ಬೆಂಗಳೂರು: ಎಐಸಿಸಿ (ಕಾಂಗ್ರೆಸ್) ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿ, ಅಮಿತ್ ಶಾರಂತಹ ನೂರು ಮಂದಿ ಬಂದು ನಾವು ಎದರುವುದಿಲ್ಲ. 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರು ಹಲವಾರು ಬಾರಿ ದೇಶ ಒಪ್ಪಿಕೊಂಡ ಏಕೈಕ ನಾಯಕ ನಾನಾಗಿದ್ದು, ಬೇರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ಎಂದು ಹೇಳಿದ್ದಾರೆ. ಯಾವುದೇ ಪ್ರಜಾಪ್ರಭುತ್ವವಾದಿ ಹೀಗೆ ಹೇಳುವುದಿಲ್ಲ ಎಂದು ನರೇಂದ್ರ ಮೋದಿ ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ಇದನ್ನೂ ಓದಿ: CT Ravi : ಸಿ.ಟಿ ರವಿ ಮಹಾ ಎಡವಟ್ಟು, ಮಾಂಸ ತಿಂದು ಹನುಮ ದೇವಸ್ಥಾನ ಪ್ರವೇಶ?
ನೀವು ಸರ್ವಾಧಿಕಾರಿ ಅಲ್ಲ, ಜನರಿಂದ ಆಯ್ಕೆಯಾಗಿದ್ದೀರಿ..!
ನೀವು ಸರ್ವಾಧಿಕಾರಿ ಅಲ್ಲ, ನೀವು ಜನರಿಂದ ಆಯ್ಕೆಯಾಗಿದ್ದೀರಿ ಮತ್ತು ಜನರು ನಿಮಗೆ ಪಾಠ ಕಲಿಸುತ್ತಾರೆ. ದೇಶವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುವ ವ್ಯಕ್ತಿ ತಾನೊಬ್ಬನೇ, ಬೇರೆ ಯಾರಿಗೂ ನನ್ನ ಜಾಗಕ್ಕೆ ತಲುಪಲು ಸಾಧ್ಯವಿಲ್ಲ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಅವರ ಎಲ್ಲಾ ನಂಬಿಕೆಗಳು ಬುಡಮೇಲಾಗಲಿದೆ ಎಂದು ಹೇಳಿದ್ದಾರೆ.
ನೀವು ನಿರಂಕುಶಾಧಿಕಾರಿ ಅಲ್ಲ

ಭಾರತವು ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿದ್ದು, ನೀವು ನಿರಂಕುಶಾಧಿಕಾರಿ ಅಲ್ಲ. ಇದನ್ನು ಪ್ರಧಾನಿ ಮೋದಿ ಅವರಿಗೆ ನಾವು ಮನವರಿಕೆ ಮಾಡಿಕೊಡುತ್ತೇವೆ. ಪ್ರಧಾನಿ ಮೋದಿ ಅವರ ಸರ್ವಾಧಿಕಾರಿ ವರ್ತನೆಗೆ ಈ ದೇಶದ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದಿದ್ದಾರೆ.
ಬಿಜೆಪಿ ಅಧಿಕಾರದಿಂದ ತೊಲಗಬೇಕು
ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಒಂದಾಗಲೇಬೇಕು. ಈ ಮಹಾಮೈತ್ರಿಕೂಟಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕತ್ವ ನೀಡಲಿದೆ. ದೇಶದಲ್ಲಿ ಸಮಾನತೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಬೇಕಾದರೆ, ಬಿಜೆಪಿ ಅಧಿಕಾರದಿಂದ ತೊಲಗಬೇಕು ಎಂದು ಕರೆ ಕೊಟ್ಟಿದ್ದಾರೆ.