Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Central Govt bans PFI : ಪಿಎಫ್ಐ ನಿಷೇಧ : ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ..!

Secular TVbySecular TV
A A
Reading Time: 2 mins read
Central Govt bans PFI : ಪಿಎಫ್ಐ ನಿಷೇಧ : ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ..!

Sri Rama Sene founder Pramod Muthalik reaction on PFI ban

0
SHARES
Share to WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರವು (Central Government) ತಕ್ಷಣದಿಂದಲೇ ಜಾರಿಗೆ ಬರುವಂತೆ PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳಿಗೆ ಅಂಕುಶ ಹಾಕಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ (PFI Ban by Central government) ಮಹತ್ವದ ಆದೇಶ ಹೊರಡಿಸಿದೆ. ಪಿಎಫ್ಐ ಸಂಘಟನೆ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ (Sri Rama Sene founder) ಪ್ರಮೋದ್ ಮುತಾಲಿಕ್ (Sri Rama Sene founder Pramod Muthalik) ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಮೋದ್ ಮುತಾಲಿಕ್, ಶ್ರೀರಾಮಸೇನೆ ಮುಖ್ಯಸ್ಥ (Sri Rama Sene founder Pramod Muthalik)

ಹೌದು, ಧಾರವಾಡದಲ್ಲಿ ಪ್ರಮೋದ್ ಮುತಾಲಿಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಮೋದ್ ಮುತಾಲಿಕ್‌ ಖುಷ್​

ಕೇಂದ್ರ ಸರ್ಕಾರವು (Central Government) ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಅಂಗಸಂಸ್ಥೆಗಳನ್ನು (PFI Ban by Central government) ನಿಷೇಧಿಸಿದೆ. ಈ ಬಗ್ಗೆ ಪ್ರಮೋದ್‌ ಮುತಾಲಿಕ್ ಫುಲ್ ಖುಷ್ ಆಗಿದ್ದಾರೆ. ‘ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : Police Raid : Hubli PFI Workers Arrest : ಹುಬ್ಬಳ್ಳಿಯಲ್ಲಿ ಎಸ್‌ಡಿಪಿಐ, ಪಿಎಫ್‌ಐ ಮುಖಂಡರು ಪೊಲೀಸ್ ವಶ

ಕೇಂದ್ರ ತಡವಾಗಿ ಬ್ಯಾನ್ ಮಾಡಿದ್ರೂ..!

ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್‌ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಮೋದ್ ಮುತಾಲಿಕ್, ಶ್ರೀರಾಮಸೇನೆ ಮುಖ್ಯಸ್ಥ (Sri Rama Sene founder Pramod Muthalik)

ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಲಿ

ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು ಎಂದು ಪರೋಕ್ಷವಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ : ಎನ್ಐಎ ತಲಾಶ್ : PFI ಕಚೇರಿಗಳ ಮೇಲೆ NIA ದಾಳಿ ; 100ಕ್ಕೂ ಅಧಿಕ ಕಾರ್ಯಕರ್ತರು ವಶಕ್ಕೆ ; ಮಂಗಳೂರಿನಲ್ಲಿ ಪ್ರತಿಭಟನೆ

ಮುಸ್ಲಿಂ ಮುಖಂಡರ ಬಗ್ಗೆ ಸಾಫ್‌ ಕಾರ್ನರ್

ಮುಮದುವರಿದು ಮಾತನಾಡಿರುವ ಮುತಾಲಿಕ್ ಮುಸ್ಲಿಂ ಮುಖಂಡರಿಗೆ ಕೆಲವು ಸಲಹೆ ನೀಡಿದ್ದಾರೆ. ‘ಈ ದೇಶಕ್ಕೆ ಇವರು(ಮುಸ್ಲಿಂ ಸಮುದಾಯ) ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು’ ಎಂದು ಪ್ರಮೋದ್ ಮುತಾಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಪಿಎಫ್​ಐನ ಅಂಗ ಸಂಸ್ಥೆಗಳಿಗೂ ಶಾಕ್​..

ಪಿಎಫ್​ಐನ ಅಂಗ ಸಂಸ್ಥೆಗಳಿಗೂ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಪಿಎಫ್‌ಐ (PFI)ನ ಕೆಲವು ಸಂಸ್ಥಾಪಕ ಸದಸ್ಯರು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ನಾಯಕರು ಮತ್ತು PFI ಜಮಾತ್-ಉಲ್-ಮುಜಾಹಿದ್ದೀನ್​ ಬಾಂಗ್ಲಾದೇಶ (JMB) ನೊಂದಿಗೆ ಸಂಪರ್ಕವನ್ನು ಹೊಂದಿದೆ. ಇವೆರಡೂ ನಿಷೇಧಿತ ಸಂಘಟನೆಗಳಾಗಿವೆ ಎಂದು ಕೇಂದ್ರವು ತನ್ನ ಅಧಿಸೂಚನೆಯಲ್ಲಿ ಹೇಳಿದೆ.

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
PFI Ban in india : ಪಿಎಫ್‌ಐ ನಿಷೇಧ : ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ ಖಾದರ್

PFI Ban in india : ಪಿಎಫ್‌ಐ ನಿಷೇಧ : ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು ಎಂದ ಯು.ಟಿ ಖಾದರ್

Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ ‘ನಮ್ಮ ಸಿಂಹ’ ಬಿಡಲ್ಲ ಎಂದ ಈಶ್ವರಪ್ಪ

Central Govt bans PFI : ಪಿಎಫ್ಐ ಬ್ಯಾನ್ ಬಗ್ಗೆ ಸಿದ್ರಾಮಯ್ಯಗೆ ಅಂದೇ ತಿಳಿಸಿದ್ದೆ : ಬೇರೆ ಹೆಸರಿನಲ್ಲಿ ಪಿಎಫ್ಐ ಬಂದ್ರೆ 'ನಮ್ಮ ಸಿಂಹ' ಬಿಡಲ್ಲ ಎಂದ ಈಶ್ವರಪ್ಪ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist