Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Karnataka Budget 2022 -23 Live: ಸಿಎಂ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್‌ ಮಂಡನೆ

Secular TVbySecular TV
A A
Reading Time: 2 mins read
Karnataka Budget 2022: ಮುಖ್ಯ ಮಂತ್ರಿಯವರ ಚೊಚ್ಚಲ ಕರ್ನಾಟಕ ಬಜೆಟ್!  ಬಜೆಟ್ ನಲ್ಲಿ ಜನರಿಗಿರುವ  ನಿರೀಕ್ಷೆಗಳೇನು?
0
SHARES
Share to WhatsappShare on FacebookShare on Twitter
Karnataka Budget 2022-23 Live

Karnataka Budget 2022- 23 Live: (ಮಾ.4) ಬಂದರು ಅಭಿವೃದ್ಧಿಗೆ 1,800 ಅನುದಾನ: ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ಮೀಸಲಿಡಲಾಗುವುದು.  250 ಕೋಟಿರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿ್ರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

_____________

ಗ್ರಾಮೀಣ ರಸ್ತೆಗಳ ಸುಧಾರಣೆಗೆ ₹1,600 ಕೋಟಿ

2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು.  ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ₹1,600 ಕೋಟಿ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ ₹300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ ₹188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

_________________

ಕೃಷಿ ಜಮೀನು ಡ್ರೋನ್ ಸರ್ವೆಗೆ ₹287 ಕೋಟಿ ಅನುದಾನ ಘೋಷಣೆ.

ಪೋಲಿಸ್‌ ಗೃಹ ಯೋಜನೆಗೆ 250 ಕೋಟಿ ರೂ ಅನುದಾನ

ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.  2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.  ರಾಜ್ಯದಲ್ಲಿ ನೂತನ KSRP ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು,  1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.  ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ.

_____________

ನೋಂದಣಿ ಕಚೇರಿಗಳ ಉನ್ನತೀಕರಣಕ್ಕೆ ₹406 ಕೋಟಿ,10 ಮಹಾನಗರ ಪಾಲಿಕೆ ವ್ಯಾಪ್ತಿಯ ದಾಖಲೆ ಸ್ಕ್ಯಾನಿಂಗ್​ಗಾಗಿ 15 ಕೋಟಿ ರೂಪಾಯಿ ಮೀಸಲು. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗಲಗಳ ಸ್ವಾಯತ್ತತೆ ಹಾಗೂ ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ.

ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಇಲಾಖೆಗಳಿಗೆ 6,329 ಕೋಟಿ

ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ವಲಯಕ್ಕೆ 55,657 ಕೋಟಿ ಅನುದಾನ ಬೆಂಗಳೂರು ಸಮಗ್ರ ಅಭಿವೃದ್ಧಿ ಗೆ,8,409 ಕೋಟಿ ಅನುದಾನ ನೀಡಲಾಗಿದೆ.  ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 3,012 ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವಾ ವಲಯಕ್ಕೆ 56,710 ಕೋಟಿ ಸೇರಿದಂತೆ  ಒಟ್ಟು 5 ವಲಯವಾರು ವಿಂಗಡಣೆಯ ಬಜೆಟ್ ಘೋಷಣೆ ಮಾಡಿದ್ದಾರೆ.

__________

ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ

ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು ಇಟ್ಟಿದ್ದು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ.

ರಿಯಾಯಿತಿ ಬಸ್ ಪಾಸ್ ಯೋಜನೆ, ಹುಬ್ಬಳ್ಳಿ & ದಾವಣಗೆರೆ ESI ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ  ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಕಾಶಿಯಾತ್ರೆ ಕೈಗೊಳ್ಳುವವರಿಗೆ ₹5 ಸಾವಿರ ಸಹಾಯಧನ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ,ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ ಮಾಡಲಾಗುವುದು.

ಬೀದರ್, ಕಲಬುರಗಿ ಕೋಟೆಗಳು ಪುನರುಜ್ಜೀವನ ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ, ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ , ಮೊದಲ ಹಂತದಲ್ಲಿ 45 ಕೋಟಿ ರೂಪಾಯಿ, 

_______________

ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಕ್ಷೇತ್ರಗಳಿಗೆ ಅನುದಾನ ಘೋಷಿಸಿದ್ದಾರೆ. ಆಹಾರ ಇಲಾಖೆಗೆ – 2,288 ಕೋಟಿ ರೂ,  ವಸತಿ ಇಲಾಖೆಗೆ – 3,594 ಕೋಟಿ ರೂಪಾಯಿ ಅನುದಾನ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ,ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ,  ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ ,  ಶಿಕ್ಷಣ ಇಲಾಖೆ – 31,980 ಕೋಟಿ ರೂಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಅನುದಾನ ಘೋಷಣೆ ಮಾಡಿದ್ದಾರೆ.

______________

2,53,165 ಕೋಟಿ ರೂಗಳ ಬಜೆಟ್​ ಮಂಡಿಸಲಿದ್ದಾರೆ ಸಿಎಂ ಬಸವರಾಜ್‌ ಬೊಮ್ಮಾಯಿ. ರಾಜ್ಯದ ಅಭಿವೃದ್ಧಿಗಾಗಿ ಪಂಚಸೂತ್ರಗಳನ್ನು ಹಾಕಿಕೊಂಡಿದ್ದು ಬಜೆಟ್‌ ವಿಂಗಡನೆ ಮಾಡಿದ್ದಾರೆ. ಇದರಲ್ಲಿ ಕೃಷಿಗೆ – 33,700 ಕೋಟಿ. -ಬೆಂಗಳೂರು ಅಭಿವೃದ್ಧಿಗೆ – 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆ- 3,102 ಕೋಟಿ ಆದ್ಯತೆ ನೀಡಿ ಅನುದಾನ ಘೋಷಿಸಿದ್ದಾರೆ.

______________

ಕರ್ನಾಟಕ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ.  ಬಜೆಟ್ ಫೈಲ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ.ಬಜೆಟ್​ ಮಂಡನೆಗೂ ಮೊದಲು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ

______________

ಜೆಟ್ ಮೂಲಕ ಪ್ರಚಾರ: ಮೊದಲ ಬಾರಿಗೆ ಜೆಟ್ ಮೂಲಕ ಬಜೆಟ್ ಪ್ರಚಾರ ಮಾಡಿದ್ದಾರೆ.ವಿಧಾನ ಸೌಧ ಸುತ್ತ ಜೆಟ್​ ಅನ್ನು ರೌಂಡ್ಸ್ ಹಾಕಿದ್ದಾರೆ. ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕುಟುಂ ಸದಸ್ಯರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

______________

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ (Budget)​ ಮಂಡಿಸಲಿದ್ದಾರೆ. ಚೊಚ್ಚಲ ಬಜೆಟ್‌ ಮಂಡಿಸಲಿರುವ ಸಿಎಂ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಜೆಟ್ ಪ್ರತಿ ಹಸ್ತಾಂತರ ಮಾಡಿದ್ದಾರೆ. ರೇಸ್ ಕೋರ್ಸ್ ನಿವಾಸದಲ್ಲಿ 2022-23ನೇ ಸಾಲಿನ ಬಜೆಟ್ ಪುಸ್ತಕ ಪ್ರತಿ ಹಸ್ತಾಂತರ ಮಾಡಿದ್ದಾರೆ. ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರು ನೀಡಿದ್ದಾರೆ. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಉಪಸ್ಥಿತರಿದ್ದರು.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post

Romantic or casual, 8 restaurants to celebrate Valentine's

Karnataka Budget 2022-23 Highlights:ಕರ್ನಾಟದ ಬಜೆಟ್‌ನ ಪ್ರಮುಖ ಅಂಶಗಳು:ಯಾವೆಲ್ಲ ಇಲಾಖೆಗೆ ಸಿಕ್ಕಿದೆ ಅನುದಾನ

Karnataka Budget 2022-23 Highlights:ಕರ್ನಾಟದ ಬಜೆಟ್‌ನ ಪ್ರಮುಖ ಅಂಶಗಳು:ಯಾವೆಲ್ಲ ಇಲಾಖೆಗೆ ಸಿಕ್ಕಿದೆ ಅನುದಾನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist