ಬೆಂಗಳೂರು(ನ. ): ಊಟ ಮುಗಿದಿದೆ ಎಂದ ಕಾರಣಕ್ಕೆ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಯುವಕರ ಗುಂಪೊಂದು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ರೆಸ್ಟೋರೆಂಟ್ವೊಂದರಲ್ಲಿ ಇದೇ ತಿಂಗಳ 20ರಂದು ಘಟನೆ ನಡೆದಿದೆ.
ರಾತ್ರಿ 11.30ರ ಸುಮಾರಿಗೆ 15ರಿಂದ 20 ಜನರ ಗುಂಪು ರೆಸ್ಟೋರೆಂಟ್ಗೆ ಬಂದು ಊಟಕ್ಕೆ ಆರ್ಡರ್ ಮಾಡಿದ್ದಾರೆ. ಆದ್ರೆ ರೆಸ್ಟೋರೆಂಟ್ ಕ್ಲೊಸಿಂಗ್ ಸಮಯವಾಗಿದ್ದು, ಊಟ ಸಿದ್ಧಪಡಿಸಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಕುಡಿದಿದ್ದ ಯವಕರ ಗುಂಪು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಾರೆ. ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಯವಕರ ಗುಂಪು ಹಲ್ಲೆ ಮಾಡಿರುವ ದೃಶ್ಯ ಅಲ್ಲಿಯೇ ಇದ್ದ ಗ್ರಾಹಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಅಲ್ಲದೇ, ಈ ಘಟನೆ ದಿನವೇ ರೆಸ್ಟೋರೆಂಟ್ನವರು ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಕ್ರಮ ಕೈಗೊಂಡಿಲ್ಲಾ ಎಂಬ ಮಾತುಗಳು ಕೇಳಿ ಬಂದಿವೆ. ಯುವಕರ ಗುಂಪಿನಲ್ಲಿ ಪ್ರಭಾವಿ ನಾಯಕರೊಬ್ಬರ ಮಗ ಇದ್ದ ಎಂದು ಹೇಳಲಾಗಿದೆ.
ಡಿಸಿಪಿ ಸಿ.ಕೆ ಬಾಬಾ ಪ್ರತಿಕ್ರಿಯೆ
ಇನ್ನೂ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ, ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಅಲ್ಲದೇ, ಆರೋಪಿಗಳ ಈಗಾಗಲೇ ಗುರುತು ಪತ್ತೆಯಾಗಿದೆ. ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಲಾಗುವುದು. ಯಾರೇ ಆದರೂ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.