ಬೆಂಗಳೂರು : (ಜು.8): Bakrid:ಬಕ್ರೀದ್ ಹಬ್ಬ ಆಚರಣೆ ಹಿನ್ನಲೆ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರತಿ ಏರಿಯಾಗಳಿಗೆ ಪೊಲೀಸರು ತೆರಳಿ ಬಕ್ರೀದ್ ಹಬ್ಬ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅನೌನ್ಸ್ ಮಾಡುತ್ತಿದ್ದಾರೆ.ಬಕ್ರೀದ್ ಹಬ್ಬ ಆಚರಣೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸರು ತಿಳಿಸಿಕೊಡುತ್ತಿದ್ದಾರೆ.
ನಗರದ ಹೆಚ್. ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಇನ್ನೂ ಸರ್ಕಾರ ಈಗಾಗ್ಲೇ ಬಕ್ರೀದ್ ಹಬ್ಬ ಆಚರಣೆ ಬಗ್ಗೆ ಸುತ್ತೋಲೆ ಹೊರಡಿಸಿದೆ.

ಬಕ್ರೀದ್ ಹಬ್ಬದ ದಿನ ಕೋವಿಡ್ -19 ಮಾರ್ಗ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ (ಪ್ರಾಣಿ ಬಲಿದಾನ) ಮಾಡಬೇಕು.
ಖುರ್ಬಾನಿ ಮಾಡುವಾಗ ಸಾರ್ವಜನಿಕ ಪ್ರದೇಶ,ರಸ್ತೆಗಳು ,ಶಾಲಾ ಕಾಲೇಜು ,ಆಸ್ಪತ್ರೆ ಆವರಣ ,ಉದ್ಯಾನ ನಿಷೇಧಿಸಲಾಗಿದೆ.
ಜಿಲ್ಲಾಡಳಿತ ,ಸ್ಥಳೀಯ ಆಡಳಿತ ಸಂಸ್ಥೆಯ ನಿಗಧಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ಮಾಡುವಂತೆ ತಿಳಿಸಲಾಗಿದೆ.
ಪೊಲೀಸ್ ಇಲಾಖೆ,ಪಶು ಪಾಲನಾ ,ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.