Secular TV
Saturday, May 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

Secular TVbySecular TV
A A
Reading Time: 2 mins read
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
0
SHARES
Share to WhatsappShare on FacebookShare on Twitter

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಡಗು ಸೋಲಿನ ಸುಳಿಗೆ ಸಿಲುಕಲಿರುವುದನ್ನು ಅರಿತ ಬಿಜೆಪಿ ಸರ್ಕಾರ ಈಗ ರಾಜ್ಯದ ಬಹುತೇಕ ಸಮುದಾಯಗಳಿಗೆ ಮೀಸಲಾತಿ ಹೆಸರಲ್ಲಿ ದ್ರೋಹ, ವಂಚನೆ, ಮೋಸ ಮಾಡುವ ರಣನೀತಿ ರೂಪಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ

75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದಿಗೂ ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮಿಸಲಾತಿ ವರ್ಗೀಕರಣವನ್ನು ಮೂರು ಬಾರಿ ಬದಲಾವಣೆ ಮಾಡಿರಲಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ಎಲ್ಲರನ್ನು ವಂಚಿಸಿ, ಎಲ್ಲರನ್ನು ಒಡೆದು, ಎಲ್ಲ ಸಮುದಾಯಗಳನ್ನು ಪರಸ್ಪರ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದೆ.

ಈ ರೀತಿ ಮಾಡಿದಾಗ ಮೀಸಲಾತಿ ಬೇಡಿಕೆ ವಿಚಾರವಾಗಿ ಕೂಗು ಹೆಚ್ಚಾಗಿ ಜನರು ಈ ಸರ್ಕಾರದ ಲೂಟಿ, ಹಗರಣಗಳನ್ನು ಮರೆಸುವಂತೆ ಮಾಡುತ್ತದೆ. ಆ ಮೂಲಕ ಸರ್ಕಾರ 40% ಕಮಿಷನ್ ಸರ್ಕಾರ ಎಂಬ ಕಳಂಕದಿಂದ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ.

ಈ ಎಲ್ಲದರಿಂದಾಗಿ BJP ಪಕ್ಷ ಈಗ ‘BETRAYAL JANATA PARTY’ ಅಂದರೆ ದ್ರೋಹ ಬಗೆಯುವ ಜನತಾ ಪಕ್ಷವಾಗಿದೆ.

ಸತ್ಯಾಂಶಗಳು:

  1. ಕಳೆದ 90 ದಿನಗಳಲ್ಲಿ ಬಿಜೆಪಿ ಸರ್ಕಾರ ಮೀಸಲಾತಿ ವರ್ಗೀಕರಣವನ್ನು ಮೂರು ಬಾರಿ ಬದಲಿಸಿದೆ. ಇದು ವಿವಿಧ ಸಮುದಾಗಳಿಗೆ ಬಿಜೆಪಿ ಸರ್ಕಾರ ಚುನಾವಣಾ ಸಮಯದಲ್ಲಿ ಮಾಡುತ್ತಿರುವ ಅಪ್ರಮಾಣಿಕತೆ ಹಾಗೂ ವಂಚನೆಗೆ ಸಾಕ್ಷಿಯಾಗಿದೆ. ಸಮಾಜದಲ್ಲಿ ಸಮುದಾಯಗಳ ನಡುವೆ ಜನರು ಪರಸ್ಪರ ಕಚ್ಚಾಡುವಂತೆ ಮಾಡಿ, ಒಡೆದು ಆಳುವ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ವಿಚಾರವಾಗಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿ ನಾಲ್ಕು ವರ್ಷವಾದರೂ ಇದನ್ನು ಜಾರಿಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಲಿಲ್ಲ. ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಈ ವಿಚಾರವಾಗಿ ಆಗ್ರಹ ಮಾಡುವವರೆಗೂ ಈ ವಿಚಾರವಾಗಿ ಸರ್ಕಾರ ನಿದ್ರೆಗೆ ಜಾರಿತ್ತು.

• ಡಿಸೆಂಬರ್ 26, 2022ರಂದು ಬೊಮ್ಮಾಯಿ ಅವರ ಸರ್ಕಾರ ಬಲವಂತವಾಗಿ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ, ಪರಿಶಿಶ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸಿ ಕಾನೂನು ಜಾರಿಗೊಳಿಸಿತು.

ಇದರೊಂದಿಗೆ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.56ಕ್ಕೆ ವಿಸ್ತರಣೆಯಾಯಿತು. ಈ ಕಾನೂನು ಮಾನ್ಯತೆ ಪಡೆಯಬೇಕಾದರೆ ಇದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸಬೇಕು. ಅಥವಾ ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿ ಮಿತಿಯನ್ನು ಶೇ.50ರಿಂದ ವಿಸ್ತರಣೆ ಮಾಡಬೇಕು. ಇದ್ಯಾವುದನ್ನು ಮಾಡಿಲ್ಲ. ಮತ್ತೊಂದೆಡೆ ಈ ಮೀಸಲಾತಿ ಏರಿಕೆಯ ಸರ್ಕಾರದ ನಿರ್ಧಾರವನ್ನು ಕರ್ನಾಟರ ರಾಜ್ಯ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.

• ಡಿಸೆಂಬರ್ 29, 2022ರಂದು ಬೊಮ್ಮಾಯಿ ಅವರ ಸರ್ಕಾರ ಮತ್ತೊಮ್ಮೆ ಮೀಸಲಾತಿ ವರ್ಗೀಕರಣ ಬದಲಿಸಿ, 3A ವರ್ಗದಲ್ಲಿದ್ದ ಒಕ್ಕಲಿಗರು ಹಾಗೂ ಇತರ ಸಮುದಾಯಗಳನ್ನು 2C ಎಂಬ ಹೊಸ ವರ್ಗೀಕರಣಕ್ಕೆ ಸೇರಿಸಿ, 3B ವರ್ಗೀಕರಣದಲ್ಲಿದ್ದ ಲಿಂಗಾಯತರು ಹಾಗೂ ಇತರ ಸಮುದಾಯಗಳನ್ನು 2D ಎಂಬ ಹೊಸ ವರ್ಗೀಕರಣಕ್ಕೆ ಸೇರಿಸಿತ್ತು. ಸರ್ಕಾರದ ಈ ಮೀಸಲಾತಿ ಮರುವರ್ಗೀಕರಣವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.

• ಮಾರ್ಚ್ 24, 2023 ರಂದು ಬಿಜೆಪಿ ಸರ್ಕಾರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ತನ್ನ ಕೊನೆಯ ಸಚಿವ ಸಂಪುಟದಲ್ಲಿ ಮಗದೊಮ್ಮೆ ಮೀಸಲಾತಿ ವರ್ಗೀಕರಣ ಬದಲಿಸಿದೆ. ಆಮೂಲಕ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟುವ ಪ್ರಯತ್ನಕ್ಕೆ ಮುಂದಾಗಿದೆ.

  1. ಪಂಚಮಸಾಲಿ ಲಂಗಾಯತ ಸಮುದಾಯ ತಮ್ಮ ಮೀಸಲಾತಿ ಪ್ರಮಾಣವನ್ನು ಶೇ.15ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸುತ್ತಿತ್ತು. ಆದರೆ ಬೊಮ್ಮಾಯಿ ಅವರ ಸರ್ಕಾರ ಕೇವಲ ಶೇ.2ರಷ್ಟು ಮಾತ್ರ ಏರಿಕೆ ಮಾಡಿದೆ. ಇದಕ್ಕೆ ಈ ಸಮುದಾಯದ ನಾಯಕರು ಹಾಗೂ ಸ್ವಾಮೀಜಿಗಳು ನಿರಾಸೆ ವ್ಯಕ್ತಪಡಿಸಿದ್ದಾರೆ.

ಇನ್ನು ಒಕ್ಕಲಿಗ ಸಮುದಾಯವು ಶೇ.12ರಷ್ಟು ಮೀಸಲಾತಿಗೆ ಆಗ್ರಹ ಮಾಡಿತ್ತು. ಆದರೆ ಬೊಮ್ಮಾಯಿ ಸರ್ಕಾರ ಕೊಟ್ಟಿದ್ದು ಕೇವಲ ಶೇ.2ರಷ್ಟು ಮಾತ್ರ.

ಇನ್ನು ದಶಕಗಳಷ್ಟು ಹಳೆಯದಾದ ಮುಸಲ್ಮಾನರ ಶೇ.4ರಷ್ಟು ಮೀಸಲಾತಿಯನ್ನು ಸಂಪೂರ್ಣವಾಗಿ ಕಸಿಯಲಾಗಿದೆ. ಇದರಿಂದ ಅಲ್ಪಸಖ್ಯಾತ ಸಮುದಾಯಕ್ಕೆ ದೊಡ್ಡ ಪ್ರಮಾಣದ ಅನ್ಯಾಯವಾಗಿದೆ.

ಇನ್ನು ಮಾರ್ಚ್ 14, 2023ರಂದು ಮೋದಿ ಸರ್ಕಾರ ಸಂಸತ್ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಗಳ ಮೀಸಲಾತಿ ಹೆಚ್ಚಳದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಬಿಜೆಪಿ ಮಾಡಿರುವ ಮಹಾದ್ರೋಹಕ್ಕೆ ದಲಿತ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಆಮೂಲಕ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯಗಳ ಮೀಸಲಾತಿ ಪ್ರಸ್ತಾವನೆ ತಿರಸ್ಕಾರದಿಂದ ನಿರಾಸೆಗೊಂಡಿವೆ. ಇದು ಬೊಮ್ಮಾಯಿ ಅವರ ಸರ್ಕಾರ ಸಮುದಾಯಗಳ ನಡುವೆ ಕಿಚ್ಚು ಹಚ್ಚುವ ಪ್ರಯತ್ನವಾಗಿದೆ.

  1. ಬೊಮ್ಮಾಯಿ ಸರ್ಕಾರ ಪದೇ ಪದೆ ಮೀಸಲಾತಿ ವರ್ಗೀಕರಣ ಮಾಡಿದರೂ ಇದ್ಯಾವುದೂ ಸಾಂವಿಧಾನಿಕ ಮಾನ್ಯತೆ ಪಡೆದಿಲ್ಲ. ಆಮೂಲಕ ಈ ಮೀಸಲಾತಿಗಳು ಊರ್ಜಿತವಾಗುವುದಿಲ್ಲ. ಹೀಗಾಗಿ ಬೊಮ್ಮಾಯಿ ಅವರ ಸರ್ಕಾರ ಈ ವಿಚಾರದಲ್ಲಿ ಜನರಿಗೆ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ.

• ಸದ್ಯ ಸುಪ್ರೀ ಕೋರ್ಟ್ ಇಂದಿರಾ ಶೆಣೈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೀಸಲಾತಿ ಮಿತಿಯನ್ನು ಶೇ.50ಕ್ಕೆ ನಿಗದಿಗೊಳಿಸಿದೆ. ಆದರೆ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗಿದೆ. ಈ ಶೇ.56ರಷ್ಟು ಮೀಸಲಾತಿಯನ್ನು ಸರ್ಕಾರ ಹೇಗೆ ಜಾರಿಗೆ ತರಲಿದೆ?

• ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸದೇ ತನ್ನ ಅಂತಿಮ ವರದಿ ನೀಡಿದೆ. ಬಿಜೆಪಿ ಸರ್ಕಾರ ಬೇಕಂತಲೇ ಸಮೀಕ್ಷೆ ನಡೆಸದೇ ವರದಿ ಸಿದ್ಧಪಡಿಸಿಕೊಂಡಿದೆ. ಆಮೂಲಕ ಮೀಸಲಾತಿ ವಿಚಾರ ಇತ್ಯರ್ಥವಾಗದಿರಲಿ ಎಂದು ತೀರ್ಮಾನಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಸಮುದಾಯಗಳು ಮೀಸಲಾತಿಯ ಲಾಭ ಪಡೆಯುವುದಾದರೂ ಹೇಗೆ?

• ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಆಯೋಗವು ಡಿ.22, 2022ರಂದು ತನ್ನ ಮಧ್ಯಂತರ ವರದಿ ನೀಡಿತ್ತು. ಈ ಮಧ್ಯಂತರ ವರದಿ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಇದೇ ರೀತಿ ಮಹಾರಾಷ್ಟ್ರದ ಹಿಂದುಳಿದ ವರ್ಗಗಳ ಆಯೋಗ ನೀಡಿದ ಮಧ್ಯಂತರ ವರದಿ ಆಧಾರದ ಮೇಲೆ ಮರಾಠಿಗರಿಗೆ ಮೀಸಲಾತಿ ನೀಡಿದಾಗ ಸುಪ್ರೀಂ ಕೋರ್ಟ್ ಅದಕ್ಕೆ ತಡೆ ಹಿಡಿದಿತ್ತು. ಈ ವಿಚಾರ ಗೊತ್ತಿದ್ದರೂ ಮೀಸಲಾತಿ ವರ್ಗೀಕರಣ, ಮರು ವರ್ಗೀಕರಣ ಮಾಡಿ ರಾಜ್ಯಸರ್ಕಾರ ಸಮುದಾಯಗಳ ಜನರ ದಾರಿ ತಪ್ಪಿಸುತ್ತಿರುವುದೇಕೆ?

• ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಲು ಹಾಗೂ ಮೀಸಲು ಮಿತಿಯನ್ನು ಶೇ.50ರಿಂದ ವಿಸ್ತರಣೆ ಮಾಡಲು ಮೋದಿ ಸರ್ಕಾರ ನಿರಾಕರಿಸಿದೆ. ಇನ್ನು ರಾಜ್ಯದ ಮೀಸಲಾತಿ ಹೆಚ್ಚಳದ ಕಾನೂನನ್ನು ಸಂವಿಧಾನದ 9ನೇ ಶೆಡ್ಯುಲ್ ಗೆ ಸೇರಿಸಲು ನಿರಾಕರಿಸಿದೆ. ಈ ಪರಿಸ್ಥಿತಿಯಲ್ಲಿ ಈ ಸಮುದಾಯಗಳು ಸರ್ಕಾರದ ಮೀಸಲಾತಿ ಹೆಚ್ಚಳದ ತೀರ್ಮಾನದಿಂದ ಹೇಗೆ ಪ್ರಯೋಜನ ಪಡೆಯಲಿವೆ?

• ಬೊಮ್ಮಾಯಿ ಅವರ ಸರ್ಕಾರ ಮುಸಲ್ಮಾನ ಅಲ್ಪಸಂಖ್ಯಾತರ ಮೀಸಲಾತಿಯನ್ನು ಆರ್ಥಿಕ ದುರ್ಬಲ ವರ್ಗಕ್ಕೆ (EWS) ನೀಡಲಾಗುವ ಮೀಸಲಾತಿಗೆ ವರ್ಗಾಯಿಸಿರುವುದು ಅಸಂವಿಧಾನಿಕವಾಗಿದೆ. ಈ ವರ್ಗೀಕರಣದಲ್ಲಿ ಆರ್ಥಿಕ ಸ್ಥಿತಿಗತಿ ಮೇಲೆ ಮೀಸಲಾತಿ ನಿಗದಿಯಾಗುತ್ತದೆಯೇ ಹೊತರು, ಜಾತಿ ಹಾಗೂ ಧರ್ಮದ ಆಧಾರದ ಮೇಲೆ ಸಿಗುವುದಿಲ್ಲ. ಈ ವರ್ಗೀಕರಣಕ್ಕೆ ಮುಸಲ್ಮಾನರನ್ನು ವರ್ಗಾವಣೆ ಮಾಡದಿದ್ದರೂ ಈ ಸಮುದಾಯದ ಆರ್ಥಿಕವಾಗಿ ಹಿಂದುಳಿದವರು ಈ ವರ್ಗದಲ್ಲಿ ಮೀಸಲಾತಿ ಪಡೆಯಲಿದ್ದಾರೆ. ಆದರೂ ಬೊಮ್ಮಾಯಿ ಅವರು ಈ ಸಮುದಾಯವನ್ನು ಆರ್ಥಿಕ ಹಿಂದುಳಿದ ವರ್ಗದ ಕೋಟಾಗೆ ಸೇರಿಸುವ ನಾಟಕ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

RECOMMENDED

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

May 20, 2023
ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ  ಒಪ್ಪಿಗೆ ನೀಡಿದ್ದು ಹೇಗೆ?

ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದು ಹೇಗೆ?

May 18, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • ಅಭಿವೃದ್ಧಿಯ ಹರಿಕಾರ ಸರ್ ಮಿರ್ಜಾ ಇಸ್ಮಾಯಿಲ್ ಜೀವನ ಕಥನ

    0 shares
    Share 0 Tweet 0

Related Posts

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ
Just-In

ಸಿಎಂ ಆಗಿ ಸಿದ್ದರಾಮಯ್ಯ , ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ; ಕೆಲ ಗಂಟೆಗಳಲ್ಲೇ 5 ಗ್ಯಾಂರಂಟಿ ಘೋಷಣೆ ಮಾಡಲಿರುವ ಸಿದ್ದು ಸರ್ಕಾರ

May 20, 2023
ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ  ಒಪ್ಪಿಗೆ ನೀಡಿದ್ದು ಹೇಗೆ?
Politics

ಕೊನೆಗೂ ಗೊಂದಲಕ್ಕೆ ಅಂತ್ಯ ಹಾಡಿದ ಹೈಕಮಾಂಡ್‌- ಸಿಎಂ ಆಗಿ ಸಿದ್ದು ಆಯ್ಕೆ- ಹಠ ಹಿಡಿದಿದ್ದ ಡಿಕೆಶಿ ಡಿಸಿಎಂ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದು ಹೇಗೆ?

May 18, 2023
ನನ್ನನ್ನು ಜೈಲಿಗೆ ಹಾಕಿದ್ರೂ ನಾನು ಹೆದರಲ್ಲ : ರಾಹುಲ್ ಗಾಂಧಿ ಕಿಡಿ
Karnataka

ನನ್ನನ್ನು ಜೈಲಿಗೆ ಹಾಕಿದ್ರೂ ನಾನು ಹೆದರಲ್ಲ : ರಾಹುಲ್ ಗಾಂಧಿ ಕಿಡಿ

April 16, 2023
ಪೊಲೀಸರ ಸಮ್ಮುಖದಲ್ಲಿ ಅತಿಕ್ ಅಹ್ಮದ್ ಹತ್ಯೆ: ಪೋಲೀಸ್ ಕಸ್ಟಡಿಯಲ್ಲಿಯೇ ಪೂರ್ವನಿಯೋಜಿತವಾಗಿ ಸಂಚನ್ನು ರೂಪಿಸಿ ಕೊಲ್ಲಲಾಗಿದೆಯೇ?
Crime

ಪೊಲೀಸರ ಸಮ್ಮುಖದಲ್ಲಿ ಅತಿಕ್ ಅಹ್ಮದ್ ಹತ್ಯೆ: ಪೋಲೀಸ್ ಕಸ್ಟಡಿಯಲ್ಲಿಯೇ ಪೂರ್ವನಿಯೋಜಿತವಾಗಿ ಸಂಚನ್ನು ರೂಪಿಸಿ ಕೊಲ್ಲಲಾಗಿದೆಯೇ?

April 16, 2023
Atiq ahmad and ashraf murder: ಪೊಲೀಸ್‌ ಹಾಗೂ ಮಾಧ್ಯಮದ ಸಮ್ಮಖದಲ್ಲೇ ಗುಂಡು ಹಾರಿಸಿ ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರನ ಹತ್ಯೆ
Crime

Atiq ahmad and ashraf murder: ಪೊಲೀಸ್‌ ಹಾಗೂ ಮಾಧ್ಯಮದ ಸಮ್ಮಖದಲ್ಲೇ ಗುಂಡು ಹಾರಿಸಿ ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರನ ಹತ್ಯೆ

April 15, 2023
Ex CM Jagadish Shettar: ಗುಜರಾತ್ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್..!
Just-In

Jagadish Shettar Resign: ಬಿಜೆಪಿಯ ಮತ್ತೊಂದು ವಿಕೆಟ್‌ ಪನತ; ಕಮಲಕ್ಕೆ ಗುಡ್‌ ಬೈ ಹೇಳಿದ ಜಗದೀಶ್‌ ಶೆಟ್ಟರ್

April 15, 2023
Top Stories : ದೇಶದಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಬಲಿಷ್ಠ |ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಆಗಮನ
Just-In

Karnataka Assembly Elections 2023: ಕಾಂಗ್ರೆಸ್‌ ಮೂರನೇ ಪಟ್ಟಿ ರಿಲೀಸ್‌: ಕೋಲಾರಿದಿಂದ ಕೊತ್ತೂರು ಮಂಜುನಾಥ್‌, ಅಥಣಿಯಿಂದ ಸವದಿಗೆ ಟಿಕೆಟ್‌

April 15, 2023
Rajiv Gandhi Assassination Case : ರಾಜೀವ್ ಗಾಂಧಿ ಹತ್ಯೆ ಪ್ರಕರಣ : ಸುಪ್ರೀಂಕೋರ್ಟ್‌ನಿಂದ ಕೇಂದ್ರ-ತಮಿಳುನಾಡು ಸರ್ಕಾರಕ್ಕೆ  ನೋಟಿಸ್​
Just-In

Karnataka Muslim Reservation: ಮುಸ್ಲಿಂ ಮೀಸಲಾತಿ ರದ್ದು: ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್ ಹೇಳಿದ್ದೇನು? ಇಲ್ಲಿದೆ ನೋಡಿ ವಾದ-ಪ್ರತಿವಾದದ ಡಿಟೇಲ್ಸ್‌

April 13, 2023
Next Post
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist