Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Secular Tv Top Stories : ಮೇಘ ಸ್ಫೋಟ, 16 ಮಂದಿ ಸಾವು | ಆಫ್ರಿಕಾದಲ್ಲಿ ಮತ್ತೊಂದು ಹೊಸ ವೈರಸ್..!

Secular TVbySecular TV
A A
Reading Time: 3 mins read
Secular Tv Top Stories : ಮೇಘ ಸ್ಫೋಟ, 16 ಮಂದಿ ಸಾವು | ಆಫ್ರಿಕಾದಲ್ಲಿ ಮತ್ತೊಂದು ಹೊಸ ವೈರಸ್..!
0
SHARES
Share to WhatsappShare on FacebookShare on Twitter

ಮೇಘ ಸ್ಫೋಟ, 13 ಮಂದಿ ಸಾವು

ಜಮ್ಮು ಕಾಶ್ಮೀರದ (Jammu and Kashmir) ಅಮರನಾಥ (Amarnath) ಬಳಿಯ ಪವಿತ್ರವಾದ ಗುಹೆಯೊಂದರ ಬಳಿ ಸಂಭವಿಸಿದ್ದ ಮೇಘ ಸ್ಫೋಟದಲ್ಲಿ (Amarnath Yatra cloudburst) 16 (16 Die in Amarnath Tragedy) ಮಂದಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ 48ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು (Poilice) ಮಾಹಿತಿ ನೀಡಿದ್ದಾರೆ. ಇನ್ನು ಗಾಯಾಳುಗಳಿಗೆ ಗುಹೆಯ ಅಕ್ಕ-ಪಕ್ಕದಲ್ಲೇ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ. ಒಟ್ಟು 6 ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳು ಒಬ್ಬೊಬ್ಬರಾಗಿ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು (Docters) ಮಾಹಿತಿ ನೀಡಿದ್ದಾರೆ.


ಐದು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇಂದು ಐದು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅತಿ ಹೆಚ್ಚು ಮಳೆಯಾಗುತ್ತಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಸಹ ರಜೆ ಮುಂದುವರಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಮತ್ತು ಕೊಡುಗು ಜಿಲ್ಲೆಗಳಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.


ಆಫ್ರಿಕಾದಲ್ಲಿ ಮತ್ತೊಂದು ಹೊಸ ವೈರಸ್!

ಕೋವಿಡ್ ವೈರಸ್‌ನಿಂದ ಜಗತ್ತು ತತ್ತರಿಸುತ್ತಿದೆ. ಈ ಬೆನ್ನಲ್ಲೇ ಹೊಸ ವೈರಸ್ ಕಾಣಿಸಿಕೊಂಡಿದೆ. ಹೌದು, ಆಫ್ರಿಕಾದಲ್ಲಿ ‘ಮಾರ್ಬರ್ಗ್’ ಎಂಬ ವೈರಸ್ ಕಾಣಿಸಿಕೊಂಡು ತಲ್ಲಣ ಸೃಷ್ಟಿಸುತ್ತಿದೆ. ಘಾನಾದಲ್ಲಿ ಇತ್ತೀಚೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಎಚ್ಚೆತ್ತ ವಿಶ್ವ ಆರೋಗ್ಯ ಸಂಸ್ಥೆ 34 ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಆದೇಶಿಸಿದೆ. (WHO) ಡಬ್ಲ್ಯೂಎಚ್ಓ ಪ್ರಕಾರ ಎಬೋಲಾ ಕುಟುಂಬಕ್ಕೆ ಸೇರಿದ ಮಾರ್ಬರ್ಗ್ ವೈರಸ್ ಶೇ.88ರಷ್ಟು ಮಾರಕವಾಗಿದ್ದು, ಮುಖ್ಯವಾಗಿ ಬಾವಲಿಗಳಿಂದ ಮನುಷ್ಯರಿಗೆ ಹರಡಲಿದೆ.


ಶಿಂಜೋ ಅಬೆ ಗೌರವಾರ್ಥ ಶೋಕಾಚರಣೆ

ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನರಾಗಿದ್ದಾರೆ. ಭಾರತದೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಅಬೆ ಅವರಿಗೆ ಗೌರವ ಸೂಚಿಸಲು ಇಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಶಿಂಜೋಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಜಪಾನ್ ಭೇಟಿ ವೇಳೆ ಶಿಂಜೋ ಅಬೆ ಅವರನ್ನು ಮತ್ತೊಮ್ಮೆ ಭೇಟಿಯಾಗಿ, ಚರ್ಚೆ ನಡೆಸಲು ಅವಕಾಶ ಸಿಕ್ಕಿತ್ತು. ಅದು ನಮ್ಮ ಕೊನೆಯ ಸಭೆ ಎಂದು ನಾನು ಭಾವಿಸಿರಲಿಲ್ಲ. ಅವರು ಬುದ್ಧಿವಂತ ವ್ಯಕ್ತಿ’ ಎಂದು ಟ್ವಿಟ್ ಮಾಡಿದ್ದಾರೆ. ಅಲ್ಲದೇ, ಶಿಂಜೋ ಅವರಿಗೆ ಗೌರವ ಸಂಕೇತವಾಗಿ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ.


ಟ್ವಿಟರ್ ಖರೀದಿ ಒಪ್ಪಂದ ರದ್ದು!

ಖ್ಯಾತ ಉದ್ಯಮಿ ಎಲಾನ್ ಮಸ್ಕ್ ದೃಢ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಟ್ವಿಟರ್ ಖರೀದಿಸುವ ಒಪ್ಪಂದವನ್ನು ಕೈಬಿಟ್ಟಿದ್ದಾರೆ. ಟ್ವಿಟರ್ ಸಂಸ್ಥೆಯು ಖರೀದಿ ಒಪ್ಪಂದವನ್ನು ಉಲ್ಲಂಘಿಸಿದೆ. ಅಲ್ಲದೆ ಕೇಳಿದ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಈ ಕಾರಣದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟೆಸ್ಲಾ ಸಂಸ್ಥೆಯು ಟ್ವಿಟರ್‌ಗೆ ಪತ್ರ ಬರೆದಿದೆ. ಮಸ್ತ್ ಒಟ್ಟು 44 ಬಿಲಿಯನ್ ಡಾಲರ್‌ಗಳಿಗೆ ಟ್ವಿಟ್ಟ‌ರ್ ಅನ್ನು ಖರೀದಿಸುವುದಾಗಿ ಕಳೆದ ಏಪ್ರಿಲ್‌ನಲ್ಲಿ ಘೋಷಿಸಿದ್ದರು.


ಪ್ರಧಾನಿ ಹುದ್ದೆಗೆ ಸ್ಪರ್ಧೆ ಘೋಷಿಸಿದ ಸುನಾಕ್!

ಇಂಗ್ಲೆಂಡ್ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ರಿಷಿ ಸುನಾಕ್ ಹೆಸರು ಪ್ರಧಾನಿ ಹುದ್ದೆಗೆ ಕೇಳಿಬರುತ್ತಿದೆ. ಈಗ ಸ್ವತಃ ರಿಷಿ ಸುನಾಕ್ ‘ನಾನು ಕನ್ಸರ್ವೇಟಿವ್ ಪಕ್ಷದ ಮುಂದಿನ ನಾಯಕ ಮತ್ತು ನಿಮ್ಮ ಪ್ರಧಾನಿಯಾಗಲು ಇಚ್ಛಿಸಿದ್ದೇನೆ’ ಎಂದು ರಿಷಿ ಸುನಾಕ್ ಪ್ರಕಟಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ನಂಬಿಕೆಯನ್ನು ಮರುಸ್ಥಾಪಿಸೋಣ, ಆರ್ಥಿಕತೆಯನ್ನು ಪುನರ್ ನಿರ್ಮಿಸೋಣ ಮತ್ತು ದೇಶವನ್ನು ಮತ್ತೆ ಒಗ್ಗೂಡಿಸೋಣ ಎಂದು ಹೇಳಿದ್ದಾರೆ.


2023ರ ಚುನಾವಣೆ ನನ್ನ ಕೊನೆಯ ಚುನಾವಣೆ

ರಾಜಕೀಯ ನಿವೃತ್ತಿ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಹತ್ವ ಹೇಳಿಕೆ ನೀಡಿದ್ದಾರೆ. 2023ರ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ. ಬಳಿಕ ರಾಜಕೀಯ ನಿವೃತ್ತ ಹೊಂದಿ, ಬೇರೆಯವರಿಗೆ ಅವಕಾಶ ನೀಡುತ್ತೇನೆ ಎಂದು ವಿಪಕ್ಷ ನಾಯಕ ಘೋಷಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ನಡೆಯುವ ಸಿದ್ದರಾಮೋತ್ಸವಕ್ಕೆ ಎಲ್ಲರೂ ಬರಬೇಕು ಎಂದು ಆಹ್ವಾನ ನೀಡಿದ್ದಾರೆ.


ಜುಲೈ 30ರಂದು ಡಿಕೆಶಿ ಹಣೆಬರಹ ಡಿಸೈಡ್

ಜುಲೈ 30ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣೆಬರಹ ಡಿಸೈಡ್ ಆಗಲಿದೆ. ಯಾಕೆಂದರೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಇ.ಡಿ ವಿಶೇಷ ನ್ಯಾಯಾಲಯ ಜುಲೈ 30ಕ್ಕೆ ನಡೆಸಲಿದೆ. ಈ ಹಿಂದೆಯೂ ಡಿಕೆಶಿಗೆ ಜಾಮೀನು ನೀಡಿರುವುದು ದೆಹಲಿ ಹೈಕೋರ್ಟ್ ಹೊರೆತು, ಇ.ಡಿ ವಿಶೇಷ ನ್ಯಾಯಾಲಯವಲ್ಲ. ಸದ್ಯ 30 ರಂದು ಅರ್ಜಿ ವಿಚಾರಣೆ ನಂತರ, ಇ.ಡಿ ವಿಶೇಷ ನ್ಯಾಯಾಲಯ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಡಿಕೆಶಿಯ ಮುಂದಿನ ರಾಜಕೀಯ ಭವಿಷ್ಯ ನಿಂತಿರೋದು ಸುಳ್ಳಲ್ಲ.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Mohammed Zubair : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕನಿ​ಗೆ ಮತ್ತೊಂದು ಸಂಕಷ್ಟ..

Mohammed Zubair : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕನಿ​ಗೆ ಮತ್ತೊಂದು ಸಂಕಷ್ಟ..

Lalu Prasad Yadav health update : ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಚೇತರಿಕೆ ; ಲಾಲು ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸೋನಿಯಾ ಗಾಂಧಿ

Lalu Prasad Yadav health update : ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಚೇತರಿಕೆ ; ಲಾಲು ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸೋನಿಯಾ ಗಾಂಧಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist