ಬೆಂಗಳೂರು: ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕಡೆ ಕೋರ್ಟ್ನಲ್ಲಿ ಕೇಸ್ ಎದುರಿಸುತ್ತಿದ್ದ ಸಲ್ಮಾನ್ ಖಾನ್ ಅವರು ಮತ್ತೊಂದು ಕಡೆ ಇದೇ ಪ್ರಕರಣದಿಂದ ಜೀವ ಬೆದರಿಕೆ ಎದುರಿಸುತ್ತಿದ್ದಾರೆ.
ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್ ರೂಪಿಸಿದ್ದ. ‘ರೆಡಿ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ಕೊಲ್ಲಲು ಪ್ರಯತ್ನ ನಡೆದಿತ್ತು. ಸಲ್ಲುನ ಕೊಲ್ಲಲು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮೊದಲಿನಿಂದಲೂ ಸಂಚು ರೂಪಿಸುತ್ತಲೇ ಇದ್ದಾನೆ. ಈಗ ಸಲ್ಮಾನ್ ಖಾನ್ನ ಕೊಂದೇ ತೀರುವುದಾಗಿ ಮತ್ತೊಮ್ಮೆ ಹೇಳಿದ್ದಾನೆ. ಈ ಹೇಳಿಕೆಯಿಂದ ಸಲ್ಲುಗೆ ಮತ್ತೆ ಆತಂಕ ಶುರುವಾಗಿದೆ. ಪಂಜಾಬ್ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ, ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಈ ಬೆದರಿಕೆ ಕರೆ ಬಂದಿದ್ದು. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಹೊಸದಾಗಿ ಬುಲೆಟ್ ಫ್ರೂಪ್ ಕಾರ್ ಅನ್ನು ಖರೀದಿಸಿದ್ದರು. ಹಾಗೂ ಬಾಡಿಗಾರ್ಡ್ಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ವಿವಿಧ ಕಾರ್ಯಕ್ರಮಗಳಲ್ಲೂ ಭಾಗಿಯಾಗಿರಲಿಲ್ಲ. ಟೈಗರ್ 3 ಚಿತ್ರೀಕರಣಕ್ಕೂ ಅವರು ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡೇ ಹೋಗುತ್ತಿದ್ದರು.

ಶೂಟಿಂಗ್ಗಾಗಿ ಸಲ್ಲು ರಾಜಸ್ಥಾನದ ಜೋಧ್ಪುರಕ್ಕೆ ಹೋಗಿದ್ದರು. ಸಫಾರಿಗೆ ಹೋದಾಗ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್ನ ಬಿಷ್ಣೋಯ್ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು 2011ರಲ್ಲಿ ಲಾರೆನ್ಸ್ ಪ್ರಯತ್ನ ಪಟಿದ್ದ ಆದರೆ ಆ ಪ್ರಯತ್ನ ವಿಪಲವಾಗಿತ್ತು. ಈಗ ಸಲ್ಲುನ ಕೊಲೆ ಮಾಡುವುದೇ ಜೀವನದ ಪರಮಗುರಿ ಎಂದು ಹೇಳಿದ್ದಾನೆ.
ಎಬಿಪಿ ನ್ಯೂಸ್ಗೆ ಸಂದರ್ಶನ ನಿಡುವಾಗ ‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಹಾಗೂ ಬಿಕಾನೇರ್ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿಯೇ ತಪ್ಪಾಯಿತು ಎಂದು ಹೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆ’ ಎಂದು ಹೇಳಿದ್ದಾನೆ.