇವೆ ಕೇಸ್ ದಾಖಲಿಸಲಿ’ ಎಂದು ಎಚ್ಚರಿಸಿದರು.

ಶಿವಮೊಗ್ಗದಲ್ಲಿ ಸ್ಥಳೀಯ ಶಾಸಕರಾದ ಕಾರಣ ಈಶ್ವರಪ್ಪ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದರು ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಅವರ ಸಮರ್ಥನೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆತ ಗೃಹ ಸಚಿವ ಸ್ಥಾನಕ್ಕೆ ಅನರ್ಹ. ಅವರು ಸ್ಥಳೀಯ ಶಾಸಕರಾಗಿದ್ದರೆ ನೇರವಾಗಿ ಅವರ ಮನೆಗೆ ಹೋಗಿ ಸಾಂತ್ವಾನ ಹೇಳಬೇಕು. ನಿಷೇಧಾಜ್ಞೆ ಇದ್ದರೂ ಮೆರವಣಿಗೆ ಮಾಡಿದ್ದೇಕೆ. ಎಲ್ಲ ಗಲಭೆಗೂ ಅವರೇ ಕಾರಣ’ ಎಂದರು.

ಹತ್ಯೆಯಾದ ಹರ್ಷ ಮನೆಗೆ ಕಾಂಗ್ರೆಸ್ ನಾಯಕರು ಹೋಗಿಲ್ಲ ಎಂಬ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ‘ನಾವು ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ನಮ್ಮ ಜಿಲ್ಲಾಧ್ಯಕ್ಷರ ಜತೆ ಮಾತನಾಡಿದ್ದೇನೆ. ಈ ಎಲ್ಲ ಹೋರಾಟ ಮುಗಿದ ಬಳಿಕ ನಾನೂ ಕೂಡ ಆ ಯುವಕನ ಮನೆಗೆ ಹೋಗಿ ಭೇಟಿ ನೀಡುತ್ತೇನೆ. ಆತನು ನಮ್ಮ ಹುಡುಗ, ತಪ್ಪುಗಳಾಗಿರಬಹುದು ಆದರೆ ಯಾರೂ ಯಾರನ್ನು ಹತ್ಯೆ ಮಾಡಬಾರದು. ಕಾನೂನಿನಲ್ಲಿ ಅದಕ್ಕೆ ಅವಕಾಶ ಇಲ್ಲ. ನಾವು ಅದನ್ನು ಖಂಡಿಸುತ್ತೇವೆ’ ಎಂದರು.

ಡಿ.ಕೆ. ಶಿವಕುಮಾರ ಪಾದಯಾತ್ರೆ ಮೂಲಕ ಅವರ ಅಕ್ರಮ ಹಣವನ್ನು ಪ್ರದರ್ಶಿಸುತ್ತಿದ್ದಾರೆ, ಬಿರಿಯಾನಿ ತಿಂದು ಪಾದಯಾತ್ರೆ ಮಾಡುವುದು ಯಾವ ಹೋರಾಟ ಎಂಬ ಶ್ರೀನಿವಾಸ ಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ‘ನಾನು ಶ್ರೀನಿವಾಸ್ ಪ್ರಸಾದ್ ಅವರ ಬಳಿ ಹೋಗಿ ಅವರ ಹಿತವಚನ ಕೇಳಿ, ಕಳಿತುಕೊಳ್ಳುತ್ತೇನೆ’ ಎಂದರು.

ಬೆಳ್ತಂಗಡಿಯಲ್ಲಿ ಹತ್ಯೆಯಾದ ದಲಿತ ಯುವಕನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಹತ್ಯೆಯಾದ ಯುವಕನ ಮನೆಗೆ ಹೋಗುವುದಿರಲಿ, ಸರಿಯಾಗಿ ಪ್ರಕರಣ ದಾಖಲಿಸಿ ಕ್ರಮವನ್ನೇ ಕೈಗೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪೊಲೀಸರು ಖಾಕಿ ಸಮವಸ್ತ್ರ ತ್ಯಜಿಸಿ ಬಿಜೆಪಿ ಬಟ್ಟೆ ಧರಿಸಲಿ’ ಎಂದರು.

ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು ನಿಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಬಿಜೆಪಿಯವರು ಪೊಲೀಸ್ ಅವರನ್ನಾದರೂ ನಿಯೋಜಿಸಲಿ, ಕಾರ್ಯಕರ್ತರನ್ನಾದರೂ ನಿಯೋಜಿಸಲಿ. ನಾವು ಶಾಂತಿ ಪ್ರಿಯರು, ನೀರಿಗಾಗಿ ಹೆಜ್ಜೆ ಹಾಕುತ್ತಿದ್ದು. ಅವರ ಕರ್ತವ್ಯ ಅವರು ಮಾಡಲಿ ನಮ್ಮ ಅಭ್ಯಂತರವಿಲ್ಲ’ ಎಂದರು.

ಇದನ್ನು ಓದಿ: Mekedatu Padayathre 2.0: ನೀರಿಗಾಗಿ ಹೋರಾಟ ಮಾಡ್ತಿರೋದು. ಯಾರ ಹೆದರಿಕೆಗೋ ಜಗ್ಗಲ್ಲ: ಸಿದ್ದರಾಮಯ್ಯ

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
James: ಜೇ‌ಮ್ಸ್‌ ಚಿತ್ರದ ʼಟ್ರೇಡ್‌ಮಾರ್ಕ್ʼ ಲಿರಿಕಲ್‌ ಹಾಡು ಬಿಡುಗಡೆ: ಸಾಂಗ್‌ನಲ್ಲಿ ಅಪ್ಪು ಜೊತೆ ಹೆಜ್ಜೆಹಾಕಿದ್ದಾರೆ ಈ ನಟಿಯರು

James: ಜೇ‌ಮ್ಸ್‌ ಚಿತ್ರದ ʼಟ್ರೇಡ್‌ಮಾರ್ಕ್ʼ ಲಿರಿಕಲ್‌ ಹಾಡು ಬಿಡುಗಡೆ: ಸಾಂಗ್‌ನಲ್ಲಿ ಅಪ್ಪು ಜೊತೆ ಹೆಜ್ಜೆಹಾಕಿದ್ದಾರೆ ಈ ನಟಿಯರು

Bantar Gebang residents ask for increase in 'smelly money'

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist